AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ
ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರ ಬಂಧನ
preethi shettigar
| Edited By: |

Updated on: Apr 24, 2021 | 1:44 PM

Share

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿರುವ ಸರಿ ಸುಮಾರು 9.36 ಲಕ್ಷ ರೂಪಾಯಿಗಳ‌ ಮೊತ್ತದ ‌ಹಣವನ್ನ ದರೋಡೆ ಮಾಡಿರುವ ಪ್ರಕರಣ ಭೇದಿಸಿರುವ ಕುರುಗೋಡು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಪ್ರಿಲ್ 4 ರಂದು ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿ ಈ ದರೋಡೆ ನಡೆದಿದ್ದು, ಏಪ್ರಿಲ್ 20ರಂದು ಎಟಿಎಂ ಮಷಿನ್​ನಲ್ಲಿ ಹಣ ದರೋಡೆ ಮಾಡಿರುವ ಪ್ರಕರಣದಲ್ಲಿ ಭಾಗಿಯಾಗಿದ್ದ ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರನ್ನ ಬಂಧಿಸಲಾಗಿದೆ.

ಈ ದರೋಡೆ ನಡೆದು ಕೇವಲ ಇಪ್ಪತ್ತೇ ದಿನಗಳಲ್ಲಿ ಈ ಪ್ರಕರಣವನ್ನು ಭೇದಿಸುವಲ್ಲಿ ಕುರುಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಎಟಿಎಂ ಮಷಿನ್​ಗಳ ನಿರ್ವಾಹಕ ಉಸ್ತುವಾರಿ ವಹಿಸಿದ್ದ ಕಸ್ಟಮ್ ಸರ್ವೀಸ್​ನ ಎಂಜಿನಿಯರ್ ಲೋಕೇಶ ಹಾಗೂ ಕೆ.ವೀರೇಶ ಮತ್ತು ಎಂ.ಡಿ.ಶ್ರೀನಿವಾಸ ಎಂಬುವವರನ್ನ ಕುರುಗೋಡು ಪೊಲೀಸರು ಬಂಧಿಸಿದ್ದಾರೆ.

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ:

ATMನಲ್ಲಿ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ ಮಧುಕರ ರೆಡ್ಡಿ ಹಿಡಿಯಲು ಪೊಲೀಸರು ಪಟ್ಟ ಕಷ್ಟ ಎಷ್ಟು ಗೊತ್ತಾ?

CCB ಪೊಲೀಸರ ಭರ್ಜರಿ ಬೇಟೆ; ಕುಖ್ಯಾತ ಮನೆಗಳ್ಳರ ಬಂಧನ, ಇವರ ಬಂಧನದ ಕಥೆ ರೋಚಕ..

(Ballari police arrested three thieves who theft in atm)

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!