AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಕ್ಸಿನ್ ಪಡೆಯದ 120 ಸೋಂಕಿತರು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲು: ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ ಮಾಹಿತಿ

ಲಸಿಕೆ ಹಾಕಿಕೊಂಡವರಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚು ಕಾಡುತ್ತಿಲ್ಲ. ಐಸಿಯುವರಿಗೂ ಹೋಗುತ್ತಿಲ್ಲ ಎಂದು ತಿಳಿಸಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ, ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿದರು.

ವ್ಯಾಕ್ಸಿನ್ ಪಡೆಯದ 120 ಸೋಂಕಿತರು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲು: ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ ಮಾಹಿತಿ
ಬಳ್ಳಾರಿ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ
TV9 Web
| Edited By: |

Updated on:Jan 22, 2022 | 9:33 AM

Share

ಬಳ್ಳಾರಿ: ಕೊರೊನಾ ಲಸಿಕೆ (Vaccine) ಪಡೆಯದ ಸುಮಾರು 120 ಜನ ಸೋಂಕಿತರು ಬಳ್ಳಾರಿ (Bellary) ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ ಮಾಹಿತಿ ನೀಡಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ 10 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 10 ಜನರಲ್ಲಿ 8 ಜನರು ಆಕ್ಸಿಜನ್ (Oxygen) ಮೇಲೆ ಇದ್ದಾರೆ. ಇಬ್ಬರು ವೆಂಟಿಲೇಟರ್ ಮೇಲೆ ಇದ್ದಾರೆ. ವ್ಯಾಕ್ಸಿನೇಷನ್ ಮಾಡಿಸಿಕೊಳ್ಳದ ಇಬ್ಬರು ಕೊವಿಡ್​ಗೆ ಬಲಿಯಾಗಿದ್ದಾರೆ ಅಂತ ತಿಳಿಸಿದರು.

ಲಸಿಕೆ ಹಾಕಿಕೊಂಡವರಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚು ಕಾಡುತ್ತಿಲ್ಲ. ಐಸಿಯುವರಿಗೂ ಹೋಗುತ್ತಿಲ್ಲ ಎಂದು ತಿಳಿಸಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ, ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿದರು.

ಇಂಜಿನಿಯರಿಂಗ್ ಕಾಲೇಜಿನ 55 ವಿದ್ಯಾರ್ಥಿಗಳಿಗೆ ಕೊರೊನಾ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ 55 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಪ್ರಾಧ್ಯಾಪಕರು, ಸಿಬ್ಬಂದಿ ಸೇರಿದಂತೆ 65 ಜನರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸಾಮೂಹಿಕವಾಗಿ ಸುಮಾರು 700 ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು. ಸೋಂಕು ದೃಢಪಟ್ಟ ವಿದ್ಯಾರ್ಥಿಗಳನ್ನ ಸಾರಂಗಿ ಗ್ರಾಮದ ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದ್ದು, ಕೆಲ ವಿದ್ಯಾರ್ಥಿಗಳಿಗೆ ಹೋಮ್ ಐಸೊಲೇಷನ್ ಆಗುವಂತೆ ಸೂಚನೆ ನೀಡಲಾಗಿದೆ.

ಕೊಪ್ಪಳ ವಿದ್ಯಾರ್ಥಿಗಳಿಗೆ ಕೊರೊನಾ ದೃಢ ಕೊಪ್ಪಳ ಜಿಲ್ಲೆಯಲ್ಲಿ ನಿನ್ನೆ (ಜ.21) 73 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. 6 ಶಿಕ್ಷಕರು, ಶಾಲಾ ಅಡುಗೆ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಇದೆ. ಕೊರೊನಾ ಹಿನ್ನೆಲೆ 9 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜನವರಿ 26ರವರೆಗೆ ಕೊಪ್ಪಳ ಜಿಲ್ಲೆಯ 9 ಶಾಲೆಗಳಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿ

ಅಸ್ತವ್ಯಸ್ತಗೊಂಡ ವಾರ್ಡ್​ರೋಬ್ ಸರಿಪಡಿಸಿ ಕೈತುಂಬಾ ಸಂಪಾದನೆ ಮಾಡುತ್ತಿರುವ 19 ವರ್ಷದ ಯುವತಿ; ತಿಂಗಳಿಗೆ ಗಳಿಸುವ ಹಣವೆಷ್ಟು?

ಒಳ್ಳೊಳ್ಳೇ ಪುಸ್ತಕ ಖರೀದಿಗೆ ಇದು ಸಕಾಲ: ಸಾಹಿತ್ಯ ಅಕಾಡೆಮಿ, ಪುಸ್ತಕ ಪ್ರಾಧಿಕಾರ, ಭಾಷಾ ಪ್ರಾಧಿಕಾರದ ಪುಸ್ತಕಗಳ ಬೆಲೆ ಅರ್ಧಕ್ಕರ್ಧ ಕಡಿತ

Published On - 9:33 am, Sat, 22 January 22

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್