AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಗುಜರಿ ಕೆಲಸ ಮಾಡುವ ಕುಟುಂಬದ ಅಜರುದ್ಧೀನ್ ಅಸಿಸ್ಟೆಂಟ್​ ಕಮಾಂಡೆಂಟ್​ ಹುದ್ದೆಗೆ ಆಯ್ಕೆ

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ನೇಕಾರ ಕಾಲೋನಿಯ ಮಹಮ್ಮದ್ ಅಜರುದ್ಧಿನ್ ಹಾಲ್ಯಾಳ ಎಂಬ ಯುವಕ ಸತತ ನಾಲ್ಕನೇ ಪ್ರಯತ್ನದಲ್ಲೇ ಅಸಿಸ್ಟೆಂಟ್​ ಕಮಾಂಡೆಂಟ್ ಹುದ್ದೆಗೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. 2024ರ ಜುಲೈ 5 ರಂದು ಫಲಿತಾಂಶ ಹೊರಬಿದ್ದಿದ್ದು, 163 ನೇ ರ‍್ಯಾಂಕ್​ ಪಡೆದುಕೊಳ್ಳುವ ಮೂಲಕ ಇಡೀ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಬಾಗಲಕೋಟೆ: ಗುಜರಿ ಕೆಲಸ ಮಾಡುವ ಕುಟುಂಬದ ಅಜರುದ್ಧೀನ್ ಅಸಿಸ್ಟೆಂಟ್​ ಕಮಾಂಡೆಂಟ್​ ಹುದ್ದೆಗೆ ಆಯ್ಕೆ
ಬಾಗಲಕೋಟೆ: ಗುಜರಿ ಕೆಲಸ ಮಾಡುವ ಕುಟುಂಬದ ಅಜರುದ್ಧೀನ್ ಅಸಿಸ್ಟೆಂಟ್​ ಕಮಾಂಡೆಂಟ್​ ಹುದ್ದೆಗೆ ಆಯ್ಕೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jul 08, 2024 | 4:42 PM

Share

ಬಾಗಲಕೋಟೆ, ಜುಲೈ 08: ಯುಪಿಎಸ್​ಸಿ ನಡೆಸುವ ಸಿಎಪಿಎಫ್ ಪರೀಕ್ಷೆ ಪಾಸು ಮಾಡುವ ಮೂಲಕ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಅಸಿಸ್ಟೆಂಟ್​ ಕಮಾಂಡೆಂಟ್ (assistant commandant)​​ ಹುದ್ದೆಗೆ ಜಿಲ್ಲೆಯ ಇಳಕಲ್​ನ (Ilkal) ಯುವಕ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಇಳಕಲ್ ನಗರದ ನೇಕಾರ ಕಾಲೋನಿಯ ಮಹಮ್ಮದ್ ಅಜರುದ್ಧಿನ್ ಹಾಲ್ಯಾಳ ಇವರೇ ಆ ಸಾಧನೆ ಮಾಡಿದ ಯುವಕ. 2023ರಲ್ಲಿ ಪರೀಕ್ಷೆ ನಡೆದಿದ್ದು, 2024ರ ಜುಲೈ 5 ರಂದು ಫಲಿತಾಂಶ ಹೊರಬಿದ್ದಿದ್ದು, 163 ನೇ ರ‍್ಯಾಂಕ್​ ಪಡೆದುಕೊಳ್ಳುವ ಮೂಲಕ ಇಡೀ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನಾಲ್ಕನೇ ಪ್ರಯತ್ನದಲ್ಲೇ ಪರೀಕ್ಷೆ ಪಾಸು ಮಾಡಿರುವುದು ಮತ್ತೊಂದು ವಿಶೇಷ.

ಮನೆಯಲ್ಲಿ ಬಡತನ ಇದ್ದರೂ ತಾಯಿ ಬಿಬಿಜಾನ್​ ಮಗ ಅಜರುದ್ಧಿನ್ ಓದಿಗೆ ಯಾವುದೇ ಕೊರತೆ ಮಾಡಿಲ್ಲ.  ಕುಟುಂಬ ಗುಜರಿ ತುಂಬುವ ಕಾಯಕ ಮಾಡುತ್ತಾರೆ. ಪ್ರಾಥಮಿಕ ಶಾಲೆ ಇಳಕಲ್ ನಗರದ ಮಹಾಂತ ಗುರುಗಳ ಶಾಲೆಯಲ್ಲಿ ಓದಿದ ಅಜರುದ್ಧಿನ್​, 6ನೇ ತರಗತಿಗೆ ನವೋದಯ ಶಾಲೆ, ಧಾರವಾಡ ಕೃಷಿ ವಿವಿಯಲ್ಲಿ ಪದವಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಪುನರ್ನಿರ್ಮಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಸಿಬ್ಬಂದಿಗೆ ಬರ: 490 ಹುದ್ದೆಗಳು ಖಾಲಿ‌

ಮುಂಬೈ ಹಾಗೂ ದೆಹಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್​ ಪಡೆದುಕೊಂಡಿದ್ದು, ತನ್ನ ಶೈಕ್ಷಣಿಕ ಜೀವನದಲ್ಲಿ ತನಗೆ ತಾಯಿ ಹಾಗೂ ಸಹೋದರರು ಬಡತನ ತೋರಿಸಲೇ ಇಲ್ಲ. ಅವರು ಕಷ್ಟಪಟ್ಟು ನನ್ನ ಓದಿಗೆ ತೊಂದರೆ ಆಗದಂತೆ ಸಹಾಯ ಮಾಡಿದ್ದಾರೆ ಎಂದು ಸ್ಮರಿಸಿದ್ದಾರೆ.

ಯುಪಿಎಸ್​ಸಿ ಪರೀಕ್ಷೆಯಲ್ಲಿ ಒಂದು ಸಲ ಫೇಲ್ ಆಗಿದ್ದೇನೆಂದು ಪ್ರಯತ್ನ ನಿಲ್ಲಿಸಬೇಡಿ. ಆತ್ಮವಿಶ್ವಾಸ, ನಿಷ್ಠೆಯಿಂದ ಪ್ರಯತ್ನ ಮಾಡಿ, ಯಶಸ್ಸು ಸಿಗುತ್ತೆ ಎಂದು ಯುಪಿಎಸ್​ಸಿ ಕನಸು ಹೊತ್ತವರಿಗೆ ಅಜರುದ್ಧೀನ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: 15 ವರ್ಷದ ಬಾಲಕನಿಗೆ ಬೆನ್ನು ಹುರಿ ಶಸ್ತ್ರ ಚಿಕಿತ್ಸೆ ಯಶಸ್ವಿ; ಉತ್ತರ ಕರ್ನಾಟಕದಲ್ಲೇ ಇದೇ ಮೊದಲು

ಮಗನ ಸಾಧನೆಗೆ ತಾಯಿ ಬಿಬಿಜಾನ್​ ಭಾವುಕರಾಗಿದ್ದಾರೆ. ಇದನ್ನು ನೋಡಲು ಆತನ ತಂದೆ ಇರಬೇಕಿತ್ತು ಎಂದು ಕಣ್ಣೀರು ಹಾಕಿದ್ದಾರೆ. ಸದ್ಯ ಅಜರುದ್ಧೀನ್​ ಮನೆಯಲ್ಲಿ ಸಂಭ್ರಮ ಶುರುವಾಗಿದೆ. ಇಂದು ಇಳಕಲ್ ನಗರದಲ್ಲಿ ಸನ್ಮಾನ ಕೂಡ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು