AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಕಳಪೆ ಸೂರ್ಯಕಾಂತಿ ಬೀಜ ವಿತರಣೆ; ಕೃಷಿ ಅಧಿಕಾರಿಗಳ ವಿರುದ್ಧ ನೊಂದ ರೈತರ ಆಕ್ರೋಶ

ಕೂಡ್ಲಿಗಿ ತಾಲೂಕಿನಲ್ಲಿ ನೂರಾರು ರೈತರು ಇದೇ ಸೂರ್ಯಕಾಂತಿ ಬೀಜ ತೆಗೆದುಕೊಂಡು ಬಿತ್ತನೆ ಮಾಡಿದ್ದಾರೆ. ಆದರೆ ಸರಿಯಾಗಿ ಮೊಳಕೆಯೊಡೆದಿಲ್ಲ. ಹೀಗಾಗಿ ರೈತ ಸಂಪರ್ಕ ಕೇಂದ್ರದಿಂದ ವಿತರಣೆ ಮಾಡಿರುವ ಬೀಜ ಕಳಪೆಯಾಗಿವೆ ಎನ್ನುವುದು ಗೊತ್ತಾಗಿದೆ.

ಬಳ್ಳಾರಿಯಲ್ಲಿ ಕಳಪೆ ಸೂರ್ಯಕಾಂತಿ ಬೀಜ ವಿತರಣೆ; ಕೃಷಿ ಅಧಿಕಾರಿಗಳ ವಿರುದ್ಧ ನೊಂದ ರೈತರ ಆಕ್ರೋಶ
ಕೃಷಿ ನಿರ್ದೇಶಕರ ಕಛೇರಿ
TV9 Web
| Edited By: |

Updated on: Jun 20, 2021 | 11:10 AM

Share

ಬಳ್ಳಾರಿ: ಕೊರೊನಾ ಎರಡನೇ ಅಲೆಯ ತೀವ್ರತೆಯಿಂದಾಗಿ ಲಾಕ್​ಡೌನ್​ ಜಾರಿಗೆ ತರಲಾಗಿದ್ದು, ಇದರಿಂದ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಮತ್ತು ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅದರಲ್ಲೂ ರೈತರು ಲಾಕ್​ಡೌನ್​ನಿಂದಾಗಿ ಬೆಳೆದ ಬೆಳೆಗೆ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಷ್ಟೇ ಲಾಕ್​ಡೌನ್​ ಸಡಿಲಿಕೆಯಾಗಿದ್ದು, ರೈತರು ಸುರಿದ ಮುಂಗಾರಿನ ಮಳೆಯಿಂದಾಗಿ ಕೃಷಿಯತ್ತ ಮುಖ ಮಾಡಿದ್ದಾರೆ. ಆದರೆ ಹಲವೆಡೆ ಮಳೆಯ ತೀವ್ರತೆಯಿಂದಾಗಿ ಬೆಳೆಗಳು ಕೊಚ್ಚಿ ಹೋಗುತ್ತಿದೆ. ಹೀಗೆ ರೈತರು ಒಂದಿಲ್ಲಾ ಒಂದು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಿರುವಾಗಲೇ ಬಳ್ಳಾರಿಯ ರೈತರು ಬಿತ್ತನೆ ಬೀಜದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ 10-15 ದಿನಗಳಿಂದಲೂ ರೈತರು ಚಿಲ್ಲಿ ಬೀಜಕ್ಕಾಗಿ ಪರದಾಡುತ್ತಿದ್ದಾರೆ. ಆದರೆ ಕೃತಕ ಅಭಾವ ಸೃಷ್ಟಿಯಾಗಿರುವ ಚಿಲ್ಲಿ ಬೀಜ ರೈತರಿಗೆ ಸಿಗುತ್ತಿಲ್ಲ. ಮತ್ತೊಂದೆಡೆ ಕೂಡ್ಲಿಗಿ ತಾಲೂಕಿನಲ್ಲಿ ರೈತ ಸಂಪರ್ಕ ಕೇಂದ್ರದಿಂದ ನೀಡಿದ ಸೂರ್ಯಕಾಂತಿ ಬೀಜಗಳೇ ಕಳಪೆಯಾಗಿರುವುದು ಈಗ ಬೆಳಕಿಗೆ ಬಂದಿದೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ‘ಬೀಜರಾಜ’ ಹೆಸರಿನ ಸೂರ್ಯಕಾಂತಿ ಬಿತ್ತನೆ ಬೀಜವನ್ನು ಕೃಷಿಕರು ಖರೀದಿಸಿ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿ ಎರಡು ವಾರ ಕಳೆದರೂ ಮೊಳಕೆಯೊಡೆಯದೇ ಇರುವುದರಿಂದ ರೈತರು ನಷ್ಟ ಅನುಭವಿಸಬೇಕಾಗಿದೆ. ಈ ಸೂರ್ಯಕಾಂತಿ ಬಿತ್ತನೆ ಬೀಜವನ್ನು ಕರ್ನಾಟಕ ಬೀಜ ನಿಗಮ ಪೂರೈಸಿದ್ದನ್ನು ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ವಿತರಿಸಿದ್ದಾರೆ. ಆದರೆ ಈ ಬಿತ್ತನೆ ಬೀಜ ಈಗ ರೈತರ ಕೃಷಿ ಹುಮ್ಮಸ್ಸನ್ನು ಕುಂದಿಸಿದೆ.

ಕೊರೋನಾ ಸಂಕಷ್ಟ ಕಾಲದಲ್ಲೂ ಭೂಮಿಯನ್ನೇ ನಂಬಿದ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕಳಪೆ ಬೀಜದಿಂದ ಆಕ್ರೋಶಗೊಂಡಿರುವ ರೈತರು ಕಾನಹೊಸಹಳ್ಳಿ ರೈತ ಸಂಪರ್ಕ ಕೇಂದ್ರಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ನೂರಾರು ರೈತರು, ಕೃಷಿ ಇಲಾಖೆಯಿಂದ ವಿತರಿಸಿದ ಕಳಪೆ ಬಿತ್ತನೆ ಬೀಜದಿಂದ ರೈತರಿಗೆ ಮೋಸವಾಗಿದೆ. ಇದರಿಂದ ಅನ್ನದಾತರಿಗೆ ಆಗಿರುವ ನಷ್ಟಕ್ಕೆ ಒಂದು ವರ್ಷದ ಬೆಳೆಯ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ರೈತ ವಿರೇಶ್ ಒತ್ತಾಯಿಸಿದ್ದಾರೆ.

ಕೂಡ್ಲಿಗಿ ತಾಲೂಕಿನಲ್ಲಿ ನೂರಾರು ರೈತರು ಇದೇ ಸೂರ್ಯಕಾಂತಿ ಬೀಜ ತೆಗೆದುಕೊಂಡು ಬಿತ್ತನೆ ಮಾಡಿದ್ದಾರೆ. ಆದರೆ ಸರಿಯಾಗಿ ಮೊಳಕೆಯೊಡೆದಿಲ್ಲ. ಹೀಗಾಗಿ ರೈತ ಸಂಪರ್ಕ ಕೇಂದ್ರದಿಂದ ವಿತರಣೆ ಮಾಡಿರುವ ಬೀಜ ಕಳಪೆಯಾಗಿವೆ ಎನ್ನುವುದು ಗೊತ್ತಾಗಿದೆ. ಈಗಾಗಲೇ ಜಮೀನು ಸಿದ್ಧತೆ ಮಾಡಿಕೊಂಡು, ಸಾವಿರಾರು ವೆಚ್ಚ ಮಾಡಿ ಬಿತ್ತನೆ ಮಾಡಿದ್ದೇವೆ. ಆದರೆ ಈಗ ಅಧಿಕಾರಿಗಳು ಬೇರೆ ಬೀಜ ಕೊಡುವುದಾಗಿ ಹೇಳುತ್ತಿದ್ದಾರೆ. ರೈತರಿಗೆ ಆಗಿರುವ ನಷ್ಟ ಭರಿಸುವವರು ಯಾರು ಎನ್ನುವುದು ಈ ಭಾಗದ ರೈತರ ಪ್ರಶ್ನೆಯಾಗಿದೆ.

ಕೂಡ್ಲಿಗಿ ತಾಲೂಕಿನಲ್ಲಿ ಮಳೆಯಾಶ್ರಿತ ಬೆಳೆಗಳೇ ಹೆಚ್ಚು. ಆರಂಭದಲ್ಲಿ ಮುಂಗಾರು ಮಳೆ ಬಂದಿದ್ದರಿಂದ ರೈತರು ಬಿತ್ತನೆ ಮಾಡಿದ್ದರು. ಆದರೆ ಈಗ ಮತ್ತೆ ಬೇರೆ ಬೀಜ ತೆಗೆದುಕೊಂಡು ಬಿತ್ತನೆ ಮಾಡಿದರೆ ಮತ್ತೆ ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ಈ ಬಗ್ಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದುಗಲ್ ಅವರನ್ನು ಕೇಳಿದರೆ ಬೀಜ ಮೊಳಕೆಯೊಡೆಯದಿರುವುದು ಗಮನಕ್ಕೆ ಬಂದಿದೆ. ಆ ರೈತರಿಗೆ ಬೇರೆ ಬೀಜ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಖಾಸಗಿ ಕಂಪನಿಯ ಬೀಜಗಳು ಕಳಪೆಯಾಗಿರುವುದರ ಬಗ್ಗೆ ನೋವು ಓದಿದ್ದೇವೆ. ಆದರೆ ಸರ್ಕಾರವೇ ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಣೆ ಮಾಡುವ ಬೀಜಗಳು ಕೂಡ ಈಗ ಕಳಪೆಯಾಗಿದೆ. ಒಟ್ಟಾರೆ ರೈತರಿಗೆ ಒಂದಿಲ್ಲಾ ಒಂದು ಸಮಸ್ಯೆ ಎದುರಾಗಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:

ಕಳಪೆ ಈರುಳ್ಳಿ ಬೀಜ ನೀಡಿದ ಕಲಾಶ್ ಕಂಪನಿ; ಪರಿಹಾರಕ್ಕೆ ಚಿತ್ರದುರ್ಗ ರೈತರ ಆಗ್ರಹ

ಮೆಣಸಿನಕಾಯಿ ಬಿತ್ತನೆ ಬೀಜಕ್ಕಾಗಿ ಪರದಾಟ; ಬೆಳಗ್ಗೆ ಮೂರು ಗಂಟೆಯಿಂದ ಗೋದಾಮಿನ ಮುಂದೆ ಕಾದ ರೈತರಿಗೆ ನಿರಾಸೆ

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!