AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bakrid 2024: ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ

ಮುಸ್ಲಿಮರ ಪ್ರಮುಖ ಹಬ್ಬವಾದ ಬಕ್ರೀದ್​​ ಹಬ್ಬ ನಾಡಿನೆಲ್ಲೆಡೆ ಸೋಮವಾರ ಆಚರಿಸಲಾಗುತ್ತಿದೆ. ಈ ಹಿನ್ನಲೆ ಬೆಂಗಳೂರಿನಲ್ಲಿ ಸಂಚಾರ ಪೊಲೀಸ್​ ಇಲಾಖೆ ಕೆಲ ಮಾರ್ಗಗಳಲ್ಲಿ ಸಂಚಾರವನ್ನು ನಿಷೇಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಂಗಳೂರಿನ ಬಿಜಿ ರಸ್ತೆಯಲ್ಲಿ ಸಾಮಾನ್ಯವಾಗಿ ಬಕ್ರೀದ್ ಹಬ್ಬದಂದು ಧಾರ್ಮಿಕ ಪ್ರಾರ್ಥನೆಗಳನ್ನು ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ಹೀಗಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ.

Bakrid 2024: ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ
ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ
ಗಂಗಾಧರ​ ಬ. ಸಾಬೋಜಿ
|

Updated on: Jun 16, 2024 | 5:01 PM

Share

ಬೆಂಗಳೂರು, ಜೂನ್​ 16: ಮುಸ್ಲಿಂ ಸಮುದಾಯ ಬಕ್ರೀದ್ ಹಬ್ಬದ (Bakrid) ಪ್ರಯುಕ್ತ ಸೋಮವಾರದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಬನ್ನೇರುಘಟ್ಟ ರಸ್ತೆಯ ಗುರಪ್ಪನಪಾಳ್ಯ ಮತ್ತು ಸುತ್ತಮುತ್ತ ಸಾರ್ವಜನಿಕರ ವಾಹನ ಸಂಚಾರವನ್ನು (traffic advisory) ಸಂಚಾರ ಪೊಲೀಸರು ನಿಷೇಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ಬ್ರೇಕ್​ ಬೀಳಲಿದೆ.

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಿರ್ಬಂಧ

ಸಾಗರ್ ಆಸ್ಪತ್ರೆ ಜಂಕ್ಷನ್‌ನಿಂದ ಗುರಪ್ಪನಪಾಳ್ಯ, ರೆಡ್ಡಿ ಆಸ್ಪತ್ರೆ ಜಂಕ್ಷನ್ 39ನೇ ಕ್ರಾಸ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌, ಜಿಡಿ ಮಾರ ಜಂಕ್ಷನ್​ನಿಂದ ಗುರಪ್ಪನಪಾಳ್ಯ ಜಂಕ್ಷನ್​ವರೆಗೆ ವಾಹನಗಳನ್ನು ನಿಷೇಧಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

ಡೈರಿ ವೃತ್ತದಿಂದ ಬನ್ನೇರುಘಟ್ಟ ರಸ್ತೆ ಕಡೆಗೆ ಬರುವ ವಾಹನಗಳು ಸ್ವಾಗತ್ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಬೇಕು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಚಲಿಸಬಹುದು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಬಲತಿರುವು ಪಡೆದು 28ನೇ ಮೇನ್​ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು 8ನೇ ಮುಖ್ಯ ರಸ್ತೆಯಲ್ಲಿ ಚಲಿಸಿ ಡೆಲ್ಮಿಯಾ ಜಂಕ್ಷನ್ ಕಡೆಗೆ ಎಡಕ್ಕೆ ತಿರುವು ಪಡೆದುಕೊಂಡು ಜಿಡಿ. ಮರ ಜಂಕ್ಷನ್​ ಕಡೆಗೆ ಚಲಿಸಿ ನಂತರ ಬಲಕ್ಕೆ ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು ಮುಂದೆ ಸಾಗಬಹುದಾಗಿದೆ.

ಇದನ್ನೂ ಓದಿ: Eid-ul-Adha 2024: ತ್ಯಾಗ ಬಲಿದಾನದ ಪ್ರತೀಕವೇ ಈ ‘ಬಕ್ರೀದ್ ‘ ಏನಿದರ ವಿಶೇಷತೆ?

ಮೈಸೂರು ರಸ್ತೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಕಿಮ್ಕೋ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ವಿಜಯನಗರ ಜಂಕ್ಷನ್​​ ಕಡೆಗೆ ಸಾಗಬಹುದಾಗಿದೆ.

ಇದನ್ನೂ ಓದಿ: ಬಕ್ರೀದ್ ಹಬ್ಬವಿರುವ ಜೂನ್ 17, ಸೋಮವಾರದಂದು ಷೇರು ಮಾರುಕಟ್ಟೆಗೆ ರಜೆಯಾ? ಇಲ್ಲಿದೆ ಮಾರುಕಟ್ಟೆ ರಜಾದಿನಗಳ ಪಟ್ಟಿ

ಟೌನ್ ಹಾಲ್​ನಿಂದ ಮೈಸೂರು ರಸ್ತೆಗೆ ಬರುವ ವಾಹನಗಳು ಬಿಜಿಎಸ್ ಮೇಲ್ಸೇತುವೆಯ ಕೆಳಗೆ ಸರ್ವಿಸ್ ರಸ್ತೆಯನ್ನು ತೆಗೆದುಕೊಂಡು ಪಶುವೈದ್ಯಕೀಯ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಗೂಡ್ಸ್ ಶೆಡ್ ರಸ್ತೆಯನ್ನು ತಲುಪಬಹುದು ಅಥವಾ ಸಿರಸಿ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಜೆಜೆ ನಗರ-ಟ್ಯಾಂಕ್​ಬಂಡ ರಸ್ತೆ-ಹುಣಸೇಮರ ಮಾರ್ಗವನ್ನು ತೆಗೆದುಕೊಳ್ಳಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ