ಬಜರಂಗದಳ ನಿಷೇಧ: ಕಾಂಗ್ರೆಸ್​​ಗೆ​ ಚುರುಕು ಮುಟ್ಟಿಸಲು ಹಿಂದೂ ಸಂಘಟನೆಗಳಿಂದ ಹನುಮಾನ್ ಚಾಲೀಸಾ ಪಠಿಸಲು ಕರೆ

ಕಾಂಗ್ರೆಸ್​ಗೆ ಟಾಂಗ್​​ ನೀಡಲು ಮುಂದಾಗಿರುವ ಬಜರಂಗದಳ ನಾಳೆ (ಮೇ 4) ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಹನುಮಾನ್​​ ಚಾಲಿಸ್​​ ಪಠಣ ಮಾಡಲಾಗುವುದು ಎಂದು ಕರೆ ನೀಡಿದೆ.

ಬಜರಂಗದಳ ನಿಷೇಧ: ಕಾಂಗ್ರೆಸ್​​ಗೆ​ ಚುರುಕು ಮುಟ್ಟಿಸಲು ಹಿಂದೂ ಸಂಘಟನೆಗಳಿಂದ ಹನುಮಾನ್ ಚಾಲೀಸಾ ಪಠಿಸಲು ಕರೆ
Follow us
| Updated By: ಡಾ. ಭಾಸ್ಕರ ಹೆಗಡೆ

Updated on:May 03, 2023 | 3:35 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನಲೆ ಇದೀಗ ಕಾಂಗ್ರೇಸ್ ತನ್ನ ಪ್ರಣಾಳಿಕೆಯನ್ನು (Karnataka Congress manifesto 2023) ಬಿಡುಗಡೆ ಮಾಡಿದ್ದು, ಈ ಪ್ರಣಾಳಿಕೆಯಲ್ಲಿ ಬಜರಂಗದಳನ್ನು ಬ್ಯಾನ್​​ ಮಾಡುವುದಾಗಿ ಹೇಳಿದೆ, ಇದೀಗ ಕಾಂಗ್ರೆಸ್​ಗೆ ಟಾಂಗ್​​ ನೀಡಲು ಮುಂದಾಗಿರುವ ಬಜರಂಗದಳ, ನಾಳೆ (ಮೇ 4) ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಹನುಮಾನ್​​ ಚಾಲಿಸ ಪಠಣ ಮಾಡಲು ಕರೆ ನೀಡಿದೆ. ಕಾಂಗ್ರೆಸ್ ವಿರುದ್ಧ ಬಂಜರಗದಳ ಹಾಗೂ ಹಿಂದೂ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಬಂಜರಂಗ ದಳ ಬ್ಯಾನ್​​ಗೆ ಠಕ್ಕರ ನೀಡಲು ಹಿಂದೂ ಸಂಘಟನೆಗಳು ಮುಂದಾಗಿದೆ.

ಹಿಂದೂ ಮಂದಿರ ಹಾಗೂ ಹನುಮಾನ್ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡೋ ಅಭಿಯಾನಕ್ಕೆ ಕರೆ ನೀಡಿದ್ದಾರೆ. ನಾಳೆ ಸಂಜೆ 7 ಗಂಟೆಗೆ ಹಿಂದೂ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸ್ ಪಠಣ ಮಾಡುವಂತೆ ಕರೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಮಾಡಲಾಗುತ್ತಿದೆ. ಈ ಅಭಿಯಾನಕ್ಕೆ ಅನೇಕ ಹಿಂದೂ ಸಂಘಟನೆಗಳು ಬೆಂಬಲ ನೀಡಿದೆ.

ಇದನ್ನೂ ಓದಿ: ಹನುಮಾನ್‌ ಚಾಲೀಸಾ ಪಠಿಸುವ ಸರಿಯಾದ ವಿಧಾನ ಯಾವುದು? ಹನುಮಾನ್‌ ಚಾಲೀಸಾ ಕನ್ನಡದಲ್ಲಿ

ಕಾಂಗ್ರೇಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಈ ಬಾರಿಯ ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ಭರವಸೆ ನೀಡಿದೆ. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ ವಿಭಜನೆಗೆ ಕಾರಣವಾಗುವ ಯಾವುದೇ ಶಕ್ತಿಗಳನ್ನು ಸಹಿಸುವುದಿಲ್ಲ. ಬಜರಂಗದಳ(Bajrang Dal), ಪಿಎಫ್​ಐ ಸೇರಿದಂತೆ ಯಾವುದೇ ಸಂಘಟನೆಗಳಾದರೂ ನಿಷೇಧ ಮಾಡುವುದರ ಜೊತೆಗೆ ಬಲವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಇದನ್ನೂ ಓದಿ: Bajrang Dal Controversy: ಕಾಂಗ್ರೆಸ್​​ನಿಂದ ಬಜರಂಗದಳ ನಿಷೇಧ ಪ್ರಸ್ತಾವ ವಾಪಸ್?

ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ ಎನ್ನುವ ಹೆಸರಿನಲ್ಲಿ ಪ್ರಣಾಳಿಕೆಯಲ್ಲಿ ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಂಘಟನೆ ಅಥವಾ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್​ ಬದ್ಧವಾಗಿದೆ. ಸಂವಿಧಾನವೇ ಪ್ರವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಗಳಾಲಿ, ಬಜರಂಗದಳ ಮತ್ತು ಪಿಎಫ್​ಐ ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಂಘಟನೆಗಳು ಸಂವಿಧಾನದ ವಿಧಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳನ ನಿಷೇಧ ಸೇರಿದಂತೆ ಬಲವಾದ ಕಾನೂಕು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:57 pm, Wed, 3 May 23