AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನಾಗಬೇಕಿದ್ದವನ ಜತೆ ಅನೈತಿಕ ಸಂಬಂಧ: ಸೆಲ್ಫಿ ವಿಡಿಯೋ ಮಾಡುತ್ತಾ ಮಹಿಳೆ ನೇಣಿಗೆ ಶರಣು

ನಾಲ್ಕು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆಯ ಗಂಡನಿಂದ ವಿಚ್ಛೇದನ ಪಡೆದುಕೊಂಡು ದೂರವಾಗಿದ್ದಳು. ಬಳಿಕ ಆಕೆ ವಿವಾಹಿತ ಪುರುಷನ ಜೊತೆಗೆ ಸಂಬಂಧ ಇಟ್ಟು ಕೊಂಡಿದ್ದಳು. ಆದ್ರೆ, ಇದೀಗ ಅವನು ಸಹ ಕೈಕೊಟ್ಟಿದ್ದು, ದಿಕ್ಕುತೋಚದೇ ದುರಂತ ಅಂತ್ಯಕಂಡಿದ್ದಾಳೆ. ಸಂಬಂಧದಲ್ಲಿ ಅಣ್ಣನಾಗಬೇಕಿದ್ದವನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದುಮ ಇದೀಗ ಸೆಲ್ಫಿ ವಿಡಿಯೋನಲ್ಲಿ ಕೆಲವರ ಹೆಸರುಗಳನ್ನು ಹೇಳುತ್ತಾ ನೇಣಿಗೆ ಶರಣಾಗಿದ್ದಾಳೆ. ಅಷ್ಟಕ್ಕೂ ಆಗಿದ್ದೇನು? ಈ ಘಟನೆ ನಡೆದಿದ್ದೆಲ್ಲಿ ಎನ್ನುವ ವಿವರ ಈ ಕೆಳಗಿನಂತಿದೆ.

ಅಣ್ಣನಾಗಬೇಕಿದ್ದವನ ಜತೆ ಅನೈತಿಕ ಸಂಬಂಧ: ಸೆಲ್ಫಿ ವಿಡಿಯೋ ಮಾಡುತ್ತಾ ಮಹಿಳೆ ನೇಣಿಗೆ ಶರಣು
ಮುನ್ನಿ
ವಿನಾಯಕ ಬಡಿಗೇರ್​
| Edited By: |

Updated on: Dec 22, 2025 | 8:01 PM

Share

ಬಳ್ಳಾರಿ, (ಡಿಸೆಂಬರ್ 22): ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬರು (Woman) ಸೆಲ್ಫಿ ವಿಡಿಯೋ ಮಾಡುತ್ತಲ್ಲೇ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಬಳ್ಳಾರಿ(Bellary) ಹುಸೇನ್ ನಗರದಲ್ಲಿ ನಡೆದಿದೆ. ತನಗಾದ ಅನ್ಯಾಯವನ್ನು ವಿಡಿಯೋನಲ್ಲಿ ಹೇಳಿಕೊಳ್ಳುತ್ತಲೇ ಮುನ್ನಿ (23) ಎನ್ನುವ ಮಹಿಳೆ ನೇಣಿಗೆ ಕೊರಳೊಡ್ಡಿದ್ದಾಳೆ. ನಾಲ್ಕು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಮುನ್ನಿ, ವರ್ಷದ ಹಿಂದೆ ಗಂಡನಿಂದ ವಿಚ್ಛೇದನ ಪಡೆದು ಒಂಟಿಯಾಗಿದ್ದಳು. ಬಳಿಕ ಮಹಮ್ಮದ್ ಶೇಕ್ಷಾವಲ್ಲಿ ಎನ್ನುವ ವಿವಾಹಿತ ಪುರುಷನ ಜೊತೆಗೆ ಸ್ನೇಹ ಬೆಳೆದಿತ್ತು. ಸ್ನೇಹ ಸಂಬಂಧಕ್ಕೆ ತಿರುಗಿತ್ತು. ಅದ್ರೆ, ಇದೀಗ ಏಕಾಏಕಿ ವಿಡಿಯೋ ಮಾಡುತ್ತಲೇ ನೇಣಿಗೆ ಶರಣಾಗಿದ್ದಾಳೆ.

ಗಂಡನಿಂದ ದೂರವಾಗಿದ್ದ ಮುನ್ನಿ

23 ವರ್ಷದ ಮುನ್ನಿ ಮೂರು ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಆದ್ರೆ, ಅದೇನಾಯೋ ಏನೋ ಒಂದು ವರ್ಷದ ಹಿಂದೆ ಪತಿಗೆ ವಿಚ್ಛೇದನೆ ನೀಡಿ ಎರಡು ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ಈ ಮಧ್ಯೆ ಮಹಮ್ಮದ್ ಶೇಕ್ ಎನ್ನುವ ವಿವಾಹಿತ ಪುರುಷನ ಜೊತೆಗೆ ಸ್ನೇಹ ಬೆಳೆದಿತ್ತು. ಸ್ನೇಹ ಸಂಬಂಧಕ್ಕೆ ತಿರುಗಿತ್ತು. ಅದ್ರೆ, ಇತ್ತೀಚಿಗೆ ಮಹಮ್ಮದ್ ಶೇಕ್ಷಾವಲ್ಲಿ ಹಾಗೂ ಮುನ್ನಿ ಮಧ್ಯೆ ಭಿನ್ನಾಭಿಪ್ರಾಯ ಏರ್ಪಟ್ಟಿತು. ಅಗಾಗ ಗಲಾಟೆಯೂ ಅಗುತ್ತಿದ್ದವು. ಇದೇ ಕಾರಣಕ್ಕೆ ಮುನ್ನಿ ನೇಣಿಗೆ ಶರಣಾಗಿದ್ದಾಳೆ. ಸಾಯುವ ಮುನ್ನ ತನಗಾದ ಅನ್ಯಾಯದ ವಿವರಣೆ ನೀಡುತ್ತಲೇ ಲೈವ್ ವಿಡಿಯೋ ಮಾಡಿ ನೇಣಿಗೆ ಶರಣಾಗಿದ್ದಾಳೆ.

ಇದನ್ನೂ ಓದಿ: ಅತ್ತ ಮದ್ವೆಯಾದ ಗಂಡನೂ ಇಲ್ಲ, ಇತ್ತ ಪ್ರಿಯಕರನೂ ಇಲ್ಲ: ಯುವತಿಯನ್ನು ಒಂಟಿ ಮಾಡಿದ ಆ ವಿಡಿಯೋ

ಅನೈತಿಕ ಸಂಬಂಧವೇ ಮುಳುವಾಯ್ತಾ?

ಇನ್ನೂ ಗಂಡ ಇಲ್ಲದ ಮುನ್ನಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದಳು. ಮೆಹಂದಿ ಹಾಕೋದು ಸೇರಿದಂತೆ ಮೇಕಪ್​ ಸಹ ಮಾಡುತ್ತಿದ್ದಳು. ಹೀಗಿರುವಾಗ ಮುನ್ನಿ ಎರಡನೇ ಮದುವೆ ಮಾಡಲು ಮನೆಯಲ್ಲಿ ಸಿದ್ಧತೆ ನಡೆದಿತ್ತು. ಆದ್ರೆ, ಶೆಕ್ಷಾವಲಿ ಜೊತೆಗೆ ಇರೋ ಸಂಬಂಧ ಮುಳುವಾಗಿ ಸಾಯುವ ಹಂತಕ್ಕೆ ಬಂದಿದೆ. ನಿನ್ನೆ (ಡಿಸೆಂಬರ್ 21) ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮುನ್ನಿ ನೇಣಿಗೆ ಶರಣಾಗಿದ್ದಾಳೆ. ವಿಷಯ ತಿಳಿಯುತ್ತಲೇ ಗಾಂಧಿ ನಗರ ಠಾಣೆಗೆ ಅಗಮಿಸಿದ ಶಾಸಕ ಭರತ್ ರೆಡ್ಡಿ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.

ಅಣ್ಣನಾಗಬೇಕಿದ್ದವನ ಜತೆ ಸಂಬಂಧ

ಇನ್ನು ಶೇಕ್ಷಾವಲ್ಲಿ ಸಂಬಂಧದಲ್ಲಿ  ಮೃತಳ ಅಣ್ಣನಾಗುತ್ತಾನೆ ಎನ್ನುವ ಮಾಹಿತಿಯನ್ನ ಮುನ್ನಿ ಕುಟುಂಬಸ್ಥರು ತಿಳಿಸಿದ್ದಾರೆ. ಹೀಗಾಗಿ ಅನೈತಿಕ ಸಂಬಂಧ ಒಳ್ಳೆದಲ್ಲ ಅಂತ ಹಲವು ಬಾರಿ ಕುಟುಂಬಸ್ಥರು ಇಬ್ಬರಿಗೂ ತಿಳಿ ಹೇಳಿದ್ದರಂತೆ. ಆದ್ರೆ ಇಬ್ಬರ ನಡುವೆ ನಿನ್ನೆ ಏನಾಗಿದೊಯೋ ಏನು ಮುನ್ನಿ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈ ಸಂಬಂಧದಲ್ಲಿ ಅಣ್ಣನಾಗಬೇಕಿದ್ದವನ ಕಿರುಕುಳಕ್ಕೆ ಬೇಸತ್ತು ಮುನ್ನಿ ಆತ್ಮಹತ್ಯೆ ಮಾಡ್ಕೊಂಡಿದ್ದಾಳೆಂದು ಕುಟುಂಬದವರ ಆರೋಪಿವಾಗಿದೆ. ಸದ್ಯ ಬಳ್ಳಾರಿಯ ಗಾಂಧಿನಗರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಬಳಿಕವೇ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ