AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ವಿದೇಶಿ ಹಣ ಬಳಕೆ ಆರೋಪ: ಇಡಿಗೆ ದೂರು

ಸಾಮಾಜಿಕ ಜಾಲತಾಣ ಮತ್ತು ಯೂಟ್ಯೂಬ್​ಗಳಲ್ಲಿ ಧರ್ಮಸ್ಥಳದ ವಿರುದ್ಧ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಯೂಟ್ಯೂಬರ್​ಗಳಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿತ್ತು. ಈ ಸಂಬಂಧ ಬಜರಂಗದಳ ಮುಖಂಡ ಇಡಿಗೆ ದೂರು ನೀಡಿದ್ದು, ವಿದೇಶದಿಂದ ಬರುತ್ತಿರುವ ಹಣದ ಮೂಲ ಪತ್ತೆಹಚ್ಚುವಂತೆ ಒತ್ತಾಯಿಸಿದ್ದಾರೆ.

ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ವಿದೇಶಿ ಹಣ ಬಳಕೆ ಆರೋಪ: ಇಡಿಗೆ ದೂರು
ದೂರು ಪತ್ರ, ಇಡಿ
ವಿವೇಕ ಬಿರಾದಾರ
|

Updated on:Aug 20, 2025 | 4:41 PM

Share

ಬೆಂಗಳೂರು, ಆಗಸ್ಟ್​ 20: ನಮ್ಮ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಹಾನಿ ಮಾಡುತ್ತಿರುವ ಯೂಟ್ಯೂಬರ್‌ಗಳು (YouTubers), ಸಾಮಾಜಿಕ ಮಾಧ್ಯಮ ಇನ್ಫ್ಲೂಯೆನ್ಸ್​ರ್​ಗಳು ವಿದೇಶದಿಂದ ಹಣದ ನೆರವು ಪಡೆಯುತ್ತಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ (ED)  ಬಂಜರಂಗದಳ (Bajarangdal) ಮುಖಂಡ ತೇಜಸ್​ ಎ ಗೌಡ ಪತ್ರ ಬರೆದಿದ್ದಾರೆ.

ವಿದೇಶದಿಂದ ಬಂದ ಹಣವನ್ನು ಉಪಯೋಗಿಸಿಕೊಂಡು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳುಬೇಕು. ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಿರುದ್ಧ ಅಪಪ್ರಚಾರ ಮಾಡಲು ಓರ್ವ ಮುಸ್ಲಿಂ ಯ್ಯೂಟುಬರ್​ ವಿದೇಶದಿಂದ ಹಣ ಪಡೆಯುತ್ತಿದ್ದಾನೆ. ಈತನ ಹಣದ ಮೂಲವನ್ನು ಪತ್ತೆಹಚ್ಚಿ, ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ದೂರಿನಲ್ಲಿ ಏನಿದೆ?

ಧರ್ಮಸ್ಥಳ ಮಂಜುನಾಥ ಸ್ವಾಮಿ ಮಂದಿರದ ಹೆಸರು ಕೆಡಿಸಲು ಪ್ರಯತ್ನಿಸುತ್ತಿರುವ ಮುಸ್ಲಿಂ ಯೂಟ್ಯೂಬರ್ ಮತ್ತು ಅವರ ಸಹಚರರು ವಿದೇಶಿದಿಂದ ಹಣ ಪಡೆದಿದ್ದಾರೆ ಎಂದು ಮಾಧ್ಯಮಗಳು, ಸಾಮಾಜಿಕ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದ್ದರಿಂದ ಈ ದೂರುಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿ, ಧರ್ಮಸ್ಥಳ ಮಂಜುನಾಥ ಸ್ವಾಮಿ ಮಂದಿರವನ್ನು ವಿರೋಧಿಸುವವರು ಸ್ವೀಕರಿಸಿದ ವಿದೇಶಿ ಹಣಕಾಸು ವಹಿವಾಟಿನ ಬಗ್ಗೆ ವಿಚಾರಣೆ ನಡೆಸಬೇಕೆಂದು” ವಿನಂತಿಸಿಕೊಂಡಿದ್ದಾರೆ.

ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರ ಹಿಂದೆ ದೊಡ್ಡ ಗುಂಪಿದೆ. ಅವರ ಕೈವಾಡದಿಂದ ಅಪಪ್ರಚಾರ ಸೇರಿದಂತೆ ಎಲ್ಲವೂ ನಡೆಯುತ್ತಿದೆ. ಎನ್​ಐಎ, ಇಡಿ ಅಧಿಕಾರಿಗಳು ತನಿಖೆ ಮಾಡಬೇಕು ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ದಕ್ಷಿಣ ಕನ್ನಡ ಮಾಜಿ ಡಿಸಿ ಸಸಿಕಾಂತ್​ ಸೆಂಥಿಲ್​ ಷಡ್ಯಂತ್ರ ಎಂದ ರೆಡ್ಡಿ

ಧರ್ಮಸ್ಥಳದ ಬಗ್ಗೆ ಎಡಪಂಥೀಯ ಶಕ್ತಿಗಳಿಂದ ಅಪಪ್ರಚಾರ: ರೆಡ್ಡಿ ಆರೋಪ

ಧರ್ಮಸ್ಥಳದ ಬಗ್ಗೆ ದುಷ್ಟ ಎಡಪಂಥೀಯ ಶಕ್ತಿಗಳಿಂದ ಅಪಪ್ರಚಾರವಾಗುತ್ತಿದೆ. ಎಡಪಂಥೀಯ ಮನೋಭಾವನೆವುಳ್ಳ ದುಷ್ಟ ಶಕ್ತಿಗಳೆಲ್ಲ ಸೇರಿ‌ಕೊಂಡಿವೆ. ಈ ಹುನ್ನಾರ ಇಲ್ಲಿಗೆ ಕೊನೆಗಾಣಿಸಬೇಕು. ಮುಸುಕುಧಾರಿ 13 ಸ್ಥಳಗಳಲ್ಲಿ ಹೆಣಗಳನ್ನು ಹೂತಿಟ್ಟಿದ್ದ ಎಂಬುವುದು ಬೋಗಸ್ ಆಯ್ತು. ಹಿಂದೂ ಪುಣ್ಯಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಹುನ್ನಾರ ನಡೆದಿದೆ. ಸೆಂಥಿಲ್ ಕಾಂಗ್ರೆಸ್​ ಹೈಕಮಾಂಡ್​ಗೆ ರೈಟ್ ಹ್ಯಾಂಡ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪ ಮಾಡಿದ್ದರು.

ವರದಿ: ವಿಕಾಸ್​ ಟಿವಿ9 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Wed, 20 August 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!