ಗರ್ಭಪಾತ ದಂಧೆಗೆ ಮಹಿಳೆ ಬಲಿ ಪ್ರಕರಣ; ಮೃತ ಮಹಿಳೆಯ ತಂದೆ, ತಾಯಿ ಅರೆಸ್ಟ್

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಆಯಾ ಕವಿತಾಳ ಗರ್ಭಪಾತ ದಂಧೆಗೆ ಮಹಿಳೆ ಬಲಿಯಾಗಿದ್ದಾಳೆ.ಈ ಘಟನೆ ಸಂಬಂಧ ಮೃತ ಮಹಿಳೆಯ ಅಪ್ಪ-ಅಮ್ಮನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಆರೋಪಿ ಕವಿತಾಳನ್ನು ಕೂಡ ಬಂಧಿಸಿ ಜೈಲಿಗಟ್ಟಲಾಗಿದೆ.

ಗರ್ಭಪಾತ ದಂಧೆಗೆ ಮಹಿಳೆ ಬಲಿ ಪ್ರಕರಣ; ಮೃತ ಮಹಿಳೆಯ ತಂದೆ, ತಾಯಿ ಅರೆಸ್ಟ್
ಬಂಧನ
Edited By: ಆಯೇಷಾ ಬಾನು

Updated on: Jun 01, 2024 | 10:44 AM

ಬಾಗಲಕೋಟೆ, ಜೂನ್.01: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಗರ್ಭಪಾತ ದಂಧೆಗೆ ಮಹಿಳೆ ಬಲಿಯಾದ (Death) ಪ್ರಕರಣಕ್ಕೆ ಸಂಬಂಧಿಸಿ ಮೃತ ಮಹಿಳೆ ಸೋನಾಲಿ ತಂದೆ, ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಗಳ ಗರ್ಭಪಾತಕ್ಕೆ (foeticide) ಪ್ರೇರೇಪಣೆ ಆರೋಪದ ಮೇರೆಗೆ ಸೋನಾಲಿ ತಂದೆ ಸಂಜಯ್ ಗೌಳಿ ಮತ್ತು ತಾಯಿ ಸಂಗೀತಾ ಗೌಳಿ‌ಯನ್ನು ಮಹಾಲಿಂಗಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಗರ್ಭಪಾತಕ್ಕೆ ಕಾರಣರಾದ ಆರೋಪಿ ಕೂಡ ಅರೆಸ್ಟ್

ಇನ್ನು ಗರ್ಭಪಾತ, ಭ್ರೂಣಹತ್ಯೆಗೆ ಕಾರಣಳಾದ ಆರೋಪಿ ಕವಿತಾ ಬಾದನ್ನವರ ಅರೆಸ್ಟ್ ಮಾಡಲಾಗಿದೆ. ಈಕೆ ಖಾಸಗಿ ಆಸ್ಪತ್ರೆಯಲ್ಲಿ ಆಯಾ ಆಗಿ ಕೆಲಸ ಮಾಡುತ್ತಿದ್ದಳು. ಆದರೆ ಈಗ ಗರ್ಭಪಾತ ದಂಧೆ ಮಾಡಿ ಮಹಿಳೆ ಬಲಿ ಪಡೆದು ಜೈಲು ಸೇರಿದ್ದಾಳೆ. ಮಕ್ಕಳ ಹಕ್ಕುಗಳ ರಕ್ಚಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿರುವ ಆರೋಪಿ ಕವಿತಾ ಮನೆಗೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ರು. ಪರಿಶೀಲನೆ ವೇಳೆ, ಕವಿತಾ ಮನೆಯಲ್ಲಿನ ವೈದ್ಯಕೀಯ ಪರಿಕರಗಳು, ಬೆಡ್, ಹ್ಯಾಂಡ್ ಗ್ಲೌಜ್, ಮೆಡಿಷಿನ್ಸ್ ಎಲ್ಲವನ್ನು ಪರಿಶೀಲನೆ‌ ಮಾಡಿದ್ರು. ಈ ವೇಳೆ ಕುಟುಂಬ ಕಲ್ಯಾಣ ಅಧಿಕಾರಿ ಡಿ ಬಿ ಪಟ್ಟಣಶೆಟ್ಟಿ ವಿರುದ್ಧ ಗರಂ ಆದ ಆಯೋಗದ ಸದಸ್ಯ ಶಶಿಧರ ಕೋಸಂಬೆ, ನಿಮ್ಮ ಕರ್ತವ್ಯ ನಿರ್ಲಕ್ಷ್ಯದಿಂದಲೇ ಈ ರೀತಿಯ ದುರ್ಘಟನೆ ಆಗಿದೆ ಎಂದು ಗದರಿದ್ರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 28 ದಿನಗಳಲ್ಲಿ 74,915 ಸಂಚಾರಿ ನಿಯಮ ಉಲ್ಲಂಘನೆ

ಪೊಲೀಸ್ ಅಧಿಕಾರಿಗಳಿಗೆ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ನಿಷ್ಪಕ್ಷಪಾತ ತನಿಖೆ ಮಾಡುವಂತೆ ಪೊಲೀಸರಿಗೆ ಮನವಿ‌ಮಾಡಿದ್ರು. ಪ್ರಕರಣದ ಕುರಿತು ಮಾತನಾಡಿದ ಕೋಸಂಬೆ, ಇದು ನಾಗರಿಕ ತಲೆ ತಗ್ಗಿಸುವ ಘಟನೆ. ಆರೋಪಿ ಕವಿತಾ ಬಗ್ಗೆ ಗಮನಹರಿಸದೇ ಇರೋದು ಮೇಲ್ನೋಟಕ್ಕೆ ಅಧಿಕಾರಿಗಳ‌ ನಿರ್ಲಕ್ಷ್ಯ ಎದ್ದು ಕಾಣ್ತಿದೆ. ಈ ಬಗ್ಗೆ ನಾವು ಸರ್ಕಾರಕ್ಕೆ ವರದಿ ಕಳಿಸುತ್ತೇವೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಪ್ರತ್ಯೇಕ ದೂರು ದಾಖಲಿಸ್ತೇವೆ. ಎಲ್ಲ ರೀತಿಯ ತನಿಖೆಗೆ ಸೂಚಿಸುತ್ತೆವೆ ಎಂದ್ರು. ಕವಿತಾ ಬಳಿ ಸ್ಕ್ಯಾನಿಂಗ್ ಮಷೀನ್ ಹೇಗೆ ಬಂತು ಎಂಬ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕಿದೆ, ಗೋಕಾಕ್ ಮೂಲದ ಯಾವುದೋ ಒಂದು ಆಸ್ಪತ್ರೆಯ ಹೆಸರಲ್ಲಿ ಅವರ ಬಳಿ ಸ್ಕ್ಯಾನಿಂಗ್ ಮಷೀನ್ ಇದೆ. ಅದನ್ನೂ ಪೊಲೀಸರು ತನಿಖೆ ಮಾಡ್ತಿದ್ದಾರೆ. ಈ ಪ್ರಕರಣದಲ್ಲಿ ಯಾರ್ಯಾರೂ ಭಾಗಿಯಾಗಿದ್ದಾರೆ ಎಂಬ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us