ಬಳ್ಳಾರಿಯಲ್ಲಿ 31 ಕೆಜಿ ಬೆಳ್ಳಿ ವಸ್ತು ಕಳ್ಳತನ ಕೇಸ್ : ಕೆಲಸ ಕೊಟ್ಟ ಮಾಲೀಕನ ಅಂಗಡಿಗೆ ಕನ್ನ ಹಾಕಿದ ಖದೀಮರು ಅಂದರ್

ಕೆಲ ದಿನಗಳ ಹಿಂದೆ ನಗರದ ಜುವೆಲರ್ಸ್ ಶಾಪ್​ನಲ್ಲಿ‌ 31 ಕೆ.ಜಿ ಬೆಳ್ಳಿ ಕಳ್ಳತನವಾಗಿತ್ತು. ಈ ಹಿನ್ನಲೆ ಅಂಗಡಿ ಮಾಲೀಕ ಚಂದ್ರಕಾಂತ ಸೋನಿ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದರು. ಇದೀಗ 6 ಆರೋಪಿಗಳನ್ನು ಬಳ್ಳಾರಿ ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಬಳ್ಳಾರಿಯಲ್ಲಿ 31 ಕೆಜಿ ಬೆಳ್ಳಿ ವಸ್ತು ಕಳ್ಳತನ ಕೇಸ್ : ಕೆಲಸ ಕೊಟ್ಟ ಮಾಲೀಕನ ಅಂಗಡಿಗೆ ಕನ್ನ ಹಾಕಿದ ಖದೀಮರು ಅಂದರ್
ಆರೋಪಿಗಳು ಅರೆಸ್ಟ್​
Follow us
|

Updated on: Jun 22, 2023 | 1:13 PM

ಬಳ್ಳಾರಿ: ಕೆಲ ದಿನಗಳ ಹಿಂದೆ ನಗರದ ಜುವೆಲರ್ಸ್ ಶಾಪ್​ನಲ್ಲಿ‌ 31 ಕೆ.ಜಿ ಬೆಳ್ಳಿ(Silver) ಕಳ್ಳತನವಾಗಿತ್ತು. ಈ ಹಿನ್ನಲೆ ಅಂಗಡಿ ಮಾಲೀಕ ಚಂದ್ರಕಾಂತ ಸೋನಿ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದರು. ಇದೀಗ 6 ಆರೋಪಿಗಳನ್ನು ಬಳ್ಳಾರಿ(Ballari) ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಹೌದು ಅಂಗಡಿ ಮಾಲೀಕ ಚಂದ್ರಕಾಂತ ಸೋನಿ ಇಲ್ಲದ ವೇಳೆ ನೋಡಿಕೊಂಡು ಅಲ್ಲಿಯೇ ಕೆಲಸ ಮಾಡುತ್ತಿದ್ದ ಆರು ಜನ ಆರೋಪಿಗಳು 22 ಲಕ್ಷ ರೂಪಾಯಿ ಮೌಲ್ಯದ 31 ಕೆ.ಜಿ ಬೆಳ್ಳಿ ಕಳವು ಮಾಡಿದ್ದರು. ಈ ಕುರಿತು ಪೊಲೀಸರಿಗೆ ತಲೆ ನೋವಾಗಿದ್ದ ಆರೋಪಿಗಳನ್ನ ಅಂಗಡಿ ಮಾಲೀಕ ನೀಡಿದ ಸುಳಿವಿನ ಮೇರೆಗೆ ಆರೋಪಿಗಳು ಅಂದರ್​ ಆಗಿದ್ದಾರೆ.

ಇನ್ನು ಬಹುದಿನಗಳಿಂದ ಚಂದ್ರಕಾಂತ ಸೋನಿ ಅವರ ಜೊತೆಗಿದ್ದ ಆರೋಪಿಯೊಬ್ಬ ಅವರ ಕಾರಿನಲ್ಲಿ 2 ಕೆ.ಜಿ ಬೆಳ್ಳಿ ಇಟ್ಟಿದ್ದ. ಇದೇ ಇಡೀ ಪ್ರಕರಣ ಹೊರಬರಲು ಕಾರಣವಾಯಿತು. ಹೌದು ಕಾರಿನಲ್ಲಿದ್ದ ಎರಡು ಕೆ.ಜಿ ಬೆಳ್ಳಿ ಅಂಗಡಿ ಮಾಲೀಕನ ಕಣ್ಣಿಗೆ ಬಿದ್ದಿದ್ದು, ಈ ಬಗ್ಗೆ ಸಂಶಯಗೊಂಡ ಚಂದ್ರಕಾಂತ್​ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ತನಿಖೆ ನಡೆಸಿದಾಗ ಆರು ಆರೋಪಿಗಳು ಸೇರಿಕೊಂಡು 31 ಕೆ.ಜಿ. ಬೆಳ್ಳಿಯನ್ನ ‌ಕಳವು ಮಾಡಿದ್ದು ಪತ್ತೆಯಾಗಿದೆ. ಈ ಪ್ರಕರಣ ಪತ್ತೆಗೆ ಸಿರುಗುಪ್ಪ ಡಿವೈಎಸ್ಪಿ ವೆಂಕಟೇಶ ಮತ್ತು ಬಳ್ಳಾರಿ ಗ್ರಾಮೀಣ ಇನ್ಸ್‌ಪೆಕ್ಟರ್ ಪಿ. ನಿರಂಜನ್​ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಇದನ್ನೂ ಓದಿ:ರೈಲ್ವೆ ಪ್ರಯಾಣದ ವೇಳೆ ವಸ್ತುಗಳು ಕಳ್ಳತನವಾದರೇ ರೈಲ್ವೆ ಇಲಾಖೆ ಹೊಣೆಯಲ್ಲ: ಸುಪ್ರಿಂ ಕೋರ್ಟ್​

ಸಾಮಿಲ್​ನಲ್ಲಿ ಒಂಟೆ ಪತ್ತೆ; ದಾಳಿ ನಡೆಸಿ ಒಂಟೆಯನ್ನ ರಕ್ಷಿಸಿದ ಪೊಲೀಸರು

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಸೈಯದ್ ಬಿಲಾಲ್ ಎಂಬುವವರಿಗೆ ಸೇರಿದ ರೆಹಮಾನಿಯಾ ಸಾಮಿಲ್​ನಲ್ಲಿ ಒಂಟೆ ಪತ್ತೆಯಾಗಿದ್ದು, ಬಕ್ರಿದ್ ಹಬ್ಬಕ್ಕೆ ಒಂಟೆಯನ್ನು ಕಡಿಯುವ ಉದ್ದೇಶದಿಂದ ಅಕ್ರಮವಾಗಿ ತಂದಿರುವ ಶಂಕೆ ವ್ಯಕ್ತವಾಗಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಶಿರಾಳಕೊಪ್ಪ ಪೋಲಿಸರ ಭರ್ಜರಿ ಕಾರ್ಯಾಚರಣೆ ನಡೆಸಿ, ಪ್ರಾಣಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ, ಒಂಟೆಯನ್ನ ಪೋಲಿಸರು ರಕ್ಷಿಸಿದ್ದಾರೆ. ಇನ್ನು ಈ ಹಿಂದೆ ಸೈಯದ್ ಬಿಲಾಲ್‌ ಎಂಬ ವ್ಯಕ್ತಿ ಮೇಲೆ ಆಕ್ರಮವಾಗಿ ಜಿಂಕೆ ಮರಿಯನ್ನು ಸಾಮಿಲ್​ನಲ್ಲಿ ಕಟ್ಟಿ ಹಾಕಿದ್ದ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಒಂಟೆ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ