AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಐದು ದಿನ ಸಂಪೂರ್ಣ ಲಾಕ್​ಡೌನ್; ಕೊರೊನಾ ತಡೆಯಲು ಬಳ್ಳಾರಿ ಜಿಲ್ಲಾಡಳಿತದಿಂದ ಮಹತ್ವದ ನಿರ್ಧಾರ

ಜಿಲ್ಲೆಯಲ್ಲಿ 16 ಸಾವಿರಕ್ಕೂ ಹೆಚ್ಚು ಸೋಂಕಿತರು ಹೋಮ್ ಐಸೋಲೇಶನ್​ನಲ್ಲಿದ್ದು, ಅವರನ್ನು ಕೊವಿಡ್ ಕೇರ್ ಸೆಂಟರ್​ಗೆ ಶಿಫ್ಟ್ ಮಾಡಲಾಗುವುದು. ಹಾಸ್ಟೆಲ್, ಸಮುದಾಯ ಭವನ, ಕಲ್ಯಾಣ ಮಂಟಪಗಳಲ್ಲಿ ಕೊವಿಡ್ ಕೇರ್ ಸೆಂಟರ್ ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ. ಆ ಮೂಲಕ ಕೊರೊನಾ ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

ಇಂದಿನಿಂದ ಐದು ದಿನ ಸಂಪೂರ್ಣ ಲಾಕ್​ಡೌನ್; ಕೊರೊನಾ ತಡೆಯಲು ಬಳ್ಳಾರಿ ಜಿಲ್ಲಾಡಳಿತದಿಂದ ಮಹತ್ವದ ನಿರ್ಧಾರ
ಲಾಕ್​ಡೌನ್​
preethi shettigar
|

Updated on: May 19, 2021 | 8:57 AM

Share

ಬಳ್ಳಾರಿ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಎಷ್ಟೇ ಪ್ರಯತ್ನ ಮಾಡಿದರೂ ಬಳ್ಳಾರಿ ಜಿಲ್ಲೆಯಲ್ಲಿ ಸೋಂಕು ಮಾತ್ರ ಕಡಿಮೆಯಾಗುತ್ತಿಲ್ಲ. ರಾಜ್ಯದ ಕೆಲವೇ ಕೆಲವು ಕೊರೊನಾ ರೆಡ್ ಆಲರ್ಟ್ ಜಿಲ್ಲೆಗಳಲ್ಲಿ ಬಳ್ಳಾರಿ ಕೂಡ ಒಂದು. ಕೊರೊನಾ ಪ್ರಕರಣ ಶೇಕಡಾ 47 ರಷ್ಟಿರುವ ಈ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸದ್ಯ ಲಾಕ್​ಡೌನ್ ಮೊರೆ ಹೋಗಲಾಗಿದೆ. ಇಂದಿನಿಂದ5ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್ ಮಾಡಿ ಬಳ್ಳಾರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತಪ್ಪಿಸಲು ಸರ್ಕಾರ ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ಲಾಕ್​ಡೌನ್ ಘೋಷಣೆ ಮಾಡಿತ್ತು. ಆದರೆ ಈ ಲಾಕ್​ಡೌನ್​ನಿಂದ ಜಿಲ್ಲೆಯಲ್ಲಿ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಬಳ್ಳಾರಿ, ವಿಜಯನಗರ ಉಭಯ ಜಿಲ್ಲೆಗಳಲ್ಲಿ ಈಗ ಕಠಿಣ ಲಾಕ್​ಡೌನ್ ಘೋಷಣೆ ಮಾಡಲಾಗಿದೆ.

ಇಂದು ಬೆಳಿಗ್ಗೆ 10 ರಿಂದ ಐದು ದಿನಗಳ ಕಾಲ ಉಭಯ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೂ ಕೂಡ ಅವಕಾಶ ಇರುವುದಿಲ್ಲ. ಹಾಲು, ಔಷಧಿ ಅಂಗಡಿ, ಹಾಪ್ ಕಾಮ್ಸ್ ಮೂಲಕ ತರಕಾರಿ ಹಣ್ಣು ಮಾರಾಟ ಇಷ್ಟು ಬಿಟ್ಟರೆ ಜಿಲ್ಲೆಯಲ್ಲಿ ಎಲ್ಲವೂ ಬಂದ್ ಆಗಲಿವೆ. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸಾಕಷ್ಟು ಕೈಗಾರಿಕೆ ಕಂಪನಿಗಳಿದ್ದು, ಕಂಪನಿಗಳ ಯಾವುದೇ ವಾಹನಗಳು ಕೂಡ ಸಂಚಾರ ಮಾಡುವಂತಿಲ್ಲ. ಕಂಪನಿಯಲ್ಲಿಯೇ ಸಿಬ್ಬಂದಿಗಳು ವಾಸ್ತವ್ಯ ಹೂಡಬೇಕು. ಇನ್ನೂ ಅಂತರ್ ಜಿಲ್ಲೆಗೆ ಮೆಡಿಕಲ್ ಎಮೆರ್ಜೆನ್ಸಿ ಇದ್ದವರಿಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಯಾವುದೇ ವಾಹನಗಳಿಗೂ ಪ್ರವೇಶ ಇಲ್ಲ. ಜೊತೆಗೆ ಅಂತರ್ ರಾಜ್ಯದ ಗೂಡ್ಸ್ ವಾಹನಗಳ ಹೊರತು ಪಡಿಸಿ ಯಾವುದೇ ವಾಹನ, ಜನರ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಹೇಳಿದ್ದಾರೆ.

ಜಿಲ್ಲೆಯಲ್ಲಿ 16 ಸಾವಿರಕ್ಕೂ ಹೆಚ್ಚು ಸೋಂಕಿತರು ಹೋಮ್ ಐಸೋಲೇಶನ್​ನಲ್ಲಿದ್ದು, ಅವರನ್ನು ಕೊವಿಡ್ ಕೇರ್ ಸೆಂಟರ್​ಗೆ ಶಿಫ್ಟ್ ಮಾಡಲಾಗುವುದು. ಹಾಸ್ಟೆಲ್, ಸಮುದಾಯ ಭವನ, ಕಲ್ಯಾಣ ಮಂಟಪಗಳಲ್ಲಿ ಕೊವಿಡ್ ಕೇರ್ ಸೆಂಟರ್ ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ. ಆ ಮೂಲಕ ಕೊರೊನಾ ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಈಗ ಕೊರೊನಾ ಹಾಟ್ ಸ್ಪಾಟ್ ಜಿಲ್ಲೆಯಾಗಿ ಹೊರ ಹೊಮ್ಮಿದೆ. ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಕೊರೊನಾ ಚೈನ್ ಲಿಂಕ್ ತುಂಡರಿಸಲು ಈಗ ಜಿಲ್ಲಾಡಳಿತ ಸಂಪೂರ್ಣ ಲಾಕ್​ಡೌನ್​ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೆ ಪರಿಸ್ಥಿತಿ ಹೀಗೆ ಮುಂದುವರಿದರೆ ಮತ್ತೆ ಲಾಕ್​ಡೌನ್ ವಿಸ್ತರಣೆ ಮಾಡುವ ನಿರ್ಧಾರವನ್ನ ಜಿಲ್ಲಾಡಳಿತ ಮಾಡಿದೆ.

ಇದನ್ನೂ ಓದಿ:

ಲಾಕ್​ಡೌನ್​ ನಿಯಮ ಮೀರಿದ್ರೆ ರಾಧೆ ಚಿತ್ರವನ್ನು ಪದೇಪದೇ ತೋರಿಸಲಾಗುತ್ತದೆ; ಬೆಂಗಳೂರು ಸಿಟಿ ಪೊಲೀಸ್​ ಹೀಗೆ ಟ್ವೀಟ್​ ಮಾಡಿದ್ದು ನಿಜವೇ?

ಲಾಕ್​ಡೌನ್​ ನಿಯಮ ಮೀರಿದ್ರೆ ರಾಧೆ ಚಿತ್ರವನ್ನು ಪದೇಪದೇ ತೋರಿಸಲಾಗುತ್ತದೆ; ಬೆಂಗಳೂರು ಸಿಟಿ ಪೊಲೀಸ್​ ಹೀಗೆ ಟ್ವೀಟ್​ ಮಾಡಿದ್ದು ನಿಜವೇ?

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ