AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ 31 ಕೆಜಿ ಬೆಳ್ಳಿ ವಸ್ತು ಕಳ್ಳತನ ಕೇಸ್ : ಕೆಲಸ ಕೊಟ್ಟ ಮಾಲೀಕನ ಅಂಗಡಿಗೆ ಕನ್ನ ಹಾಕಿದ ಖದೀಮರು ಅಂದರ್

ಕೆಲ ದಿನಗಳ ಹಿಂದೆ ನಗರದ ಜುವೆಲರ್ಸ್ ಶಾಪ್​ನಲ್ಲಿ‌ 31 ಕೆ.ಜಿ ಬೆಳ್ಳಿ ಕಳ್ಳತನವಾಗಿತ್ತು. ಈ ಹಿನ್ನಲೆ ಅಂಗಡಿ ಮಾಲೀಕ ಚಂದ್ರಕಾಂತ ಸೋನಿ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದರು. ಇದೀಗ 6 ಆರೋಪಿಗಳನ್ನು ಬಳ್ಳಾರಿ ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಬಳ್ಳಾರಿಯಲ್ಲಿ 31 ಕೆಜಿ ಬೆಳ್ಳಿ ವಸ್ತು ಕಳ್ಳತನ ಕೇಸ್ : ಕೆಲಸ ಕೊಟ್ಟ ಮಾಲೀಕನ ಅಂಗಡಿಗೆ ಕನ್ನ ಹಾಕಿದ ಖದೀಮರು ಅಂದರ್
ಆರೋಪಿಗಳು ಅರೆಸ್ಟ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 22, 2023 | 1:13 PM

Share

ಬಳ್ಳಾರಿ: ಕೆಲ ದಿನಗಳ ಹಿಂದೆ ನಗರದ ಜುವೆಲರ್ಸ್ ಶಾಪ್​ನಲ್ಲಿ‌ 31 ಕೆ.ಜಿ ಬೆಳ್ಳಿ(Silver) ಕಳ್ಳತನವಾಗಿತ್ತು. ಈ ಹಿನ್ನಲೆ ಅಂಗಡಿ ಮಾಲೀಕ ಚಂದ್ರಕಾಂತ ಸೋನಿ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದರು. ಇದೀಗ 6 ಆರೋಪಿಗಳನ್ನು ಬಳ್ಳಾರಿ(Ballari) ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಹೌದು ಅಂಗಡಿ ಮಾಲೀಕ ಚಂದ್ರಕಾಂತ ಸೋನಿ ಇಲ್ಲದ ವೇಳೆ ನೋಡಿಕೊಂಡು ಅಲ್ಲಿಯೇ ಕೆಲಸ ಮಾಡುತ್ತಿದ್ದ ಆರು ಜನ ಆರೋಪಿಗಳು 22 ಲಕ್ಷ ರೂಪಾಯಿ ಮೌಲ್ಯದ 31 ಕೆ.ಜಿ ಬೆಳ್ಳಿ ಕಳವು ಮಾಡಿದ್ದರು. ಈ ಕುರಿತು ಪೊಲೀಸರಿಗೆ ತಲೆ ನೋವಾಗಿದ್ದ ಆರೋಪಿಗಳನ್ನ ಅಂಗಡಿ ಮಾಲೀಕ ನೀಡಿದ ಸುಳಿವಿನ ಮೇರೆಗೆ ಆರೋಪಿಗಳು ಅಂದರ್​ ಆಗಿದ್ದಾರೆ.

ಇನ್ನು ಬಹುದಿನಗಳಿಂದ ಚಂದ್ರಕಾಂತ ಸೋನಿ ಅವರ ಜೊತೆಗಿದ್ದ ಆರೋಪಿಯೊಬ್ಬ ಅವರ ಕಾರಿನಲ್ಲಿ 2 ಕೆ.ಜಿ ಬೆಳ್ಳಿ ಇಟ್ಟಿದ್ದ. ಇದೇ ಇಡೀ ಪ್ರಕರಣ ಹೊರಬರಲು ಕಾರಣವಾಯಿತು. ಹೌದು ಕಾರಿನಲ್ಲಿದ್ದ ಎರಡು ಕೆ.ಜಿ ಬೆಳ್ಳಿ ಅಂಗಡಿ ಮಾಲೀಕನ ಕಣ್ಣಿಗೆ ಬಿದ್ದಿದ್ದು, ಈ ಬಗ್ಗೆ ಸಂಶಯಗೊಂಡ ಚಂದ್ರಕಾಂತ್​ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ತನಿಖೆ ನಡೆಸಿದಾಗ ಆರು ಆರೋಪಿಗಳು ಸೇರಿಕೊಂಡು 31 ಕೆ.ಜಿ. ಬೆಳ್ಳಿಯನ್ನ ‌ಕಳವು ಮಾಡಿದ್ದು ಪತ್ತೆಯಾಗಿದೆ. ಈ ಪ್ರಕರಣ ಪತ್ತೆಗೆ ಸಿರುಗುಪ್ಪ ಡಿವೈಎಸ್ಪಿ ವೆಂಕಟೇಶ ಮತ್ತು ಬಳ್ಳಾರಿ ಗ್ರಾಮೀಣ ಇನ್ಸ್‌ಪೆಕ್ಟರ್ ಪಿ. ನಿರಂಜನ್​ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಇದನ್ನೂ ಓದಿ:ರೈಲ್ವೆ ಪ್ರಯಾಣದ ವೇಳೆ ವಸ್ತುಗಳು ಕಳ್ಳತನವಾದರೇ ರೈಲ್ವೆ ಇಲಾಖೆ ಹೊಣೆಯಲ್ಲ: ಸುಪ್ರಿಂ ಕೋರ್ಟ್​

ಸಾಮಿಲ್​ನಲ್ಲಿ ಒಂಟೆ ಪತ್ತೆ; ದಾಳಿ ನಡೆಸಿ ಒಂಟೆಯನ್ನ ರಕ್ಷಿಸಿದ ಪೊಲೀಸರು

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಸೈಯದ್ ಬಿಲಾಲ್ ಎಂಬುವವರಿಗೆ ಸೇರಿದ ರೆಹಮಾನಿಯಾ ಸಾಮಿಲ್​ನಲ್ಲಿ ಒಂಟೆ ಪತ್ತೆಯಾಗಿದ್ದು, ಬಕ್ರಿದ್ ಹಬ್ಬಕ್ಕೆ ಒಂಟೆಯನ್ನು ಕಡಿಯುವ ಉದ್ದೇಶದಿಂದ ಅಕ್ರಮವಾಗಿ ತಂದಿರುವ ಶಂಕೆ ವ್ಯಕ್ತವಾಗಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಶಿರಾಳಕೊಪ್ಪ ಪೋಲಿಸರ ಭರ್ಜರಿ ಕಾರ್ಯಾಚರಣೆ ನಡೆಸಿ, ಪ್ರಾಣಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ, ಒಂಟೆಯನ್ನ ಪೋಲಿಸರು ರಕ್ಷಿಸಿದ್ದಾರೆ. ಇನ್ನು ಈ ಹಿಂದೆ ಸೈಯದ್ ಬಿಲಾಲ್‌ ಎಂಬ ವ್ಯಕ್ತಿ ಮೇಲೆ ಆಕ್ರಮವಾಗಿ ಜಿಂಕೆ ಮರಿಯನ್ನು ಸಾಮಿಲ್​ನಲ್ಲಿ ಕಟ್ಟಿ ಹಾಕಿದ್ದ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಒಂಟೆ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ