AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್

ಮೊದಲು ಕುಟುಂಬಸ್ಥರು ಇದೇ ಶಾಂತಪ್ಪನ ಶವ ಎಂದು ತಿಳಿಸಿದ್ದರು. ಈಗ ಇದು ಅಲ್ಲ ಅಂತಿದ್ದಾರೆ.ಈ ಬಗ್ಗೆ ಶವ ಶೋಧ ಕಾರ್ಯ ಮುಂದುವರೆದಿದೆ ಎಂದು ಬಾಗಲಕೋಟೆ ಎಸ್​ಪಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ.

ಬಾಗಲಕೋಟೆ: ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್
ಶಾಂತಪ್ಪ ಮತ್ತು ಆತನ ಪತ್ನಿ ಹುಲಗವ್ವ
TV9 Web
| Edited By: |

Updated on: Nov 22, 2021 | 7:46 AM

Share

ಬಾಗಲಕೋಟೆ: ದೊಡ್ಡಮ್ಮನ ಮಗನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ತನ್ನ ಪತಿಯನ್ನೇ(Husband) ಪ್ರಿಯಕರನೊಂದಿಗೆ ಸೇರಿ ಹತ್ಯೆ(Murder) ಮಾಡಿ ನದಿಗೆ ಎಸೆದಿದ್ದ ಪ್ರಕರಣದಲ್ಲಿ ಇದೀಗ ತಿರುವು ಸಿಕ್ಕಿದೆ. ಪತ್ತೆಯಾದ ಶವ ಶಾಂತಪ್ಪನದ್ದು ಅಲ್ಲ ಎಂದು ಸಂಬಂಧಿಕರು ಹೇಳುತ್ತಿದ್ದಾರೆ. ಹೌದು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಮಹಾಂತಪುರ ಗ್ರಾಮದ ಶಾಂತಪ್ಪನ ಶವ ಹುಡುಕಾಟಕ್ಕೆ ಮತ್ತೆ ಪೊಲೀಸರು ಮುಂದಾಗಿದ್ದಾರೆ. ಯಾದಗಿರಿ ಜಿಲ್ಲೆ ಭೀಮರಾಯನಗುಡಿ ಠಾಣೆ ವ್ಯಾಪ್ತಿಯ ಕಾಲುವೆಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಇದುವೇ ಶಾಂತಪ್ಪನ ಶವ ಎನ್ನಲಾಗಿತ್ತು.ಇದೀಗ ಶಾಂತಪ್ಪನ ಸಹೋದರ ಮೂರ್ತೆಪ್ಪ ಶಾಂತಪ್ಪನ ಭಾವಚಿತ್ರ ಕಂಡು ಆತ ರೌಂಡ್ ಟಿ ಶರ್ಟ್ ಧರಿಸಿರಲಿಲ್ಲ. ಜೊತೆಗೆ ಒಳವಸ್ತ್ರ ಬೇರೆ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಶಾಂತಪ್ಪನ ಶವಕ್ಕಾಗಿ ಇದೀಗ ಶೋಧ ಕಾರ್ಯ ಮುಂದುವರೆದಿದೆ.

ತನ್ನ ದೊಡ್ಡಮ್ಮನ ಮಗ ಬಸವರಾಜ ಜೊತೆ ಶಾಂತಪ್ಪ ಮಾದರನ ಪತ್ನಿ ಹುಲಗವ್ವ ಅನೈತಿಕ ಸಂಬಂಧ ಹೊಂದಿದ್ದಳು. ಅನೈತಿಕ ಸಂಬಂಧ ಪ್ರಶ್ನಿಸಿ ಪತಿ ಶಾಂತಪ್ಪ ಪತ್ನಿ ಹುಲಗವ್ವಳಿಗೆ ಎಚ್ಚರಿಕೆ ನೀಡಿದ್ದನು. ಹೀಗಾಗಿ ಪ್ರಿಯಕರನ ಜೊತೆ ಸೇರಿ ಪತಿ ಕೊಲೆಗೆ ಪತ್ನಿ ಸಂಚು ರೂಪಿಸಿದ್ದು, ಪತಿಯನ್ನು ಅಕ್ಟೋಬರ್ 23 ರಂದು ಹತ್ಯೆಗೈದು ಆಲಮಟ್ಟಿ ಜಲಾಶಯದಲ್ಲಿ ಎಸೆದಿದ್ದರು. ಶಾಂತಪ್ಪ ಮಾದರ(45)ನನ್ನು ಕೊಡಲಿಯಿಂದ ಹೊಡೆದು ಕತ್ತು ಹಿಸುಕಿ ಕೊಲೆಗೈದು ಆಲಮಟ್ಟಿ ಜಲಾಶಯದಲ್ಲಿ ಎಸೆದಿದ್ದರು. ಬಳಿಕ ಕಾಣೆಯಾಗಿದ್ದಾನೆ ಎಂದು ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪತ್ನಿ ದೂರು ದಾಖಲಿಸಿದ್ದಳು.

ಇತ್ತೀಚೆಗೆ ಅಪರಿಚಿತ ಶವವೊಂದು ಯಾದಗಿರಿಯ ಭೀಮರಾಯನಗುಡಿ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿತ್ತು. ಅದೇ ಶಾಂತಪ್ಪನ ಶವ ಎಂದು ತಿಳಿಯಲಾಗಿತ್ತು. ಸದ್ಯ ಆ ಶವ ಶಾಂತಪ್ಪನದ್ದಲ್ಲ ಎಂದು ಕುಟುಂಬಸ್ಥರು ಹೇಳಿದ್ದು, ಶವ ಶೋಧ ಕಾರ್ಯ‌ ಮುಂದುವರೆದಿದೆ. ಅಲ್ಲದೇ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಶಾಂತಪ್ಪನ ಹೆಂಡತಿ ಹಾಗೂ ಆಕೆಯ ಪ್ರಿಯಕರ ಸೇರಿ ಒಟ್ಟು ಐವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಶಾಂತಪ್ಪನ ಶವ ಸಿಕ್ಕಿದೆ ಎಂದು ನಿರಾಳರಾಗಿದ್ದ ಪೊಲೀಸರಿಗೆ ಈಗ ಮತ್ತೆ ಶವ ಹುಡುಕಾಟದ ತಲೆಬಿಸಿ ಹೆಚ್ಚಿದೆ.

ಶವ ಗುರುತು ಸಿಗದ ರೀತಿಯಲ್ಲಿ ಕೊಳೆತ ಕಾರಣ ಮೊದಲು ಗೊಂದಲವಾಗಿತ್ತು. ಆದರೆ ಸಿಕ್ಕ ದೇಹದ ಬಟ್ಟೆ ಬೇರೆಯಾಗಿವೆ. ನಮ ಸಹೋದರ ರೌಂಡ್ ಟೀ ಶರ್ಟ್ ಧರಿಸಿರಲಿಲ್ಲ, ಜೊತೆಗೆ ಒಳವಸ್ತ್ರ ಕೂಡ ಬೇರೆ ಇದೆ. ಆದ್ದರಿಂದ ಇದು ನಮ್ಮ ಸಹೋದರನ ಶವ ಅಲ್ಲವೆಂದು ಪೊಲೀಸರಿಗೆ ತಿಳಿಸಿದ್ದೇನೆ ಎಂದು ಮೂರ್ತೆಪ್ಪ ತಿಳಿಸಿದ್ದಾನೆ.

ಇನ್ನು ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಬಾಗಲಕೋಟೆ ಎಸ್​ಪಿ ಲೋಕೇಶ್ ಜಗಲಾಸರ್, ಮೊದಲು ಕುಟುಂಬಸ್ಥರು ಇದೇ ಶಾಂತಪ್ಪನ ಶವ ಎಂದು ತಿಳಿಸಿದ್ದರು. ಈಗ ಇದು ಅಲ್ಲ ಅಂತಿದ್ದಾರೆ.ಈ ಬಗ್ಗೆ ಶವ ಶೋಧ ಕಾರ್ಯ ಮುಂದುವರೆದಿದೆ ಎಂದಿದ್ದಾರೆ.

ಒಟ್ಟಾರೆ ಇಲ್ಲಿ ಶಾಂತಪ್ಪನ ಕೊಲೆ ಮಾಡಿರೋದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.ಆದರೆ ಶವ ಮಾತ್ರ ಶಾಂತಪ್ಪನದ್ದು ಅಲ್ಲ ಎಂದು ಹೇಳುತ್ತಿದ್ದು, ಕೃಷ್ಣಾನದಿಯಲ್ಲಿ ಎಸೆದ ಶವ ಸಿಗುತ್ತೋ ಇಲ್ಲವೋ ಕಾದು ನೋಡಬೇಕು.

ವರದಿ: ರವಿ ಮೂಕಿ

ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೆ ಯತ್ನಿಸಿದ ಪತ್ನಿ, ಪತ್ನಿ-ಪ್ರಿಯಕರ ಅರೆಸ್ಟ್

ಚಿತ್ರದುರ್ಗ: ಕ್ಷುಲ್ಲಕ ವಿಚಾರಕ್ಕೆ 2 ಕುಟುಂಬಗಳ ನಡುವೆ ಜಗಳ; ವ್ಯಕ್ತಿ ಕೊಲೆಯಲ್ಲಿ ಅಂತ್ಯ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​