AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bakrid 2024: ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ

ಮುಸ್ಲಿಮರ ಪ್ರಮುಖ ಹಬ್ಬವಾದ ಬಕ್ರೀದ್​​ ಹಬ್ಬ ನಾಡಿನೆಲ್ಲೆಡೆ ಸೋಮವಾರ ಆಚರಿಸಲಾಗುತ್ತಿದೆ. ಈ ಹಿನ್ನಲೆ ಬೆಂಗಳೂರಿನಲ್ಲಿ ಸಂಚಾರ ಪೊಲೀಸ್​ ಇಲಾಖೆ ಕೆಲ ಮಾರ್ಗಗಳಲ್ಲಿ ಸಂಚಾರವನ್ನು ನಿಷೇಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಂಗಳೂರಿನ ಬಿಜಿ ರಸ್ತೆಯಲ್ಲಿ ಸಾಮಾನ್ಯವಾಗಿ ಬಕ್ರೀದ್ ಹಬ್ಬದಂದು ಧಾರ್ಮಿಕ ಪ್ರಾರ್ಥನೆಗಳನ್ನು ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ಹೀಗಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ.

Bakrid 2024: ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ
ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ
ಗಂಗಾಧರ​ ಬ. ಸಾಬೋಜಿ
|

Updated on: Jun 16, 2024 | 5:01 PM

Share

ಬೆಂಗಳೂರು, ಜೂನ್​ 16: ಮುಸ್ಲಿಂ ಸಮುದಾಯ ಬಕ್ರೀದ್ ಹಬ್ಬದ (Bakrid) ಪ್ರಯುಕ್ತ ಸೋಮವಾರದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಬನ್ನೇರುಘಟ್ಟ ರಸ್ತೆಯ ಗುರಪ್ಪನಪಾಳ್ಯ ಮತ್ತು ಸುತ್ತಮುತ್ತ ಸಾರ್ವಜನಿಕರ ವಾಹನ ಸಂಚಾರವನ್ನು (traffic advisory) ಸಂಚಾರ ಪೊಲೀಸರು ನಿಷೇಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ಬ್ರೇಕ್​ ಬೀಳಲಿದೆ.

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಿರ್ಬಂಧ

ಸಾಗರ್ ಆಸ್ಪತ್ರೆ ಜಂಕ್ಷನ್‌ನಿಂದ ಗುರಪ್ಪನಪಾಳ್ಯ, ರೆಡ್ಡಿ ಆಸ್ಪತ್ರೆ ಜಂಕ್ಷನ್ 39ನೇ ಕ್ರಾಸ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌, ಜಿಡಿ ಮಾರ ಜಂಕ್ಷನ್​ನಿಂದ ಗುರಪ್ಪನಪಾಳ್ಯ ಜಂಕ್ಷನ್​ವರೆಗೆ ವಾಹನಗಳನ್ನು ನಿಷೇಧಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

ಡೈರಿ ವೃತ್ತದಿಂದ ಬನ್ನೇರುಘಟ್ಟ ರಸ್ತೆ ಕಡೆಗೆ ಬರುವ ವಾಹನಗಳು ಸ್ವಾಗತ್ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಬೇಕು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಚಲಿಸಬಹುದು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಬಲತಿರುವು ಪಡೆದು 28ನೇ ಮೇನ್​ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು 8ನೇ ಮುಖ್ಯ ರಸ್ತೆಯಲ್ಲಿ ಚಲಿಸಿ ಡೆಲ್ಮಿಯಾ ಜಂಕ್ಷನ್ ಕಡೆಗೆ ಎಡಕ್ಕೆ ತಿರುವು ಪಡೆದುಕೊಂಡು ಜಿಡಿ. ಮರ ಜಂಕ್ಷನ್​ ಕಡೆಗೆ ಚಲಿಸಿ ನಂತರ ಬಲಕ್ಕೆ ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು ಮುಂದೆ ಸಾಗಬಹುದಾಗಿದೆ.

ಇದನ್ನೂ ಓದಿ: Eid-ul-Adha 2024: ತ್ಯಾಗ ಬಲಿದಾನದ ಪ್ರತೀಕವೇ ಈ ‘ಬಕ್ರೀದ್ ‘ ಏನಿದರ ವಿಶೇಷತೆ?

ಮೈಸೂರು ರಸ್ತೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಕಿಮ್ಕೋ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ವಿಜಯನಗರ ಜಂಕ್ಷನ್​​ ಕಡೆಗೆ ಸಾಗಬಹುದಾಗಿದೆ.

ಇದನ್ನೂ ಓದಿ: ಬಕ್ರೀದ್ ಹಬ್ಬವಿರುವ ಜೂನ್ 17, ಸೋಮವಾರದಂದು ಷೇರು ಮಾರುಕಟ್ಟೆಗೆ ರಜೆಯಾ? ಇಲ್ಲಿದೆ ಮಾರುಕಟ್ಟೆ ರಜಾದಿನಗಳ ಪಟ್ಟಿ

ಟೌನ್ ಹಾಲ್​ನಿಂದ ಮೈಸೂರು ರಸ್ತೆಗೆ ಬರುವ ವಾಹನಗಳು ಬಿಜಿಎಸ್ ಮೇಲ್ಸೇತುವೆಯ ಕೆಳಗೆ ಸರ್ವಿಸ್ ರಸ್ತೆಯನ್ನು ತೆಗೆದುಕೊಂಡು ಪಶುವೈದ್ಯಕೀಯ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಗೂಡ್ಸ್ ಶೆಡ್ ರಸ್ತೆಯನ್ನು ತಲುಪಬಹುದು ಅಥವಾ ಸಿರಸಿ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಜೆಜೆ ನಗರ-ಟ್ಯಾಂಕ್​ಬಂಡ ರಸ್ತೆ-ಹುಣಸೇಮರ ಮಾರ್ಗವನ್ನು ತೆಗೆದುಕೊಳ್ಳಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?