AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಜಿಲ್ಲೆಯ ಗ್ರಾಮ ಪಂಚಾಯತಿಯಲ್ಲಿ ಪತಿ ಜವಾನ…ಪತ್ನಿ ಪಂಚಾಯತಿಯ ಅಧ್ಯಕ್ಷೆ!

ಪತ್ನಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಆಗಿದ್ದರೂ ಪಂಚಾಯತಿಯಲ್ಲಿ ಜವಾನನಾಗಿರುವ ಬಸವರಾಜ ಮಾತ್ರ ಈಗಲೂ ಪಂಚಾಯತಿಯಲ್ಲಿ ಕಸ ಗುಡಿಸುವುದು, ಕುರ್ಚಿ ಒರೆಸುವುದು, ಪಂಚಾಯತಿ ಅಧಿಕಾರಿಗಳು ಹೇಳಿದ ಕೆಲಸ ಮಾಡುವುದು, ಅಧ್ಯಕ್ಷೆ ಮತ್ತು ಸದಸ್ಯರು ಪಂಚಾಯತಿಯಲ್ಲಿ ಸೇರಿದಾಗ ಚಹಾ ತಂದುಕೊಡುವುದು ಹೀಗೆ ಎಲ್ಲಾ ಕೆಲಸ ಮಾಡುತ್ತಿದ್ದಾರೆ.

ಹಾವೇರಿ ಜಿಲ್ಲೆಯ ಗ್ರಾಮ ಪಂಚಾಯತಿಯಲ್ಲಿ ಪತಿ ಜವಾನ...ಪತ್ನಿ ಪಂಚಾಯತಿಯ ಅಧ್ಯಕ್ಷೆ!
ಪತಿ ಬಸವರಾಜ ಕಿವಡೇರ ಮತ್ತು ಪತ್ನಿ ಗಂಗಮಾಳವ್ವ
preethi shettigar
| Edited By: |

Updated on: Feb 07, 2021 | 11:26 AM

Share

ಹಾವೇರಿ: ಜಿಲ್ಲೆಯೊಂದರ ಗ್ರಾಮ ಪಂಚಾಯತಿಯಲ್ಲಿ ಪತಿ ಕಳೆದ ಹಲವು ವರ್ಷಗಳಿಂದ ಜವಾನನಾಗಿ ಕೆಲಸ ಮಾಡುತ್ತಿದ್ದು, ಅದೇ ಪಂಚಾಯತಿಗೆ ಈಗ ಜವಾನನ ಪತ್ನಿಯೇ ಅಧ್ಯಕ್ಷೆ ಆಗಿದ್ದಾಳೆ. ಪತ್ನಿ ಅಧ್ಯಕ್ಷೆ ಆಗಿದ್ದರೂ ಪತಿ ಎಂದಿನಂತೆ ತನ್ನ ಜವಾನ ಕೆಲಸ ಮಾಡುತ್ತಿದ್ದಾರೆ. ಇಂತಹದೊಂದು ಅಪರೂಪದ ಪಂಚಾಯತಿ ಎಲ್ಲಿದೆ ಅಂತೀರಾ ಈ ಸ್ಟೋರಿ ನೋಡಿ.

ಹೌದು ಹೀಗೆ ಜವಾನ ಕೆಲಸ ಮಾಡುತ್ತಿರುವ ಪತಿಯ ಹೆಸರು ಬಸವರಾಜ ಕಿವಡೇರ. ಸುಮಾರು 23 ವರ್ಷಗಳಿಂದ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮ ಪಂಚಾಯತಿಯಲ್ಲಿ ಜವಾನ ಕೆಲಸ ಮಾಡುತ್ತಿದ್ದಾರೆ. ಸುಮಾರು ವರ್ಷಗಳಿಂದ ಗ್ರಾಮಸ್ಥರು, ಪಂಚಾಯತಿ ಅಧಿಕಾರಿಗಳು ಹಾಗೂ ಸದಸ್ಯರಿಂದ ಯಾವುದೇ ಕೆಟ್ಟ ಹೆಸರು ತರಿಸಿಕೊಳ್ಳದೆ ಎಲ್ಲ ಕೆಲಸ ಮಾಡಿಕೊಂಡು ಜನರ ಮೆಚ್ಚುಗೆ ಗಳಿಸಿದ್ದಾರೆ.

ಪಂಚಾಯತಿಯಲ್ಲಿ ಜವಾನರಾಗಿರುವ ಬಸವರಾಜನ ಪತ್ನಿ ಅವರಿವರ ಜಮೀನಿನಲ್ಲಿ ಕೂಲಿ ಕೆಲಸ‌ ಮಾಡಿಕೊಂಡಿದ್ದರು.  ಕೆಲವು ದಿನಗಳ ಹಿಂದೆ‌ ನಡೆದ ಗ್ರಾಮ ಪಂಚಾಯತಿ ಚುನಾವಣೆ ಸಮಯದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದು, ಪತಿಯ ಕೆಲಸ ನೋಡಿದ್ದ ಗ್ರಾಮಸ್ಥರು ಒಂದಾಗಿ ಜವಾನನ ಪತ್ನಿಯನ್ನೇ ಸದಸ್ಯೆಯನ್ನಾಗಿ ಆಯ್ಕೆ ಮಾಡಿದ್ದಾರೆ. ನಂತರ ಪಂಚಾಯತಿಯ ಅಧ್ಯಕ್ಷೆ ಸ್ಥಾನ ಹಿಂದುಳಿದ ಅ ವರ್ಗದ ಮಹಿಳೆಗೆ ಮೀಸಲಾಗಿತ್ತು.

husband peon wife president

ಕೆಲಸದಲ್ಲಿ ನಿರತರಾಗಿರುವ ಬಸವರಾಜ ಕಿವಡೇರ

ಅ ವರ್ಗದ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದರೂ ಸದಸ್ಯರು ಹಾಗೂ ಗ್ರಾಮಸ್ಥರು ಬಹುಮತದಿಂದ ಬಸವರಾಜನ ಪತ್ನಿಯನ್ನೇ ಅಧ್ಯಕ್ಷೆಯನ್ನಾಗಿ ಮಾಡಿದ್ದಾರೆ. ಸದ್ಯ ಪತಿ ಜವಾನನಾಗಿರುವ ಪಂಚಾಯತಿಗೆ ಅಧ್ಯಕ್ಷೆಯಾಗಿರುವ ಪತ್ನಿ ಗಂಗಮಾಳವ್ವ ಅಭಿವೃದ್ಧಿ ಮಂತ್ರ ಜಪಿಸುತ್ತಿದ್ದಾರೆ.

ಪತ್ನಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಆಗಿದ್ದರೂ ಪಂಚಾಯತಿಯಲ್ಲಿ ಜವಾನನಾಗಿರುವ ಬಸವರಾಜ ಮಾತ್ರ ಈಗಲೂ ಪಂಚಾಯತಿಯಲ್ಲಿ ಕಸ ಗುಡಿಸುವುದು, ಕುರ್ಚಿ ಒರೆಸುವುದು, ಪಂಚಾಯತಿ ಅಧಿಕಾರಿಗಳು ಹೇಳಿದ ಕೆಲಸ ಮಾಡುವುದು, ಅಧ್ಯಕ್ಷೆ ಮತ್ತು ಸದಸ್ಯರು ಪಂಚಾಯತಿಯಲ್ಲಿ ಸೇರಿದಾಗ ಚಹಾ ತಂದುಕೊಡುವುದು ಹೀಗೆ ಎಲ್ಲಾ ಕೆಲಸ ಮಾಡುತ್ತಿದ್ದಾನೆ. ಪತ್ನಿಯೇ ಅಧ್ಯಕ್ಷೆಯಾಗಿ ಅಧ್ಯಕ್ಷೆ ಚೇರ್ ಮೇಲೆ ಕುಳಿತಿದ್ದರೂ ಪತಿ 23 ವರ್ಷಗಳಿಂದ ಮಾಡಿಕೊಂಡು ಬಂದಿರುವ ಜವಾನನ ಕೆಲಸ‌ ಮಾತ್ರ ಬಿಟ್ಟಿಲ್ಲ.

ಪತಿ ಬಸವರಾಜ ಕಿವಡೇರ ಪತ್ನಿ ಗಂಗಮಾಳವ್ವ

ಗ್ರಾಮದ ಜನರ ಪ್ರೀತಿಯಿಂದ ಪತ್ನಿಯನ್ನ ಗ್ರಾಮ ಪಂಚಾಯತಿ ಚುನಾವಣೆಗೆ ನಿಲ್ಲಿಸಿದ್ದೆ. ಗ್ರಾಮಸ್ಥರು ಅಷ್ಟೇ ಪ್ರೀತಿಯಿಂದ ಪತ್ನಿಯನ್ನ ತಮ್ಮ ಮಗಳಂತೆ ಸದಸ್ಯೆಯಾಗಿ ಆಯ್ಕೆ ಮಾಡಿದ್ದರು. ಈಗ ಪಂಚಾಯತಿ ಸದಸ್ಯರು ಹಾಗೂ ಗ್ರಾಮದ ಹಿರಿಯರು ಸೇರಿಕೊಂಡು ಪತ್ನಿಯನ್ನೇ ಗ್ರಾಮ ಪಂಚಾಯತಿ ಅಧ್ಯಕ್ಷೆಯನ್ನಾಗಿ ಮಾಡಿದ್ದಾರೆ. ಇದೊಂದು ಖುಷಿಯ ವಿಚಾರ. ಆದರೆ ಸುಮಾರು ವರ್ಷಗಳಿಂದ ಮಾಡಿಕೊಂಡು ಬಂದಿರುವ ಜವಾನ ಕೆಲಸವನ್ನ ಇಂದಿಗೂ ಮುಂದುವರೆಸಿದ್ದೇನೆ ಎಂದು ಗ್ರಾಮ ಪಂಚಾಯತಿ ಜವಾನ ಬಸವರಾಜ ಕಿವಡೇರ ಹೇಳಿದ್ದಾರೆ.

ಕೈಗೆ ಅಧಿಕಾರ ಸಿಕ್ಕರೆ ಸಾಕು ಎನ್ನುವ ಜನರ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿದೆ. ಇಂತಹದರಲ್ಲಿ ಪತ್ನಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾದರೂ ಪತಿ ಅದೇ ಪಂಚಾಯತಿಯಲ್ಲಿ ಜವಾನ ಕೆಲಸ ಮಾಡುತ್ತಿದ್ದಾರೆ. ಪತ್ನಿಯೇ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿದ್ದರೂ ಪತಿ ಜವಾನ ಕೆಲಸ ಮಾಡುತ್ತಿರುವುದು ಗ್ರಾಮದ ಜನರಿಗೂ ಹೆಮ್ಮೆಯ ವಿಷಯವಾಗಿದೆ.

ಹುಬ್ಬಳ್ಳಿ : ವರೂರು ಗ್ರಾಮ ಪಂಚಾಯತಿನಲ್ಲಿ ಹೆಂಡತಿ ಅಧ್ಯಕ್ಷೆ, ಗಂಡ ಉಪಾಧ್ಯಕ್ಷ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ