AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ: ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಗಂಡ ಹೆಂಡತಿ ಜಗಳ ಅಂದ್ರೆ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಇವರದ್ದು ಸಾವಿನ ತನಕ. ಹೌದು.. ಕುರಿ ಮೇಯಿಸಲು ಬೆಳಗಾವಿಯಿಂದ ಬಳ್ಳಾರಿಗೆ ಬಂದಿದ್ದ ಕುಟುಂಬದಲ್ಲಿ ಗಲಾಟೆಯಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ನಾಲ್ವರ ಸಾವಿನಲ್ಲಿ ಅಂತ್ಯವಾಗಿದೆ. ತಾಯಿ ತನ್ನ ಮೂರು ಪುಟ್ಟ ಕಂದಮ್ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ: ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
Mother Suicide with Children
ವಿನಾಯಕ ಬಡಿಗೇರ್​
| Updated By: ರಮೇಶ್ ಬಿ. ಜವಳಗೇರಾ|

Updated on: Jun 18, 2025 | 8:56 PM

Share

ಬಳ್ಳಾರಿ, (ಜೂನ್ 18): ಮೂವರು ಮಕ್ಕಳ ಜೊತೆ ತಾಯಿ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆ(Suicide)  ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ (Bellary) ಜಿಲ್ಲೆ ಕುರುಗೋಡು ತಾಲೂಕಿನ ಬರದನಹಳ್ಳಿಯಲ್ಲಿ ನಡೆದಿದೆ. ಬೆಳಗಾವಿ (Belagavi) ಮೂಲದ ತಾಯಿ ಸಿದ್ದಮ್ಮ(30) ತನ್ನ ಜೊತೆಗೆ ಮಕ್ಕಳಾದ ಅಭಿಗ್ನ(8), ಅವಣಿ(6), ಆರ್ಯ(4) ಕೃಷಿ ಹೊಂಡಕ್ಕೆ ತಳ್ಳಿ ಬಳಿಕ ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕುರಿ ಮೇಯಿಸಲು ಬೆಳಗಾವಿಯಿಂದ ಬರದನಹಳ್ಳಿಗೆ ಬಂದಿದ್ದು, ಈ ವೇಳೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದೆ. ಇದರಿಂದ ಮನನೊಂದು ಸಿದ್ದಮ್ಮ ಮಕ್ಕಳ ಜತೆ ಸಾವಿಗೆ ಶರಣಾಗಿದ್ದಾಳೆ.

ಬೆಳಗಾವಿ ಮೂಲದ ಸಿದ್ದಮ್ಮ ಪತಿ ಜೊತೆ ಕುರಿ ಮೇಯಿಸಲು ಬಂದಿದ್ದು, ಬರದನಹಳ್ಳಿಯ ರಾಘವೇಂದ್ರ ಎಂಬುವವರ ಜಮೀನಿನಲ್ಲಿ ಕುರಿ ಹಟ್ಟಿ ಹಾಕಿಕೊಂಡಿದ್ದರು. ಆದ್ರೆ, ಪತಿ ಕುಮಾರ್ ಹಾಗೂ ಪತ್ನಿ ಸಿದ್ದಮ್ಮ ನಡುವೆ ನಿನ್ನೆ (ಜೂನ್ 17) ಗಲಾಟೆಯಾಗಿದೆ. ಬಳಿಕ ಮೂವರು ಮಕ್ಕಳ ಜೊತೆ ಕುರಿ ಮೇಯಿಸಲು ತೆರಳಿದ್ದ ಸಿದ್ದಮ್ಮ, ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೊದಲು ಸಿದ್ದಮ್ಮ ತನ್ನ ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿದ್ದಾಳೆ. ನಂತರ ಕೊನೆ ತಾನು ಸಹ ಜಿಗಿದಿದ್ದಾಳೆ.

ಸಂಜೆಯಾದರೂ ಕುರಿಗಳು, ಪತ್ನಿ, ಮಕ್ಕಳು ಹಿಂದಿರುಗದ ಹಿನ್ನೆಲೆಯಲ್ಲಿ ಪತಿ ಹುಡುಕಾಡಿದ್ದಾನೆ. ಆ ವೇಳೆ ಕುರಿಗಳು ಕೃಷಿ ಹೊಂಡದ ಬಳಿಯೇ ನಿಂತಿದ್ದರಿಂದ ಕುಮಾರ್ ಗೆ ಅನುಮಾನ ಬಂದಿದ್ದು, ಹೊಂಡಕ್ಕೆ ಇಳಿದು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ನಾಲ್ವರ ಸಾವಿನಿಂದ ಆಘಾತಕ್ಕೊಳಗಾದ ಕುಮಾರ್, ಸಂಬಂಧಿಕರಿಗೆ ಮಾಹಿತಿ ನೀಡಿದ್ದಾನೆ. ಸದ್ಯ ಮೃತ ಸಿದ್ದಮ್ಮ ಸಹೋದರನ ದೂರಿನ ಅನ್ವಯ ಕುರುಗೋಡು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಸಂಸಾರದಲ್ಲಿ ಒಂದೇ ಒಂದು ಗಲಾಟೆ, ವೈಮನಸ್ಸಿನಿಂದ ಸಿಟ್ಟಿಗೆ ಕೈಕೊಟ್ಟಿದ್ದಕ್ಕೆ ನಾಲ್ಕು ಜೀವಗಳು ಬಲಿಯಾಗಿವೆ. ಇದರಿಂದ ಯಾವುದೇ ಕಾರಣಕ್ಕೂ ಸಿಟ್ಟಿನಲ್ಲಿ ದುಡುಕಿನ ನಿರ್ಧಾರ ಕೈಗೊಳ್ಳಬಾರದು. ಆ ಕ್ಷಣದಲ್ಲಿ ದುಡುಕಿನ ನಿರ್ಧಾರರಿಂದ ಏನೆಲ್ಲಾ ಸಂಭವಿಸುತ್ತವೆ ಎನ್ನುವುದನ್ನು ಇದೊಂದು ಉದಾಹರಣೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ