AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bakrid 2024: ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ

ಮುಸ್ಲಿಮರ ಪ್ರಮುಖ ಹಬ್ಬವಾದ ಬಕ್ರೀದ್​​ ಹಬ್ಬ ನಾಡಿನೆಲ್ಲೆಡೆ ಸೋಮವಾರ ಆಚರಿಸಲಾಗುತ್ತಿದೆ. ಈ ಹಿನ್ನಲೆ ಬೆಂಗಳೂರಿನಲ್ಲಿ ಸಂಚಾರ ಪೊಲೀಸ್​ ಇಲಾಖೆ ಕೆಲ ಮಾರ್ಗಗಳಲ್ಲಿ ಸಂಚಾರವನ್ನು ನಿಷೇಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಂಗಳೂರಿನ ಬಿಜಿ ರಸ್ತೆಯಲ್ಲಿ ಸಾಮಾನ್ಯವಾಗಿ ಬಕ್ರೀದ್ ಹಬ್ಬದಂದು ಧಾರ್ಮಿಕ ಪ್ರಾರ್ಥನೆಗಳನ್ನು ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ಹೀಗಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ.

Bakrid 2024: ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ
ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ
ಗಂಗಾಧರ​ ಬ. ಸಾಬೋಜಿ
|

Updated on: Jun 16, 2024 | 5:01 PM

Share

ಬೆಂಗಳೂರು, ಜೂನ್​ 16: ಮುಸ್ಲಿಂ ಸಮುದಾಯ ಬಕ್ರೀದ್ ಹಬ್ಬದ (Bakrid) ಪ್ರಯುಕ್ತ ಸೋಮವಾರದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಬನ್ನೇರುಘಟ್ಟ ರಸ್ತೆಯ ಗುರಪ್ಪನಪಾಳ್ಯ ಮತ್ತು ಸುತ್ತಮುತ್ತ ಸಾರ್ವಜನಿಕರ ವಾಹನ ಸಂಚಾರವನ್ನು (traffic advisory) ಸಂಚಾರ ಪೊಲೀಸರು ನಿಷೇಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ಬ್ರೇಕ್​ ಬೀಳಲಿದೆ.

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಿರ್ಬಂಧ

ಸಾಗರ್ ಆಸ್ಪತ್ರೆ ಜಂಕ್ಷನ್‌ನಿಂದ ಗುರಪ್ಪನಪಾಳ್ಯ, ರೆಡ್ಡಿ ಆಸ್ಪತ್ರೆ ಜಂಕ್ಷನ್ 39ನೇ ಕ್ರಾಸ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌, ಜಿಡಿ ಮಾರ ಜಂಕ್ಷನ್​ನಿಂದ ಗುರಪ್ಪನಪಾಳ್ಯ ಜಂಕ್ಷನ್​ವರೆಗೆ ವಾಹನಗಳನ್ನು ನಿಷೇಧಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

ಡೈರಿ ವೃತ್ತದಿಂದ ಬನ್ನೇರುಘಟ್ಟ ರಸ್ತೆ ಕಡೆಗೆ ಬರುವ ವಾಹನಗಳು ಸ್ವಾಗತ್ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಬೇಕು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಚಲಿಸಬಹುದು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಬಲತಿರುವು ಪಡೆದು 28ನೇ ಮೇನ್​ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು 8ನೇ ಮುಖ್ಯ ರಸ್ತೆಯಲ್ಲಿ ಚಲಿಸಿ ಡೆಲ್ಮಿಯಾ ಜಂಕ್ಷನ್ ಕಡೆಗೆ ಎಡಕ್ಕೆ ತಿರುವು ಪಡೆದುಕೊಂಡು ಜಿಡಿ. ಮರ ಜಂಕ್ಷನ್​ ಕಡೆಗೆ ಚಲಿಸಿ ನಂತರ ಬಲಕ್ಕೆ ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು ಮುಂದೆ ಸಾಗಬಹುದಾಗಿದೆ.

ಇದನ್ನೂ ಓದಿ: Eid-ul-Adha 2024: ತ್ಯಾಗ ಬಲಿದಾನದ ಪ್ರತೀಕವೇ ಈ ‘ಬಕ್ರೀದ್ ‘ ಏನಿದರ ವಿಶೇಷತೆ?

ಮೈಸೂರು ರಸ್ತೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಕಿಮ್ಕೋ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ವಿಜಯನಗರ ಜಂಕ್ಷನ್​​ ಕಡೆಗೆ ಸಾಗಬಹುದಾಗಿದೆ.

ಇದನ್ನೂ ಓದಿ: ಬಕ್ರೀದ್ ಹಬ್ಬವಿರುವ ಜೂನ್ 17, ಸೋಮವಾರದಂದು ಷೇರು ಮಾರುಕಟ್ಟೆಗೆ ರಜೆಯಾ? ಇಲ್ಲಿದೆ ಮಾರುಕಟ್ಟೆ ರಜಾದಿನಗಳ ಪಟ್ಟಿ

ಟೌನ್ ಹಾಲ್​ನಿಂದ ಮೈಸೂರು ರಸ್ತೆಗೆ ಬರುವ ವಾಹನಗಳು ಬಿಜಿಎಸ್ ಮೇಲ್ಸೇತುವೆಯ ಕೆಳಗೆ ಸರ್ವಿಸ್ ರಸ್ತೆಯನ್ನು ತೆಗೆದುಕೊಂಡು ಪಶುವೈದ್ಯಕೀಯ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಗೂಡ್ಸ್ ಶೆಡ್ ರಸ್ತೆಯನ್ನು ತಲುಪಬಹುದು ಅಥವಾ ಸಿರಸಿ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಜೆಜೆ ನಗರ-ಟ್ಯಾಂಕ್​ಬಂಡ ರಸ್ತೆ-ಹುಣಸೇಮರ ಮಾರ್ಗವನ್ನು ತೆಗೆದುಕೊಳ್ಳಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?