Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ: ಗುಂಡು ತಗುಲಿ ಸಾವು ಶಂಕೆ

ಬಾಗಲಕೋಟೆ ಮೂಲದ ಉಮೇಶ್ ದಬಗಲ್(33) ಯೋಧ ಪಶ್ಚಿಮಬಂಗಾಳದಲ್ಲಿ ಹುತಾತ್ಮವಾಗಿರುವಂತಹ ಘಟನೆ ನಿನ್ನೆ ನಡೆದಿದೆ. ಗುಂಡು ತಗುಲಿ ಹುತಾತ್ಮರಾಗಿರುವ ಶಂಕೆ ವ್ಯಕ್ತವಾಗಿದೆ. ಹುತಾತ್ಮ ಯೋಧ ಉಮೇಶ್ ದಬಗಲ್ ಕಳೆದ 13 ವರ್ಷದಿಂದ ಬಿಎಸ್‌ಎಫ್‌ನಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು. ನಾಳೆ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ತಲುಪಲಿದೆ. 

ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ: ಗುಂಡು ತಗುಲಿ ಸಾವು ಶಂಕೆ
ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ: ಗುಂಡು ತಗುಲಿ ಸಾವು ಶಂಕೆ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 08, 2024 | 4:43 PM

ಬಾಗಲಕೋಟೆ, ಆಗಸ್ಟ್​ 8: ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ (Bagalkote) ಮೂಲದ ಯೋಧ (Yodha) ಹುತಾತ್ಮವಾಗಿರುವಂತಹ ಘಟನೆ ನಿನ್ನೆ ನಡೆದಿದೆ. ಉಮೇಶ್ ದಬಗಲ್(33) ಹುತಾತ್ಮವಾದ ಬಿಎಸ್‌ಎಫ್‌ ಯೋಧ. ಗುಂಡು ತಗುಲಿ ಉಮೇಶ್ ದಬಗಲ್ ಹುತಾತ್ಮರಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ನಿವಾಸಿ. 13 ವರ್ಷದಿಂದ ಬಿಎಸ್‌ಎಫ್‌ನಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು. ನಾಳೆ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ತಲುಪಲಿದೆ.

ಹಂಪ್ಸ್ ತಪ್ಪಿಸಲು ಹೋಗಿ ನಿಂತಿದ್ದ ಬೈಕ್​ಗಳ ಮೇಲೆ ನುಗ್ಗಿದ ಬಸ್: ನಾಲ್ವರಿಗೆ ಗಾಯ

ದಾವಣಗೆರೆ: ಹಂಪ್ಸ್ ತಪ್ಪಿಸಲು ಹೋಗಿ ನಿಂತಿದ್ದ ಬೈಕ್​​ಗಳ ಮೇಲೆ ಬಸ್​ ನುಗ್ಗಿಸಿದ್ದು, ಕೂದಲೆಳೆ ಅಂತರದಲ್ಲಿ ಐದು ಜನ ಬೈಕ್ ಸವಾರರು ಪಾರಾಗಿರುವಂತಹ ಘಟನೆ ದಾವಣಗೆರೆ ಸಮೀಪದ ಬಾತಿ ಕೆರೆ ಬಳಿ ನಡೆದಿದೆ. ನಾಲ್ವರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಇಬ್ಬರು ಪೊಲೀಸ್ ಇನ್ಸ್​ಪೆಕ್ಟರ್ ಅನುಮಾನಸ್ಪದ​​​ ಸಾವಿನ ಬೆನ್ನಲ್ಲೇ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯ ಆತ್ಮಹತ್ಯೆ

ಮಳೆ ಹಿನ್ನಲೆ ಮರದ ಕೆಳಗೆ ಬೈಕ್ ಸವಾರರು ನಿಂತಿದ್ದರು. ಈ ವೇಳೆ ಹಂಪ್ಸ್ ತಪ್ಪಿಸಲು ಹೋಗಿ ಪಕ್ಕದಲ್ಲಿ ನಿಂತಿದ್ದ ಬೈಕ್ ಸವಾರರ ಮೇಲೆ ಬಸ್ ನುಗ್ಗಿದೆ. ದಾವಣಗೆರೆಯಿಂದ ಹರಿಹರ ಮಾರ್ಗವಾಗಿ ಹುಬ್ಬಳಿ ಕಡೆ ಹೊರಟ್ಟಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಮೂರು ಬೈಕ್​ಗಳು ನಜ್ಜುಗುಜ್ಜಾಗಿವೆ.

ನಾಪತ್ತೆಯಾಗಿ ಮಹಿಳೆ ಶವವಾಗಿ ಪತ್ತೆ 

ಧಾರವಾಡ: ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದಗೋಳ ತಾಲೂಕಿನ ವಿಠಲಾಪೂರ ನಿವಾಸಿ ಮಂಜುಳಾ ಚಂದ್ರಗೌಡ ಹುತ್ತನಗೌಡರ ಶವವಾಗಿ ಪತ್ತೆಯಾಗಿರುವ ಮಹಿಳೆ.

ಇದನ್ನೂ ಓದಿ: ಕಾಲೇಜು ಯುವತಿಯರೇ ಎಚ್ಚರ! ಸ್ನೇಹಿತನ ಜೊತೆಗಿನ ಫೋಟೋ ಹಿಡಿದು ಯುವತಿಗೆ ಬ್ಲಾಕ್ ಮೇಲ್ ಮಾಡಿದ ಸ್ನೇಹಿತ ಅರೆಸ್ಟ್

ಜುಲೈ 29ರಂದು ಮನೆಯಿಂದ ಮಹಿಳೆ ಕಾಣೆಯಾಗಿದ್ದರು. ಇದೀಗ ಹಳ್ಳದಲ್ಲಿ ಶವವಾಗಿ ಪತ್ತೆ ಆಗಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?