Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಂಡರ್ ಸ್ಪೋಟಕ್ಕೆ ಹೊತ್ತಿ ಉರಿದ ಕಿರಾಣಿ ಅಂಗಡಿ; ಬಳ್ಳಾರಿಯಲ್ಲಿ ಮಾವ, ಸೊಸೆ ಸಜೀವ ದಹನ

ಭೂಮಿಕಾ ಎನ್ನುವ ಬಾಲಕಿ ಕೃಷ್ಣಪ್ಪನ ಅಕ್ಕನ ಮಗಳಾಗಿದ್ದು, ಮಾವ ಸೊಸೆ ಇಬ್ಬರು ಸಜೀವ ದಹನವಾಗಿರುವುದನ್ನು ನೋಡಿ ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ. ಗ್ಯಾಸ್ ಸಿಲೆಂಡರ್​ಗೆ ಆಕಸ್ಮಿಕ ಬೆಂಕಿ ತಗುಲಿದ್ದರಿಂದ ಗ್ಯಾಸ್ ಸ್ಪೋಟಗೊಂಡಿದ್ದು, ಅಂಗಡಿ ಬೆಂಕಿಯಿಂದ ಹೊತ್ತಿ ಉರಿದಿದೆ.

ಸಿಲಿಂಡರ್ ಸ್ಪೋಟಕ್ಕೆ ಹೊತ್ತಿ ಉರಿದ ಕಿರಾಣಿ ಅಂಗಡಿ; ಬಳ್ಳಾರಿಯಲ್ಲಿ ಮಾವ, ಸೊಸೆ ಸಜೀವ ದಹನ
ಸಿಲಿಂಡರ್ ಸ್ಪೋಟಕ್ಕೆ ಹೊತ್ತಿ ಉರಿದ ಕಿರಾಣಿ ಅಂಗಡಿ
Follow us
preethi shettigar
| Updated By: Skanda

Updated on: Apr 10, 2021 | 1:54 PM

ವಿಜಯನಗರ: ಕಿರಾಣಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಶುಕ್ರವಾರ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದ ಕಿರಾಣಿ ಅಂಗಡಿಯೊಂದರಲ್ಲಿ ನಡೆದಿದೆ. ಗ್ಯಾಸ್ ಸಿಲೆಂಡರ್ ಸಿಡಿದು ತಾಯಕನಹಳ್ಳಿ ಗ್ರಾಮದ ಕೃಷ್ಣಪ್ಪ (28) ಹಾಗೂ ಭೂಮಿಕಾ (11) ಸ್ಥಳದಲ್ಲಿಯೇ ಸಜೀವ ದಹನವಾಗಿದ್ದಾರೆ. ಭೂಮಿಕಾ ಎನ್ನುವ ಬಾಲಕಿ ಕೃಷ್ಣಪ್ಪನ ಅಕ್ಕನ ಮಗಳಾಗಿದ್ದು, ಮಾವ ಸೊಸೆ ಇಬ್ಬರು ಸಜೀವ ದಹನವಾಗಿರುವುದನ್ನು ನೋಡಿ ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ. ಗ್ಯಾಸ್ ಸಿಲೆಂಡರ್​ಗೆ ಆಕಸ್ಮಿಕ ಬೆಂಕಿ ತಗುಲಿದ್ದರಿಂದ ಗ್ಯಾಸ್ ಸ್ಪೋಟಗೊಂಡಿದ್ದು, ಅಂಗಡಿ ಬೆಂಕಿಯಿಂದ ಹೊತ್ತಿಕೊಂಡು ಉರಿದಿದೆ. ಏಕಾಏಕಿ ಬೆಂಕಿ ಮುಗಿಲೆತ್ತರಕ್ಕೆ ಉರಿದಿದ್ದರಿಂದ ಶೆಡ್​ನಿಂದ ಹೊರಬರಲಾಗದೇ ಮಾವ ಸೊಸೆ ಇಬ್ಬರು ಸಾವನ್ನಪ್ಪಿದ್ದಾರೆ.

ಸಿಲೆಂಡರ್​ಗೆ ಆಕಸ್ಮಿಕ ಬೆಂಕಿ ತಗುಲಿ ಬ್ಲಾಸ್ಟ್ ಆದಾಗ ಸೊಸೆ ಭೂಮಿಕಾ ಅಂಗಡಿಯೊಳಗೆ ಇದ್ದಳು. ಮಾವ ಕೃಷ್ಣಪ್ಪ ಅಂಗಡಿಯ ಹೊರಗಡೆ ಇದ್ದರು. ಕೃಷ್ಣಪ್ಪ ತನ್ನ ಜೀವವನ್ನು ಲೆಕ್ಕಿಸದೇ ಸೊಸೆಯನ್ನು ಉಳಿಸಲು ಅಂಗಡಿಯೊಳಕ್ಕೆ ನುಗ್ಗಿದ್ದಾರೆ. ಬೆಂಕಿಯ ಕೆನ್ನಾಲಿಗೆಯಿಂದ ಹೊರಬರಲಾಗದೇ ಅವರೂ ಸೊಸೆಯ ಜೊತೆಗೆ ಬೆಂಕಿಗೆ ಬಲಿಯಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಅಕ್ಕಪಕ್ಕದ ಜನತೆ ನೀರು ತಂದು ಬೆಂಕಿ ಆರಿಸಲು ಹೋದರೂ ಪ್ರಯೋಜನವಾಗಿಲ್ಲ. ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಭಾಗಕ್ಕೆ ಅಗ್ನಿಶಾಮಕ ಠಾಣೆ ಇಲ್ಲದಿರುವುದ್ದರಿಂದ 50 ಕಿ.ಮೀ.ದೂರದ ಕೂಡ್ಲಿಗಿಯಿಂದ ಅಗ್ನಿಶಾಮಕ ವಾಹನಗಳು ಬಂದು ಬೆಂಕಿ ನಂದಿಸಬೇಕಾಗಿದೆ. ಅಷ್ಟೊತ್ತಿಗಾಗಲೇ ಜೀವಹಾನಿ, ಆಸ್ತಿಹಾನಿಯಾಗಿರುತ್ತದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅಡಿಷನಲ್ ಎಸ್​ಪಿ ಲಾವಣ್ಯ ಸೇರಿದಂತೆ ಖಾನಹೊಸಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: 

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ

ಆಸ್ಪತ್ರೆಗೆ ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದರೂ.. ರೋಗಿಯನ್ನು ಬಿಟ್ಟು ಹೊರ ಬಾರದ ವೈದ್ಯರು; ಜೀವವನ್ನೇ ಪಣಕ್ಕಿಟ್ಟು ಸರ್ಜರಿ ನಡೆಸಿದರು

(Ballari Cylinder Blast 2 dead as fire attacks on departmental store in Vijayanagar )

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್