AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ
ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರ ಬಂಧನ
preethi shettigar
| Edited By: sandhya thejappa|

Updated on: Apr 24, 2021 | 1:44 PM

Share

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿರುವ ಸರಿ ಸುಮಾರು 9.36 ಲಕ್ಷ ರೂಪಾಯಿಗಳ‌ ಮೊತ್ತದ ‌ಹಣವನ್ನ ದರೋಡೆ ಮಾಡಿರುವ ಪ್ರಕರಣ ಭೇದಿಸಿರುವ ಕುರುಗೋಡು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಪ್ರಿಲ್ 4 ರಂದು ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿ ಈ ದರೋಡೆ ನಡೆದಿದ್ದು, ಏಪ್ರಿಲ್ 20ರಂದು ಎಟಿಎಂ ಮಷಿನ್​ನಲ್ಲಿ ಹಣ ದರೋಡೆ ಮಾಡಿರುವ ಪ್ರಕರಣದಲ್ಲಿ ಭಾಗಿಯಾಗಿದ್ದ ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರನ್ನ ಬಂಧಿಸಲಾಗಿದೆ.

ಈ ದರೋಡೆ ನಡೆದು ಕೇವಲ ಇಪ್ಪತ್ತೇ ದಿನಗಳಲ್ಲಿ ಈ ಪ್ರಕರಣವನ್ನು ಭೇದಿಸುವಲ್ಲಿ ಕುರುಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಎಟಿಎಂ ಮಷಿನ್​ಗಳ ನಿರ್ವಾಹಕ ಉಸ್ತುವಾರಿ ವಹಿಸಿದ್ದ ಕಸ್ಟಮ್ ಸರ್ವೀಸ್​ನ ಎಂಜಿನಿಯರ್ ಲೋಕೇಶ ಹಾಗೂ ಕೆ.ವೀರೇಶ ಮತ್ತು ಎಂ.ಡಿ.ಶ್ರೀನಿವಾಸ ಎಂಬುವವರನ್ನ ಕುರುಗೋಡು ಪೊಲೀಸರು ಬಂಧಿಸಿದ್ದಾರೆ.

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ:

ATMನಲ್ಲಿ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ ಮಧುಕರ ರೆಡ್ಡಿ ಹಿಡಿಯಲು ಪೊಲೀಸರು ಪಟ್ಟ ಕಷ್ಟ ಎಷ್ಟು ಗೊತ್ತಾ?

CCB ಪೊಲೀಸರ ಭರ್ಜರಿ ಬೇಟೆ; ಕುಖ್ಯಾತ ಮನೆಗಳ್ಳರ ಬಂಧನ, ಇವರ ಬಂಧನದ ಕಥೆ ರೋಚಕ..

(Ballari police arrested three thieves who theft in atm)

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ