Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಎಚ್ಚೆತ್ತ ಗೃಹ ಇಲಾಖೆ: ​ವಿಧಾನಸೌಧದ 4 ಗೇಟ್​​​ಗಳಲ್ಲಿ ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ

ವಿಧಾನಸೌಧದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಭದ್ರತಾ ಲೋಪಗಳು ಆಗುತ್ತಲೇ ಇವೆ. ಹೀಗಾಗಿ ಎಚ್ಚೆತ್ತುಕೊಂಡ ಗೃಹ ಇಲಾಖೆ ಇವುಗಳಿಗೆಲ್ಲ ಬ್ರೇಕ್ ಹಾಕಲು ಮುಂದಾಗಿದೆ. ಈ ಕುರಿತಾಗಿ ನಗರದಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್​, 2 ರಿಂದ 3 ಕೋಟಿ ರೂ. ಹಣ ಖರ್ಚು ಮಾಡಿ ನಾಲ್ಕು ಗೇಟ್​​ಗಳಲ್ಲಿ ಹೊಸ ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಿದ್ದೇವೆ ಎಂದು ಹೇಳಿದ್ದಾರೆ. 

ಕೊನೆಗೂ ಎಚ್ಚೆತ್ತ ಗೃಹ ಇಲಾಖೆ: ​ವಿಧಾನಸೌಧದ 4 ಗೇಟ್​​​ಗಳಲ್ಲಿ ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ
ಕೊನೆಗೂ ಎಚ್ಚೆತ್ತ ಗೃಹ ಇಲಾಖೆ: ​ವಿಧಾನಸೌಧದ 4 ಗೇಟ್​​​ಗಳಲ್ಲಿ ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: May 17, 2024 | 4:02 PM

ಬೆಂಗಳೂರು, ಮೇ 17: ವಿಧಾನಸೌಧದಲ್ಲಿ (Vidhana Soudha) ಒಂದಲ್ಲ ಒಂದು ರೀತಿಯಲ್ಲಿ ಭದ್ರತಾ ಲೋಪಗಳು ಆಗುತ್ತಲೇ ಇವೆ. ಇತ್ತೀಚೆಗೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿತ್ತು. ಅದೇ ರೀತಿಯಾಗಿ ಯಾವುದೇ ರೀತಿಯ ಅನುಮತಿ ಪತ್ರಗಳು ಅಥವಾ ಪಾಸ್​ಗಳು ಇಲ್ಲದೇ ವಿಧಾನಸೌಧಕ್ಕೆ ಅಪರಿಚಿತರು ಪ್ರವೇಶಿಸುವ ಮೂಲಕ ಭದ್ರತಾ ಲೋಪಗಳು (Security breach) ಕಂಡುಬಂದಿದ್ದವು. ಅಷ್ಟೇ ಅಲ್ಲದೇ ಕೆಲವೊಮ್ಮೆ ರಾಜಕೀಯ ನಾಯಕರ ಹೆಸರು ಹೇಳಿಕೊಂಡು ವಿಧಾನಸೌಧ ಒಳಗೆ ಹೋಗುತ್ತಾರೆ. ಹೀಗಾಗಿ ರಾಜ್ಯದ ಶಕ್ತಿಸೌಧದೊಳಗೆ ಯಾರು ಯಾವಾಗ ಹೋಗಬಹುದು, ಬರಹುದು ಎನ್ನುವ ರೀತಿಯಾಗಿದೆ. ಇದೀಗ ಕೆಲ ಬೆಳವಣಿಗೆಗಳಿಂದ ಎಚ್ಚೆತ್ತುಕೊಂಡ ಗೃಹ ಇಲಾಖೆ ಇವುಗಳಿಗೆಲ್ಲ ಬ್ರೇಕ್ ಹಾಕಲು ಮುಂದಾಗಿದೆ.

2 ರಿಂದ 3 ಕೋಟಿ ರೂ. ಹಣ ಖರ್ಚು ಮಾಡಿ ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ 

ಈ ಕುರಿತಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್​, ಕಳೆದ ವಿಧಾನ ಸಭೆ ಅಧಿವೇಶನ ಸಮಯದಲ್ಲಿ ಬ್ಯಾಗೇಜ್ ಸ್ಕ್ಯಾನರ್​​ಗಳಿಲ್ಲ ಎಂದು ಹೇಳಿದರು. ಹಾಗಾಗಿ ಇಂದು 2 ರಿಂದ 3 ಕೋಟಿ ರೂ. ಹಣ ಖರ್ಚು ಮಾಡಿ ನಾಲ್ಕು ಗೇಟ್​​ಗಳಲ್ಲಿ ಹೊಸ ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಲಾಖೆಯ ಖಾತೆಯಲ್ಲಿ ಹಣ ಇದ್ದರೂ ಯಾಕೆ ಖರ್ಚು ಮಾಡಿಲ್ಲ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ವಿಧಾನ ಸೌಧಕ್ಕೆ ಬರುಬೇಕು ಅಂದರೆ ಇನ್ನು ಮುಂದೆ ಕ್ಯೂಆರ್​ ಕೋಡ್ ಇರುವ ಪಾಸ್​ಗಳನ್ನು ನೀಡಲಾಗುತ್ತದೆ. ವಿಧಾನ ಸೌಧದಲ್ಲಿ ಯಾರಾದರೂ ಲೋಹದ ವಸ್ತುಗಳನ್ನು ತಗೊಂಡು ಹೋಗುತ್ತಿದ್ದರೆ ಈ ಬ್ಯಾಗೇಜ್ ಸ್ಕ್ಯಾನರ್​​ನಲ್ಲಿ ಗೊತ್ತಾಗುತದೆ. ಮೂರು ವರ್ಷಗಳಿಂದ ಈ ಬ್ಯಾಗೇಜ್ ಸ್ಕ್ಯಾನರ್ ಕೆಟ್ಟಿದ್ದವು. ಈಗ ಸಿಎಂ ಸಿದ್ದರಾಮಯ್ಯ ಅವರು ಹಣ ಬೀಡುಗಡೆ ಮಾಡಿದ ಮೇಲೆ ಈ ಬ್ಯಾಗೇಜ್ ಸ್ಕ್ಯಾನರ್ ತೆಗೆದುಕೊಂಡು ಬಂದಿದ್ದೇವೆ ಎಂದರು.

ವಿಧಾನ ಸೌಧದಲ್ಲಿ ಸೆಕ್ಯೂರಿಟಿ ಇನ್ನು ಜಾಸ್ತಿ ಮಾಡುತ್ತೇವೆ. ಈ ಬಾರಿಯ ಅಧಿವೇಶನದಲ್ಲಿ ನಾವು ಹೆಚ್ಚು ಭದ್ರತೆ ಕೈಗೊಳ್ಳುತ್ತೇವೆ. ಇನ್ನು ಮುಂದೆ ವಿಧಾನ ಸೌಧ ಪ್ರವೇಶ ಮಾಡಲು ಬೇಕಾಬಿಟ್ಟಿ ಪಾಸ್​​ಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಖಾಲಿ ಖಜಾನೆಯಲ್ಲಿ ಉಳಿದ ಚಿಲ್ಲರೆ ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ – ಪ್ರತಿಪಕ್ಷ ನಾಯಕ ಆರ್. ಅಶೋಕ ಲೇವಡಿ

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ವಿಚಾರವಾಗಿ ಮಾತನಾಡಿದ ಅವರು, ಯಾವ ವಿಚಾರನೋ‌ ಗೊತ್ತಿಲ್ಲ. ಅಜೆಂಡಾ ಇನ್ನು ಸಿಕ್ಕಿಲ್ಲ. ಮಳೆ‌ ಪ್ರಾರಂಭವಾಗಿದೆ. ಆದರೆ ಬರಗಾಲದ ಪರಿಣಾಮ ಇನ್ನು ಕಡಿಮೆಯಾಗಿಲ್ಲ. ಈ‌ ವಿಚಾರವೂ ಸಿಎಂ ಚರ್ಚೆ ಮಾಡುತ್ತಾರೆ ಅಂದು ಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ