AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ 31 ಕೆಜಿ ಬೆಳ್ಳಿ ವಸ್ತು ಕಳ್ಳತನ ಕೇಸ್ : ಕೆಲಸ ಕೊಟ್ಟ ಮಾಲೀಕನ ಅಂಗಡಿಗೆ ಕನ್ನ ಹಾಕಿದ ಖದೀಮರು ಅಂದರ್

ಕೆಲ ದಿನಗಳ ಹಿಂದೆ ನಗರದ ಜುವೆಲರ್ಸ್ ಶಾಪ್​ನಲ್ಲಿ‌ 31 ಕೆ.ಜಿ ಬೆಳ್ಳಿ ಕಳ್ಳತನವಾಗಿತ್ತು. ಈ ಹಿನ್ನಲೆ ಅಂಗಡಿ ಮಾಲೀಕ ಚಂದ್ರಕಾಂತ ಸೋನಿ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದರು. ಇದೀಗ 6 ಆರೋಪಿಗಳನ್ನು ಬಳ್ಳಾರಿ ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಬಳ್ಳಾರಿಯಲ್ಲಿ 31 ಕೆಜಿ ಬೆಳ್ಳಿ ವಸ್ತು ಕಳ್ಳತನ ಕೇಸ್ : ಕೆಲಸ ಕೊಟ್ಟ ಮಾಲೀಕನ ಅಂಗಡಿಗೆ ಕನ್ನ ಹಾಕಿದ ಖದೀಮರು ಅಂದರ್
ಆರೋಪಿಗಳು ಅರೆಸ್ಟ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 22, 2023 | 1:13 PM

Share

ಬಳ್ಳಾರಿ: ಕೆಲ ದಿನಗಳ ಹಿಂದೆ ನಗರದ ಜುವೆಲರ್ಸ್ ಶಾಪ್​ನಲ್ಲಿ‌ 31 ಕೆ.ಜಿ ಬೆಳ್ಳಿ(Silver) ಕಳ್ಳತನವಾಗಿತ್ತು. ಈ ಹಿನ್ನಲೆ ಅಂಗಡಿ ಮಾಲೀಕ ಚಂದ್ರಕಾಂತ ಸೋನಿ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದರು. ಇದೀಗ 6 ಆರೋಪಿಗಳನ್ನು ಬಳ್ಳಾರಿ(Ballari) ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಹೌದು ಅಂಗಡಿ ಮಾಲೀಕ ಚಂದ್ರಕಾಂತ ಸೋನಿ ಇಲ್ಲದ ವೇಳೆ ನೋಡಿಕೊಂಡು ಅಲ್ಲಿಯೇ ಕೆಲಸ ಮಾಡುತ್ತಿದ್ದ ಆರು ಜನ ಆರೋಪಿಗಳು 22 ಲಕ್ಷ ರೂಪಾಯಿ ಮೌಲ್ಯದ 31 ಕೆ.ಜಿ ಬೆಳ್ಳಿ ಕಳವು ಮಾಡಿದ್ದರು. ಈ ಕುರಿತು ಪೊಲೀಸರಿಗೆ ತಲೆ ನೋವಾಗಿದ್ದ ಆರೋಪಿಗಳನ್ನ ಅಂಗಡಿ ಮಾಲೀಕ ನೀಡಿದ ಸುಳಿವಿನ ಮೇರೆಗೆ ಆರೋಪಿಗಳು ಅಂದರ್​ ಆಗಿದ್ದಾರೆ.

ಇನ್ನು ಬಹುದಿನಗಳಿಂದ ಚಂದ್ರಕಾಂತ ಸೋನಿ ಅವರ ಜೊತೆಗಿದ್ದ ಆರೋಪಿಯೊಬ್ಬ ಅವರ ಕಾರಿನಲ್ಲಿ 2 ಕೆ.ಜಿ ಬೆಳ್ಳಿ ಇಟ್ಟಿದ್ದ. ಇದೇ ಇಡೀ ಪ್ರಕರಣ ಹೊರಬರಲು ಕಾರಣವಾಯಿತು. ಹೌದು ಕಾರಿನಲ್ಲಿದ್ದ ಎರಡು ಕೆ.ಜಿ ಬೆಳ್ಳಿ ಅಂಗಡಿ ಮಾಲೀಕನ ಕಣ್ಣಿಗೆ ಬಿದ್ದಿದ್ದು, ಈ ಬಗ್ಗೆ ಸಂಶಯಗೊಂಡ ಚಂದ್ರಕಾಂತ್​ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ತನಿಖೆ ನಡೆಸಿದಾಗ ಆರು ಆರೋಪಿಗಳು ಸೇರಿಕೊಂಡು 31 ಕೆ.ಜಿ. ಬೆಳ್ಳಿಯನ್ನ ‌ಕಳವು ಮಾಡಿದ್ದು ಪತ್ತೆಯಾಗಿದೆ. ಈ ಪ್ರಕರಣ ಪತ್ತೆಗೆ ಸಿರುಗುಪ್ಪ ಡಿವೈಎಸ್ಪಿ ವೆಂಕಟೇಶ ಮತ್ತು ಬಳ್ಳಾರಿ ಗ್ರಾಮೀಣ ಇನ್ಸ್‌ಪೆಕ್ಟರ್ ಪಿ. ನಿರಂಜನ್​ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಇದನ್ನೂ ಓದಿ:ರೈಲ್ವೆ ಪ್ರಯಾಣದ ವೇಳೆ ವಸ್ತುಗಳು ಕಳ್ಳತನವಾದರೇ ರೈಲ್ವೆ ಇಲಾಖೆ ಹೊಣೆಯಲ್ಲ: ಸುಪ್ರಿಂ ಕೋರ್ಟ್​

ಸಾಮಿಲ್​ನಲ್ಲಿ ಒಂಟೆ ಪತ್ತೆ; ದಾಳಿ ನಡೆಸಿ ಒಂಟೆಯನ್ನ ರಕ್ಷಿಸಿದ ಪೊಲೀಸರು

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಸೈಯದ್ ಬಿಲಾಲ್ ಎಂಬುವವರಿಗೆ ಸೇರಿದ ರೆಹಮಾನಿಯಾ ಸಾಮಿಲ್​ನಲ್ಲಿ ಒಂಟೆ ಪತ್ತೆಯಾಗಿದ್ದು, ಬಕ್ರಿದ್ ಹಬ್ಬಕ್ಕೆ ಒಂಟೆಯನ್ನು ಕಡಿಯುವ ಉದ್ದೇಶದಿಂದ ಅಕ್ರಮವಾಗಿ ತಂದಿರುವ ಶಂಕೆ ವ್ಯಕ್ತವಾಗಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಶಿರಾಳಕೊಪ್ಪ ಪೋಲಿಸರ ಭರ್ಜರಿ ಕಾರ್ಯಾಚರಣೆ ನಡೆಸಿ, ಪ್ರಾಣಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ, ಒಂಟೆಯನ್ನ ಪೋಲಿಸರು ರಕ್ಷಿಸಿದ್ದಾರೆ. ಇನ್ನು ಈ ಹಿಂದೆ ಸೈಯದ್ ಬಿಲಾಲ್‌ ಎಂಬ ವ್ಯಕ್ತಿ ಮೇಲೆ ಆಕ್ರಮವಾಗಿ ಜಿಂಕೆ ಮರಿಯನ್ನು ಸಾಮಿಲ್​ನಲ್ಲಿ ಕಟ್ಟಿ ಹಾಕಿದ್ದ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಒಂಟೆ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು