ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ
ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರ ಬಂಧನ
Edited By:

Updated on: Apr 24, 2021 | 1:44 PM

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿರುವ ಸರಿ ಸುಮಾರು 9.36 ಲಕ್ಷ ರೂಪಾಯಿಗಳ‌ ಮೊತ್ತದ ‌ಹಣವನ್ನ ದರೋಡೆ ಮಾಡಿರುವ ಪ್ರಕರಣ ಭೇದಿಸಿರುವ ಕುರುಗೋಡು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಪ್ರಿಲ್ 4 ರಂದು ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿ ಈ ದರೋಡೆ ನಡೆದಿದ್ದು, ಏಪ್ರಿಲ್ 20ರಂದು ಎಟಿಎಂ ಮಷಿನ್​ನಲ್ಲಿ ಹಣ ದರೋಡೆ ಮಾಡಿರುವ ಪ್ರಕರಣದಲ್ಲಿ ಭಾಗಿಯಾಗಿದ್ದ ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರನ್ನ ಬಂಧಿಸಲಾಗಿದೆ.

ಈ ದರೋಡೆ ನಡೆದು ಕೇವಲ ಇಪ್ಪತ್ತೇ ದಿನಗಳಲ್ಲಿ ಈ ಪ್ರಕರಣವನ್ನು ಭೇದಿಸುವಲ್ಲಿ ಕುರುಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಎಟಿಎಂ ಮಷಿನ್​ಗಳ ನಿರ್ವಾಹಕ ಉಸ್ತುವಾರಿ ವಹಿಸಿದ್ದ ಕಸ್ಟಮ್ ಸರ್ವೀಸ್​ನ ಎಂಜಿನಿಯರ್ ಲೋಕೇಶ ಹಾಗೂ ಕೆ.ವೀರೇಶ ಮತ್ತು ಎಂ.ಡಿ.ಶ್ರೀನಿವಾಸ ಎಂಬುವವರನ್ನ ಕುರುಗೋಡು ಪೊಲೀಸರು ಬಂಧಿಸಿದ್ದಾರೆ.

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ:

ATMನಲ್ಲಿ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ ಮಧುಕರ ರೆಡ್ಡಿ ಹಿಡಿಯಲು ಪೊಲೀಸರು ಪಟ್ಟ ಕಷ್ಟ ಎಷ್ಟು ಗೊತ್ತಾ?

CCB ಪೊಲೀಸರ ಭರ್ಜರಿ ಬೇಟೆ; ಕುಖ್ಯಾತ ಮನೆಗಳ್ಳರ ಬಂಧನ, ಇವರ ಬಂಧನದ ಕಥೆ ರೋಚಕ..

(Ballari police arrested three thieves who theft in atm)