AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ರೆಮ್​ಡೆಸಿವರ್ ಮಾರಾಟ ಮಾಡುತ್ತಿದ್ದ 10 ಜನರ ಬಂಧನ; ಜಿಲ್ಲಾಸ್ಪತ್ರೆ ನಿಷ್ಕಾಳಜಿ ಬಗ್ಗೆ ಮುಂದುವರಿದ ತನಿಖೆ

ಬಾಗಲಕೋಟೆ ಸಿಇಎನ್ ಪೊಲೀಸರ ಕಾರ್ಯಾಚರಣೆ ವೇಳೆ ರೆಮ್​ಡೆಸಿವರ್ ಕದ್ದು ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮೂವರು ಕೊವಿಡ್ ಆಸ್ಪತ್ರೆ ಸಿಬ್ಬಂದಿಗಳು, ಏಳು ಜನ ಖಾಸಗಿ ಆಸ್ಪತ್ರೆ ಸಿಬ್ಬಂದಿಗಳನ್ನು ಸೇರಿ ಒಟ್ಟು ಹತ್ತು ಜನರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆಯಲ್ಲಿ ರೆಮ್​ಡೆಸಿವರ್ ಮಾರಾಟ ಮಾಡುತ್ತಿದ್ದ 10 ಜನರ ಬಂಧನ; ಜಿಲ್ಲಾಸ್ಪತ್ರೆ ನಿಷ್ಕಾಳಜಿ ಬಗ್ಗೆ  ಮುಂದುವರಿದ ತನಿಖೆ
ಪ್ರಾತಿನಿಧಿಕ ಚಿತ್ರ
preethi shettigar
|

Updated on: May 03, 2021 | 3:07 PM

Share

ಬಾಗಲಕೋಟೆ: ಕೊರೊನಾ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಇದರ ನಡುವೆ ಆಕ್ಸಿಜನ್ ಸಿಗುತ್ತಿಲ್ಲ ಎನ್ನುವ ಕೂಗು ಕೇಳಿಬರುತ್ತಿದ್ದು, ರೆಮ್​ಡೆಸಿವರ್ ಇಂಜೆಕ್ಷನ್ ಸಿಗುತ್ತಿಲ್ಲ ಎಂದು ಬಾಗಲಕೋಟೆಯಲ್ಲಿ ಹಾಹಾಕಾರ ಶುರುವಾಗಿದೆ. ಆದರೆ ರೆಮ್​ಡೆಸಿವರ್ ಕೊರತೆ ಮಧ್ಯೆ ಈಗ ರೆಮ್​ಡೆಸಿವರ್ ಕದ್ದು ಮಾರಾಟ ಮಾಡುವ ಜಾಲ ಪತ್ತೆಯಾಗಿದೆ.

ಬಾಗಲಕೋಟೆ ಸಿಇಎನ್ ಪೊಲೀಸರ ಕಾರ್ಯಾಚರಣೆ ವೇಳೆ ರೆಮ್​ಡೆಸಿವರ್ ಕದ್ದು ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮೂವರು ಕೊವಿಡ್ ಆಸ್ಪತ್ರೆ ಸಿಬ್ಬಂದಿಗಳು, ಏಳು ಜನ ಖಾಸಗಿ ಆಸ್ಪತ್ರೆ ಸಿಬ್ಬಂದಿಗಳನ್ನು ಸೇರಿ ಒಟ್ಟು ಹತ್ತು ಜನರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. 25ರಿಂದ30 ಸಾವಿರಕ್ಕೆ ರೆಮ್​ಡೆಸಿವರ್ ಅನ್ನು ಮಾರಾಟ ಮಾಡುವ ವೇಳೆ ಪೊಲೀಸರು ದಾಳಿ ಮಾಡಿದ್ದು, ಹದಿನಾಲ್ಕು ಪುಲ್ ವೈಲ್ ಮತ್ತು ಎರಡು ಖಾಲಿ ವೈಲ್ ಜಪ್ತಿ ಮಾಡಿದ್ದಾರೆ.

ಕೊವಿಡ್ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್​ಗಳು ಎರಡು ವೈಲ್ ಅನ್ನು 25ರಿಂದ 30 ಸಾವಿರಕ್ಕೆ ಮಾರಾಟ ಮಾಡಿರುವುದು ಈ ವೇಳೆ ಬೆಳಕಿಗೆ ಬಂದಿದೆ. ಕೊವಿಡ್ ಆಸ್ಪತ್ರೆಯ ವಿಠ್ಠಲ ಚಲವಾದಿ, ರಂಗಪ್ಪ ದಿನ್ನಿ, ರಾಹು ಗುಡಿಮನಿ ಮತ್ತು ಖಾಸಗಿ ಆಸ್ಪತ್ರೆಯ ತಿಮ್ಮಣ್ಣ ಗಡದನ್ನವರ, ಬಾಲಚಂದ್ರ ಭಜಂತ್ರಿ, ಮಂಜುನಾಥ ಗಾಣಿಗೇರ, ಶ್ರೀಕಾಂತ್ ಲಮಾಣಿ, ಗಣೇಶ್ ನಾಟಕಾರ್, ಪ್ರವೀಣ ಕೋತ್ಲಿ, ಮಹಾಂತಗೌಡ ಬಿರಾದಾರ್ ಬಂಧಿತ ಆರೋಪಿಗಳು.

ಇವರಲ್ಲಿ ಖಾಸಗಿ ವೈದ್ಯರ ಪಾತ್ರ ಇದೆಯಾ ಎನ್ನುವ ಪ್ರಶ್ನೆ ಸದ್ಯ ಉದ್ಭವವಾಗಿದ್ದು, ಜಿಲ್ಲಾಸ್ಪತ್ರೆ ನಿಷ್ಕಾಳಜಿ ಬಗ್ಗೆ ತನಿಖೆ ಮುಂದುವರಿದಿದೆ. ಯಾವುದೇ ಕಾರಣಕ್ಕೂ ಜಾಲದಲ್ಲಿ ಸಿಕ್ಕವರ ಕೈ ಬಿಡುವುದಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಾಗಲಕೋಟೆ ಎಸ್​ಪಿ ಲೋಕೇಶ್ ಜಗಲಾಸರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:

ರೆಮ್​ಡೆಸಿವರ್​ ಬೇಕೋ? ಬೇಡವೋ? ವೈದ್ಯರಲ್ಲೇ ಭಿನ್ನಾಭಿಪ್ರಾಯ, ಒಬ್ರು ಬೇಡ ಅಂತಾರೆ, ಇನ್ನೊಬ್ರು ಜೀವ ರಕ್ಷಕ ಅಂತಾರೆ

ಪೊಲೀಸ್​ ದಾಳಿ: ಬೆಂಗಳೂರಿನಲ್ಲಿ 10 ರಿಂದ 15 ಸಾವಿರಕ್ಕೆ ರೆಮ್​ಡೆಸಿವರ್​ ಮಾರುತ್ತಿದ್ದವರ ಬಂಧನ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್