Bakrid 2024: ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ

ಮುಸ್ಲಿಮರ ಪ್ರಮುಖ ಹಬ್ಬವಾದ ಬಕ್ರೀದ್​​ ಹಬ್ಬ ನಾಡಿನೆಲ್ಲೆಡೆ ಸೋಮವಾರ ಆಚರಿಸಲಾಗುತ್ತಿದೆ. ಈ ಹಿನ್ನಲೆ ಬೆಂಗಳೂರಿನಲ್ಲಿ ಸಂಚಾರ ಪೊಲೀಸ್​ ಇಲಾಖೆ ಕೆಲ ಮಾರ್ಗಗಳಲ್ಲಿ ಸಂಚಾರವನ್ನು ನಿಷೇಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಂಗಳೂರಿನ ಬಿಜಿ ರಸ್ತೆಯಲ್ಲಿ ಸಾಮಾನ್ಯವಾಗಿ ಬಕ್ರೀದ್ ಹಬ್ಬದಂದು ಧಾರ್ಮಿಕ ಪ್ರಾರ್ಥನೆಗಳನ್ನು ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ಹೀಗಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ.

Bakrid 2024: ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ
ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ
Follow us
|

Updated on: Jun 16, 2024 | 5:01 PM

ಬೆಂಗಳೂರು, ಜೂನ್​ 16: ಮುಸ್ಲಿಂ ಸಮುದಾಯ ಬಕ್ರೀದ್ ಹಬ್ಬದ (Bakrid) ಪ್ರಯುಕ್ತ ಸೋಮವಾರದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಬನ್ನೇರುಘಟ್ಟ ರಸ್ತೆಯ ಗುರಪ್ಪನಪಾಳ್ಯ ಮತ್ತು ಸುತ್ತಮುತ್ತ ಸಾರ್ವಜನಿಕರ ವಾಹನ ಸಂಚಾರವನ್ನು (traffic advisory) ಸಂಚಾರ ಪೊಲೀಸರು ನಿಷೇಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ಬ್ರೇಕ್​ ಬೀಳಲಿದೆ.

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಿರ್ಬಂಧ

ಸಾಗರ್ ಆಸ್ಪತ್ರೆ ಜಂಕ್ಷನ್‌ನಿಂದ ಗುರಪ್ಪನಪಾಳ್ಯ, ರೆಡ್ಡಿ ಆಸ್ಪತ್ರೆ ಜಂಕ್ಷನ್ 39ನೇ ಕ್ರಾಸ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌, ಜಿಡಿ ಮಾರ ಜಂಕ್ಷನ್​ನಿಂದ ಗುರಪ್ಪನಪಾಳ್ಯ ಜಂಕ್ಷನ್​ವರೆಗೆ ವಾಹನಗಳನ್ನು ನಿಷೇಧಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

ಡೈರಿ ವೃತ್ತದಿಂದ ಬನ್ನೇರುಘಟ್ಟ ರಸ್ತೆ ಕಡೆಗೆ ಬರುವ ವಾಹನಗಳು ಸ್ವಾಗತ್ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಬೇಕು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಚಲಿಸಬಹುದು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಬಲತಿರುವು ಪಡೆದು 28ನೇ ಮೇನ್​ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು 8ನೇ ಮುಖ್ಯ ರಸ್ತೆಯಲ್ಲಿ ಚಲಿಸಿ ಡೆಲ್ಮಿಯಾ ಜಂಕ್ಷನ್ ಕಡೆಗೆ ಎಡಕ್ಕೆ ತಿರುವು ಪಡೆದುಕೊಂಡು ಜಿಡಿ. ಮರ ಜಂಕ್ಷನ್​ ಕಡೆಗೆ ಚಲಿಸಿ ನಂತರ ಬಲಕ್ಕೆ ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು ಮುಂದೆ ಸಾಗಬಹುದಾಗಿದೆ.

ಇದನ್ನೂ ಓದಿ: Eid-ul-Adha 2024: ತ್ಯಾಗ ಬಲಿದಾನದ ಪ್ರತೀಕವೇ ಈ ‘ಬಕ್ರೀದ್ ‘ ಏನಿದರ ವಿಶೇಷತೆ?

ಮೈಸೂರು ರಸ್ತೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಕಿಮ್ಕೋ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ವಿಜಯನಗರ ಜಂಕ್ಷನ್​​ ಕಡೆಗೆ ಸಾಗಬಹುದಾಗಿದೆ.

ಇದನ್ನೂ ಓದಿ: ಬಕ್ರೀದ್ ಹಬ್ಬವಿರುವ ಜೂನ್ 17, ಸೋಮವಾರದಂದು ಷೇರು ಮಾರುಕಟ್ಟೆಗೆ ರಜೆಯಾ? ಇಲ್ಲಿದೆ ಮಾರುಕಟ್ಟೆ ರಜಾದಿನಗಳ ಪಟ್ಟಿ

ಟೌನ್ ಹಾಲ್​ನಿಂದ ಮೈಸೂರು ರಸ್ತೆಗೆ ಬರುವ ವಾಹನಗಳು ಬಿಜಿಎಸ್ ಮೇಲ್ಸೇತುವೆಯ ಕೆಳಗೆ ಸರ್ವಿಸ್ ರಸ್ತೆಯನ್ನು ತೆಗೆದುಕೊಂಡು ಪಶುವೈದ್ಯಕೀಯ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಗೂಡ್ಸ್ ಶೆಡ್ ರಸ್ತೆಯನ್ನು ತಲುಪಬಹುದು ಅಥವಾ ಸಿರಸಿ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಜೆಜೆ ನಗರ-ಟ್ಯಾಂಕ್​ಬಂಡ ರಸ್ತೆ-ಹುಣಸೇಮರ ಮಾರ್ಗವನ್ನು ತೆಗೆದುಕೊಳ್ಳಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!