AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟನ್ ಕಬ್ಬಿಗೆ 3,500 ಬೆಲೆ ಬೇಕೇ ಬೇಕು’ ಮುಧೋಳ ರೈತರ ಪಟ್ಟು; ಮುಂದುವರಿದ ಹೋರಾಟ

ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು 3,500 ರೂ. ಬೆಂಬಲ ಬೆಲೆಗೆ ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ಆದೇಶವನ್ನು ಕಾರ್ಖಾನೆ ಮಾಲೀಕರು ಒಪ್ಪಿದರೂ ರೈತರು ಮಾತ್ರ ಒಪ್ಪಲಿಲ್ಲ. ಹೋರಾಟ ತೀವ್ರಗೊಳಿಸಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಜಿಲ್ಲಾಧಿಕಾರಿಗಳೊಂದಿಗಿನ ಸಂಧಾನ ಸಭೆಯೂ ವಿಫಲವಗಿದೆ.

‘ಟನ್ ಕಬ್ಬಿಗೆ 3,500 ಬೆಲೆ ಬೇಕೇ ಬೇಕು’ ಮುಧೋಳ ರೈತರ ಪಟ್ಟು; ಮುಂದುವರಿದ ಹೋರಾಟ
‘ಟನ್ ಕಬ್ಬಿಗೆ 3,500 ಬೆಲೆ ಬೇಕೇ ಬೇಕು’ ಮುಧೋಳ ರೈತರ ಪಟ್ಟು
ಭಾವನಾ ಹೆಗಡೆ
|

Updated on:Nov 10, 2025 | 9:17 AM

Share

ಬಾಗಲಕೋಟೆ,ನವೆಂಬರ್ 10: ಬಾಗಲಕೋಟೆ (Bagalakote) ಜಿಲ್ಲೆಯ ಮುಧೋಳದಲ್ಲಿ 3,300 ರೂ. ಬೆಂಬಲ ಬೆಲೆಗೆ ಒಪ್ಪದ ಕಬ್ಬು ಬೆಳೆಗಾರರು, ಒಂದು ಟನ್‌ ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನಿಗದಿಪಡಿಸುವಂತೆ ಹಾಗೂ ಹಿಂದಿನ ಬಾಕಿ ಹಣ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಈ ಕುರಿತು ಜಿಲ್ಲಾಧಿಕಾರಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ ಚರ್ಚಿಸಿದ್ದು, ಸಭೆಯಲ್ಲಿ ಸುಮಾರು ಹದಿಮೂರು ಕಾರ್ಖಾನೆಗಳ ಮಾಲೀಕರು ಭಾಗವಹಿಸಿದ್ದರು. ಇದೀಗ ಮುಧೋಳ ರೈತರು ಹೋರಾಟ ತೀವ್ರಗೊಳಿಸಿದ್ದು, ಟನ್ ಕಬ್ಬಿಗೆ 3,500 ಬೆಲೆ ಬೇಕೇ ಬೇಕು ಎಂದು ಪಟ್ಟು ಹಿಡಿದು ಕೂತಿದ್ದಾರೆ.

ರೈತರೊಂದಿಗಿನ ಸಂಧಾನ ಸಬೆ ವಿಫಲ

ನಿರಂತರ‌ ಹೋರಾಟದ ಫಲವಾಗಿ ಕಬ್ಬು ಬೆಳೆಗೆ ಸಿಎಂ ಬೆಲೆ ಘೋಷಣೆ ಮಾಡಿದ್ದಾರೆ. ರಾಜ್ಯಾದ್ಯಂತ ರೈತರು‌ ಸಂಭ್ರಮಿಸಿದರೂ ಬಾಗಲಕೋಟೆಯ ರೈತರು ಮಾತ್ರ ಸಿಎಂ ಅದೇಶವನ್ನು ಒಪ್ಪುತ್ತಿಲ್ಲ. ರೈತರ ಮನವೊಲಿಸಲು ನಡೆದ ಸಂಧಾನ ಸಭೆಯೂ ವಿಫಲವಾಗಿದ್ದು, ಹೋರಾಟ ತೀವ್ರಗೊಂಡಿದೆ. ಕಬ್ಬು ಬೆಳೆಗಾರರ ಹೋರಾಟದಿಂದ ಎಚ್ಚೆತ್ತ ಜಿಲ್ಲಾಧಿಕಾರಿ, ಬಾಗಲಕೋಟೆ ಡಿಸಿ ಕಚೇರಿಯಲ್ಲಿ ಕಾರ್ಖಾನೆ‌ ಮಾಲೀಕರ‌ ಜೊತೆ ಸಭೆ ನಡೆಸಿದರು. ಸರ್ಕಾರದ ಆದೇಶವನ್ನು ಕಾರ್ಖಾನೆ ಮಾಲೀಕರು ಒಪ್ಪಿದರೂ ರೈತರು ಮಾತ್ರ ಒಪ್ಪಲಿಲ್ಲ.

ರೈತರ ಹೋರಾಟದ ಕಿಚ್ಚು ಹೆಚ್ಚಾದಾಗ ಕೂಡಲೇ ಮುಧೋಳ ಐಬಿಯಲ್ಲಿ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ರೈತರೊಂದಿಗೆ ಮತ್ತು ಮಾಜಿ ಸಚಿವ ಎಸ್.ಆರ್. ಪಾಟೀಲ್ ಒಡೆತನದ ಬೀಳಗಿ ಶುಗರ್ಸ್, ನಿರಾಣಿ ಶುಗರ್ಸ್, ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಸೇರಿದಂತೆ ಹದಿಮೂರು ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದರು. ಸಿಎಂ ಘೋಷಿಸಿದ ಬೆಲೆ ಒಪ್ಪಿಕೊಳ್ಳಿ ಎಂದು ರೈತರ ಮನವೊಲಿಸಲು ಪ್ರಯತ್ನಿಸಿದರು. ಆದರೆ ರೈತರು, ಟನ್ ಕಬ್ಬಿಗೆ 3,500 ರೂಪಾಯಿ ಬೇಕೆ ಬೇಕು ಹಾಗೂ ಹೆಚ್ಚುವರಿ 500 ರೂ. ನೀಡಬೇಕೆಂದು ಪಟ್ಟು ಹಿಡಿದಿದ್ದರಿಂದ ಸಂಧಾನ ಸಭೆ ವಿಫಲವಾಗಿದ್ದು, ಸಿಡಿದೆದ್ದ ರೈತರು ಮಧ್ಯರಾತ್ರಿಯವರೆಗೂ ರಸ್ತೆಯಲ್ಲಿಯೇ ಧರಣಿ ಮಾಡಿದ್ದಾರೆ. ಅದರೊದಿಗೆ ಮುಧೋಳದಲ್ಲಿ ಹೆದ್ದಾರಿ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಸಂಧಾನ ಸಭೆ ವಿಫಲವಾದ ಬಳಿಕ ಸಚಿವ ತಿಮ್ಮಾಪುರ ಹೇಳಿದ್ದೇನು?

ರೈತರ ಪ್ರಮುಖ ಬೇಡಿಕೆಗಳಲ್ಲಿ ಕಬ್ಬಿಗೆ ಟನ್‌ಗೆ 3500 ರೂ. ಬೆಲೆ ನಿಗದಿಪಡಿಸುವುದು ಮತ್ತು ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿರುವ 500 ರೂ. ಎರಡನೇ ಕಂತನ್ನು ತಕ್ಷಣವೇ ಪಾವತಿಸುವುದು ಸೇರಿವೆ. ಬೆಳಗಾವಿ ಮತ್ತು ಬಾಗಲಕೋಟೆ ಸೇರಿದಂತೆ ರಾಜ್ಯಾದ್ಯಂತ ಯಾವುದೇ ಕಾರ್ಖಾನೆಗಳು ಈ ಎರಡನೇ ಕಂತನ್ನು ಪಾವತಿಸಿಲ್ಲ ಎಂದು ರೈತರು ಆರೋಪಿಸಿದ್ದಾರೆ. 11.25% ರಿಕವರಿ ಪ್ರಕಾರ ಪ್ರಸ್ತುತ ನೀಡುತ್ತಿರುವ 330 ರೂ. ದರವನ್ನು ರೈತರು ಒಪ್ಪುತ್ತಿಲ್ಲ ಎಂದು ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ  Sugarcane Farmers Protest: 3,300 ರೂ ಬೆಂಬಲ ಬೆಲೆಗೆ ಒಪ್ಪದ ರೈತರ ಹೋರಾಟ

ಹಾವೇರಿಯಲ್ಲಿಯೂ ರೈತರ ಪ್ರತಿಭಟನೆ

ಹಾವೇರಿ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ಸರ್ಕಾರ ಆದೇಶ ಮಾಡಿದರೂ ಬೆಲೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ರೈತರು ಪ್ರತಿಭಟನೆ ನಡೆಸಿದ್ದಾರೆ. ಎಚ್ಚೆತ್ತ ಡಿಸಿ, ಕಾರ್ಖಾನೆ ಮಾಲೀಕರು, ರೈತರ ಜೊತೆ ಸಭೆ ನಡೆಸಿದ್ದು, ಒಮ್ಮತಕ್ಕೆ ಬಾರದ ಹಿನ್ನೆಲೆಯಲ್ಲಿ ಸಭೆ ಧಿಕ್ಕರಿಸಿದ ರೈತರು ಡಿಸಿ ಕಚೇರಿ ಬಳಿಯೇ ಪ್ರತಿಭಟನೆ ನಡೆಸಿದ್ದಾರೆ. ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮೆಕ್ಕೆಜೋಳ ಬೆಳೆಗಾರರ ಆಕ್ರೋಶ

ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನೀರು ಪಾಲಾಗಿತ್ತು. ಆದಾಗ್ಯೂ ರೈತರು ಮೆಕ್ಕೆಜೋಳ ಬೆಳೆಯನ್ನು ರಕ್ಷಿಸಿಕೊಂಡಿದ್ದರು.ಆದರೀಗ ಮೆಕ್ಕೆಜೋಳದ ದರ ಕುಸಿತ ಕಂಡಿದೆ. ದಲ್ಲಾಳಿಗಳು ಬಾಯಿಗೆ ಬಂದ ದರಕ್ಕೆ ಕೇಳುತ್ತಿದ್ದಾರೆ ಮುಂದೇನು ಮಾಡಬೇಕೆಂದು ತಿಳಿಯದ ರೈತರು ಕಂಗಾಲಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:39 am, Mon, 10 November 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್