AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ನಿಗದಿಯಾಗಿದ್ದ ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಿಕೆ

ನೀತಿ ಸಂಹಿತೆ ಹಾಗೂ ಅಧಿಕಾರಿಗಳು ಚುನಾವಣಾ ಕೆಲಸದಲ್ಲಿ ಬ್ಯುಸಿ ಹಿನ್ನೆಲೆ ನಾಳೆ ನಿಗದಿಯಾಗಿದ್ದ ಬಳ್ಳಾರಿ ಮೇಯರ್ ಚುನಾವಣೆಯನ್ನು ಮುಂದೂಡಿ ಕಲಬುರಗಿ ಪ್ರಾದೇಶಿಕ ಆಯುಕ್ತ ಆದೇಶ ಹೊರಡಿಸಲಾಗಿದೆ. ಲೋಕಸಭಾ ಚುನಾವಣೆಯ ಬಳಿಕ ನಡೆಸುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌ ಬಹುಮತ ಹೊಂದಿದೆ.

ನಾಳೆ ನಿಗದಿಯಾಗಿದ್ದ ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಿಕೆ
ಬಳ್ಳಾರಿ ಮಹಾನಗರ ಪಾಲಿಕೆ
ವಿನಾಯಕ ಬಡಿಗೇರ್​
| Edited By: |

Updated on: Mar 27, 2024 | 8:45 PM

Share

ಬಳ್ಳಾರಿ, ಮಾರ್ಚ್​​ 27: ನೀತಿ ಸಂಹಿತೆ ಹಾಗೂ ಅಧಿಕಾರಿಗಳು ಚುನಾವಣಾ ಕೆಲಸದಲ್ಲಿ ಬ್ಯುಸಿ ಹಿನ್ನೆಲೆ ನಾಳೆ ನಿಗದಿಯಾಗಿದ್ದ ಬಳ್ಳಾರಿ ಮೇಯರ್ ಚುನಾವಣೆ (Bellary Municipal Corporation) ಯನ್ನು ಮುಂದೂಡಿ ಕಲಬುರಗಿ ಪ್ರಾದೇಶಿಕ ಆಯುಕ್ತ ಆದೇಶ ಹೊರಡಿಸಲಾಗಿದೆ. ಲೋಕಸಭಾ ಚುನಾವಣೆಯ ಬಳಿಕ ನಡೆಸುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಾಲಿ ಮೇಯರ್ ಶ್ವೇತಾ ಅವಧಿ ಅಂತ್ಯ ಹಿನ್ನೆಲೆ ಚುನಾವಣೆ ನಿಗದಿ ಆಗಿತ್ತು. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌ ಬಹುಮತ ಹೊಂದಿದೆ.

ನಾಳೆ ನಡೆಯಬೇಕಿದ್ದ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಪಾಲಿಕೆಯ ಗದ್ದುಗೆ ಏರಲು ಆಕಾಂಕ್ಷಿಗಳು ಬರಪೂರ ಉಡುಗೊರೆಗಳನ್ನು ಹಂಚಿದ್ದರು. ಮುಲ್ಲಂಗಿ ನಂದೀಶ್, ಗಾದೆಪ್ಪ, ಪೇರಂ ವಿವೇಕ್ ಮತ್ತು ಪಕ್ಷೇತರ ಸದಸ್ಯ ಪ್ರಭಂಜನ್, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್‌ ಮತ್ತು ಉಪಮೇಯರ್ ಆಕಾಂಕ್ಷಿಗಳಾಗಿದ್ದಾರೆ. ಮೂವರು ಪಾಲೆಕೆ ಸದಸ್ಯರ ಮನೆ – ಮನೆಗೆ ಹೋಗಿ ಊಡುಗೊರೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಫೈನಲ್, ಅಧಿಕೃತ ಘೋಷಣೆಯೊಂದೆ ಬಾಕಿ

ಮುಲ್ಲಂಗಿ ನಂದೀಶ್ ಪಾಲಿಕೆ ಸದಸ್ಯರಿಗೆ ಬೆಳ್ಳಿ ತಟ್ಟೆ ಮತ್ತು ಕಾಂಗ್ರೆಸ್ ಚಿಹ್ನೆ ಇರುವ ಬಂಗಾರದ ಚಿಕ್ಕ ಆಭರಣವನ್ನು ಉಡುಗೊರೆಯಾಗಿ ನೀಡಿದ್ದರು. ಪಕ್ಷೇತರ ಸದಸ್ಯ ಪ್ರಭಂಜನ್ ರೇಷ್ಮೆ ಪಂಚೆ, ಸೀರೆ ಮತ್ತು ಇನ್ನಿಬ್ಬರುಡ್ರೈಪ್ರೂಟ್ಸ್ ಬಾಕ್ಸ್ ನೀಡಿ ಸನ್ಮಾನ ಮಾಡಿದ್ದಾರೆ.

ಇದನ್ನೂ ಓದಿ: ಬರ್ತಡೇ ದಿನವೇ ಮಾಜಿ ಮೇಯರ್ ಮಗನ ಅಟ್ಟಹಾಸ, ತಲ್ವಾರ ಝಳಪಿಸಿ ಹುಂಬತನ, ಯುವಕ ಬೆಂಗಳೂರಿನಲ್ಲಿ ಸಾವು

ಒಟ್ಟು 39 ಸದ್ಯರ ಪೈಕಿ 21 ಕಾಂಗ್ರೆಸ್, 5 ಪಕ್ಷೇತರರು ಮತ್ತು 13 ಬಿಜೆಪಿ ಸದಸ್ಯರಿದ್ದಾರೆ. ಕೆಲವು ಸದಸ್ಯರು ಬಳ್ಳಾರಿ ಶಾಸಕ ಭರತ್ ರೆಡ್ಡಿ ಬೆಂಬಲಿಗರಾಗಿದ್ದರೇ, ಕೆಲವರು ಸಚಿವ ನಾಗೇಂದ್ರ ಬೆಂಬಲಿಗರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ