ತೆಕ್ಕಲಕೋಟೆ ಉತ್ಖನನದ ವೇಳೆ ಶಿಲಾಯುಗ ಕಾಲದ 3ನೇ ಅಸ್ಥಿಪಂಜರ ಪತ್ತೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಬಳ್ಳಾರಿಯ ತೆಕ್ಕಲಕೋಟೆ ಉತ್ಖನನದಲ್ಲಿ ಶಿಲಾಯುಗದ ಮೂರನೇ ಅಸ್ಥಿಪಂಜರ ಪತ್ತೆಯಾಗಿದೆ. ಈ ಹಿಂದೆ 2 ಅಸ್ಥಿಪಂಜರಗಳು ದೊರೆತಿದ್ದವು. ಶೋಧಕರು ಉತ್ಖನನ ಕಾರ್ಯ ಸ್ಥಗಿತಗೊಳಿಸಿದ್ದು, ಉತ್ಖನನ ಸ್ಥಳಕ್ಕೆ ಬಳ್ಳಾರಿ SP ಡಾ.ಸುಮನ್ ಫನ್ನೆಕರ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಅಸ್ಥಿಪಂಜರಗಳ ನಿಖರ ಕಾಲಮಾನದ ನಿರ್ಧಾರ ಕಾರ್ಬನ್ ಡೇಟಿಂಗ್ ಪರೀಕ್ಷೆ ಬಳಿಕ ಅಂತಿಮವಾಗಿ ತಿಳಿಯಬೇಕಿದೆ.

ತೆಕ್ಕಲಕೋಟೆ ಉತ್ಖನನದ ವೇಳೆ ಶಿಲಾಯುಗ ಕಾಲದ 3ನೇ ಅಸ್ಥಿಪಂಜರ ಪತ್ತೆ: ಇಲ್ಲಿದೆ ಸಂಪೂರ್ಣ ಮಾಹಿತಿ
ಪತ್ತೆಯಾದ ಮೂರನೇ ಅಸ್ಥಿಪಂಜರ
Image Credit source: Tv9 Kannada
Edited By:

Updated on: Feb 13, 2026 | 6:36 PM

ಬಳ್ಳಾರಿ, ಫೆಬ್ರವರಿ 13: ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನದ (Excavation) ವೇಳೆ ಶಿಲಾಯುಗದ ಕಾಲದ 3ನೇ ಅಸ್ಥಿಪಂಜರ ಪತ್ತೆಯಾಗಿದೆ. ಮಡಿಕೆ ಹೊರ ತೆಗೆಯುವ ವೇಳೆ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ ಸಂಶೋಧಕರು ಉತ್ಖನನ ‌ಕಾರ್ಯವನ್ನು ಸ್ಥಗಿತಗೊಳಿಸಿದ್ದಾರೆ. ಉತ್ಖನನ ಸ್ಥಳಕ್ಕೆ ಬಳ್ಳಾರಿ SP ಡಾ.ಸುಮನ್ ಫನ್ನೆಕರ್ ಭೇಟಿ ನೀಡಿ, ಅಸ್ಥಿಪಂಜರ ಮತ್ತು ಮಡಿಕೆ ಕುರಿತು ಮಾಹಿತಿ ಪಡೆದಿದ್ದಾರೆ.

ಈ ಹಿಂದೆ ಪತ್ತೆಯಾಗಿತ್ತು 2 ಅಸ್ಥಿಪಂಜರಗಳು

ಅಮೆರಿಕಾದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಉತ್ಖನನ ತಂಡದ ಸಹ ನಿರ್ದೇಶಕಿ ನಮಿತಾ ಎಸ್. ಸುಗಂಧಿ ನೇತೃತ್ವದ ಸಂಶೋಧಕರ ತಂಡ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ಕಾರ್ಯ ನಡೆಸುವ ವೇಳೆ ಕೆಲ ದಿನಗಳ ಹಿಂದಷ್ಟೇ 5.5 ಅಡಿ ಉದ್ದದ ಎರಡು ಸಂಪೂರ್ಣ ಮಾನವ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಆರಂಭದಲ್ಲಿ ಮಣ್ಣನ್ನು ಅಗೆದಾಗ ಮೊದಲು ಮಾನವ ಮೂಳೆಗಳು ಮಾತ್ರ ಸಿಕ್ಕಿದ್ದವು. ಆದರೆ ಬಳಿಕ ಹೆಚ್ಚಿನ ಆಳ ಅಗೆದಾಗ ಒಂದರ ಪಕ್ಕದಲ್ಲೊಂದು ಅಸ್ಥಿಪಂಜರಗಳು ಕಂಡುಬಂದಿದ್ದವು. ಆ ಬಳಿಕ ದೊರೆತ ಮೂರನೇ ಅಸ್ಥಿಪಂಜರ ಇದಾಗಿದೆ.

ಇದನ್ನೂ ಓದಿ: ಲಕ್ಕುಂಡಿ ಉತ್ಖನನ ಕಾರ್ಯ ಅಪಾಯದ ಹಂತಕ್ಕೆ; ಅಧಿಕಾರಿ, ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಅಸ್ಥಿಪಂಜರಗಳು ಯಾವುದೇ ರೀತಿಯಲ್ಲೂ ಹಾಳಾಗದೆ ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ. ಸಿಕ್ಕಿರುವ ಅಸ್ಥಿಪಂಜರಗಳು  ಸುಮಾರು 3,000 ರಿಂದ 5,000 ವರ್ಷಗಳ ಹಿಂದಿನವು ಎಂದು ಅಂದಾಜಿಸಲಾಗಿದ್ದು, ನಿಖರ ಕಾಲಮಾನದ ನಿರ್ಧಾರ ಕಾರ್ಬನ್ ಡೇಟಿಂಗ್ ಪರೀಕ್ಷೆ ಬಳಿಕ ಅಂತಿಮವಾಗಿ ತಿಳಿಯಬೇಕಿದೆ. ಮೈಸೂರು ಪ್ರಾಶ್ಚವಸ್ತು ಇಲಾಖೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ಎಮ್. ಎಸ್. ನಾಗರಾಜ ರಾವ್ 1964ರಲ್ಲಿ ಇದೇ ತೆಕ್ಕಲಕೋಟೆಯಲ್ಲಿ ಉತ್ಖನನ ನಡೆಸಿದ್ದರು. ಈ ಬಗ್ಗೆ The stone is hill dwellers in Tekkalakote ಪುಸ್ತಕದಲ್ಲಿ ಅವರು ಆ ಬಗ್ಗೆ ಸಂಪೂರ್ಣ ವಿವರ ನೀಡಿದ್ದರು ಎಂಬುದು ಕೂಡ ಇಲ್ಲಿ ಗಮನಾರ್ಹ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.