AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಬಾರ್ ಅಂಡ್ ರೆಸ್ಟೊರೆಂಟ್ ಸ್ಥಳಾಂತರಕ್ಕೆ ಆಗ್ರಹ; ಎಂಟನೇ ದಿನಕ್ಕೆ ಕಾಲಿಟ್ಟ ಮಹಿಳೆಯರ ಪ್ರತಿಭಟನೆ

ಚನಾಳ ಗ್ರಾಮದ ಬಳಿಯ ಕಿಂಗ್ಸ್ ಬಾರ್ ಸ್ಥಳಾಂತರಕ್ಕೆ ಒತ್ತಾಯಿಸಿ ಮಹಿಳೆಯರು ಬಾರ್ ಎದುರಿಗೆ ಅಡುಗೆ ಮಾಡಿ, ಉಪಹಾರ ಸೇವಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಾಗಲಕೋಟೆ: ಬಾರ್ ಅಂಡ್ ರೆಸ್ಟೊರೆಂಟ್ ಸ್ಥಳಾಂತರಕ್ಕೆ ಆಗ್ರಹ; ಎಂಟನೇ ದಿನಕ್ಕೆ ಕಾಲಿಟ್ಟ ಮಹಿಳೆಯರ ಪ್ರತಿಭಟನೆ
ಬಾರ್ ಮುಂದೆ ಮಹಿಳೆಯರಿಂದ ಪ್ರತಿಭಟನೆ
TV9 Web
| Edited By: |

Updated on: Aug 30, 2021 | 11:17 AM

Share

ಬಾಗಲಕೋಟೆ: ಬಾರ್ ಅಂಡ್ ರೆಸ್ಟೊರೆಂಟ್ ಸ್ಥಳಾಂತರಕ್ಕೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಚನಾಳ ಗ್ರಾಮದಲ್ಲಿ ಕಳೆದ ಎಂಟು ದಿನಗಳಿಂದ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಚನಾಳ ಗ್ರಾಮದ ಬಳಿಯ ಕಿಂಗ್ಸ್ ಬಾರ್ ಸ್ಥಳಾಂತರಕ್ಕೆ ಒತ್ತಾಯಿಸಿ ಮಹಿಳೆಯರು ಬಾರ್ ಎದುರಿಗೆ ಅಡುಗೆ ಮಾಡಿ, ಉಪಹಾರ ಸೇವಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಾರ್​ನಿಂದ ಗ್ರಾಮದ ಯುವಕರು ಹಾಳಾಗುತ್ತಿದ್ದಾರೆ. ಮನೆಯಲ್ಲಿ ನಿತ್ಯವೂ ಜಗಳ ಶುರುವಾಗಿದೆ‌. ಮನೆಯಲ್ಲಿನ ವಸ್ತುಗಳನ್ನು ಕುಡಿಯುವುದಕ್ಕಾಗಿಯೇ ಮಾರಾಟ ಮಾಡುತ್ತಿದ್ದಾರೆ. ನಮ್ಮ ಸಂಸಾರ ಬೀದಿಗೆ ಬರುತ್ತಿದೆ. ಹೀಗಾಗಿ ಬಾರ್ ಸ್ಥಳಾಂತರ ಮಾಡಿ. ಬಾರ್ ಸ್ಥಳಾಂತರ ಮಾಡುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾನೀರತ ಮಹಿಳೆಯರು ತಿಳಿಸಿದ್ದಾರೆ.

ಚಿಕ್ಕಮಗಳೂರು: ಬಾರ್ ಮುಚ್ಚುವಂತೆ ಮಹಿಳೆಯರ ಧರಣಿ; ಬಾರ್ ಮುಚ್ಚದಂತೆ ಮದ್ಯಪ್ರಿಯರ ಹೋರಾಟ! ಒಂದೆಡೆ ಮಹಿಳೆಯರಿಂದ ಬಾರ್ ಮುಚ್ಚುವಂತೆ ಧರಣಿ, ಮತ್ತೊಂದೆಡೆ ಬಾರ್ ಮುಚ್ಚದಂತೆ ಮದ್ಯಪ್ರಿಯರಿಂದ ಧರಣಿ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗ್ರಾಮ ಅಂಚೆ ಚೋಮನಹಳ್ಳಿಯಲ್ಲಿ ನಡೆದಿದೆ. ಇಲ್ಲಿನ ಬಾರ್‌ ಮುಚ್ಚುವಂತೆ ಚಿಕ್ಕಮಗಳೂರು ಅಬಕಾರಿ ಕಚೇರಿ ಬಳಿ ಮಹಿಳೆಯರು ಧರಣಿ ನಡೆಸಿದ್ದಾರೆ. ಆದರೆ, ಇದಕ್ಕೆ ವಿರುದ್ಧವಾಗಿ ಮತ್ತೊಂದೆಡೆ ಬಾರ್ ಮುಚ್ಚದಂತೆ ಮದ್ಯಪ್ರಿಯರಿಂದ ಧರಣಿ ನಡೆದಿದೆ. ಅಬಕಾರಿ ಕಚೇರಿಯ ಬಳಿ ಬಾರ್‌ ಪರ, ವಿರುದ್ಧ ಪ್ರತಿಭಟನೆ ಜೋರಾಗಿದೆ.

ಗ್ರಾಮದಲ್ಲಿ ತಿಂಗಳ ಹಿಂದೆ ಚಂದನ್ ಬಾರ್‌ ಎಂಬ ಬಾರ್ ಆರಂಭವಾಗಿತ್ತು. ಇದೀಗ ಅದಕ್ಕೆ ಮಹಿಳೆಯರಿಂದ ವಿರೋಧ ವ್ಯಕ್ತವಾಗಿದೆ. ಮದ್ಯಪ್ರಿಯರು ಮಹಿಳೆಯರ ವಿರೋಧಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಾರ್ ಮುಚ್ಚದಂತೆ ತಾವೂ ಧರಣಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಅಬಕಾರಿ ಕಚೇರಿ ಬಳಿ ಈ ಪ್ರತಿಭಟನೆ ನಡೆದಿದೆ. ಎಣ್ಣೆ ಬೇಕೆಂದು ಒಂದು ಗುಂಪು, ಬೇಡವೆಂದು ಮತ್ತೊಂದು ಗುಂಪು, ಬಾರ್ ಪರ- ವಿರುದ್ದ ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿದೆ. ಬಾರ್ ಬೇಡವೆಂದು ಮಹಿಳೆಯರು ಬೀದಿಗಿಳಿದಿದ್ದಾರೆ. ಬಾರ್ ಬೇಕೇ ಬೇಕೆಂದು ಮದ್ಯಪ್ರಿಯರು ಬೀದಿಗಳಿದಿದ್ದಾರೆ.

ನನ್ ಗಂಡ ಬೆಳ್ಗೆಯಿಂದ ಸಂಜೆ ತನಕ ಕುಡೀತಾನೆ ಇರ್ತಾನೆ ಸರ್. ಕುಡ್ಕೋ ಬಂದು ಹೊಡೀತಾನೆ, ಬಡೀತಾನೆ. ನಮ್ ಕಷ್ಟ ಯಾರಿಗೆ ಹೇಳೋದ್ ಸರ್. ಬಾರ್ ಹತ್ರ ಇದ್ರೆ ನನ್ನ ಗಂಡನ ಕಾಟ ಮತ್ತಷ್ಟು ಜಾಸ್ತಿಯಾಗುತ್ತೆ. ಹಾಗಾಗೀ ಬಾರ್ ಬೇಡ ಅಂತಾ ಡಿಸಿ ಅವ್ರಿಗೆ ಮನವಿ ಮಾಡೋಕೆ ಬಂದೀವಿ ಸರ್ ಎಂದು ಮಹಿಳೆಯರು ಕಣ್ಣೀರು ಹಾಕಿದ್ದಾರೆ.

ಇತ್ತ, ನಾನ್ ಸಂಜೆ 6 ಗಂಟೆಗೆ ಕೆಲ್ಸ ಮುಗ್ಸಿ ಬರ್ತೀನಿ, ಆಮೇಲೆ ಬಾರ್ ಹುಡ್ಕೊಂಡ್ ಬಾಣಾವಾರಕ್ಕೆ ಹೋಗ್ಬೇಕಂದ್ರೆ 10 ಕೀಲೋ ಮೀಟರ್, ಮತ್ತಿಘಟ್ಟಕ್ಕೆ ಹೋಗೋಕೂ 10 ಕೀಲೋ ಮೀಟರ್ ಆಗುತ್ತೆ. ದೇವನೂರು ಹೋಗ್ಬೇಕಂದ್ರೆ 10 ಕೀಲೋ ಮೀಟರ್. ಕುಡಿಬೇಕು ಅಂದ್ರೆ ಎಲ್ಲಾ ಬೇಲಿ ಸಾಲಲೆಲ್ಲಾ ಹೋಗ್ಬೇಕು. ನಮ್ಮೂರಲ್ಲೇ ಆದ್ರೆ ಈ ಕಷ್ಟನೇ ಇರಲ್ಲ. ಅಲ್ದೇ ಕೆಲ ಕಡೆ ಅಂಗಡಿಯಲ್ಲಿ ಕದ್ದು ಮಾರ್ತಾರೆ, ಅಲ್ಲಿ ಒನ್ ಟು ಡಬಲ್ ದುಡ್ಡು ಕೊಟ್ಟು ಕದ್ದು ಕುಡಿಯಬೇಕು. ಅಷ್ಟು ದುಡ್ಡು ಕೊಟ್ಟು ಕದ್ದು ಕುಡಿಯೋ ಹಣೆಬರಹ ಯಾಕೆ ? ಅನ್ನೋದು ಮದ್ಯಪ್ರಿಯರ ಪ್ರಶ್ನೆ.

ಇದನ್ನೂ ಓದಿ: ಬಾಗಲಕೋಟೆ: ಬಾರ್ ಅಂಡ್ ರೆಸ್ಟೋರೆಂಟ್ ತೆರವುಗೊಳಿಸಲು ಆಗ್ರಹ; ಬಾರ್ ಮುಂದೆ ಮಹಿಳೆಯರಿಂದ ಪ್ರತಿಭಟನೆ

ಬಾರ್ ಮುಚ್ಚುವಂತೆ ಮಹಿಳೆಯರ ಧರಣಿ; ಬಾರ್ ಮುಚ್ಚದಂತೆ ಮದ್ಯಪ್ರಿಯರ ಹೋರಾಟ! ಚಿಕ್ಕಮಗಳೂರಿನಲ್ಲಿ ಹೀಗೊಂದು ಘಟನೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!