AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಮ್ಮಾಯಿ ಭಾಷಣಕ್ಕೆ ಅಡ್ಡಿ: ಸಂಶೋಧನಾ ವಿದ್ಯಾರ್ಥಿಯ ನೋಂದಣಿ ರದ್ದುಗೊಳಿಸ್ತೇವೆ ಎಂದು ವಿಶ್ವವಿದ್ಯಾಲಯದಿಂದ ನೋಟಿಸ್

Basavaraj Bommai Speech: ವಿಶ್ವವಿದ್ಯಾಲಯಕ್ಕೆ ಅನುದಾನ, ವಿದ್ಯಾರ್ಥಿಗಳಿಗೆ ಅನುದಾನ ಕೋರಿ ಸದರಿ ವಿದ್ಯಾರ್ಥಿ ದೊಡ್ಡಬಸಪ್ಪ ಮನವಿ ಮಾಡಿದ್ದ. ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಭಾಷಣಕ್ಕೆ ಅಡ್ಡಿಪಡಿಸಿದ್ದೀರಿ ಎಂದು ವಿದ್ಯಾರ್ಥಿ ದೊಡ್ಡಬಸಪ್ಪ ಮೇಲೆ ಆರೋಪ ಮಾಡಲಾಗಿದೆ. ಏಪ್ರಿಲ್ 16 ರಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಯ ಕಾರ್ಯಕ್ರಮದ ಅಂಗವಾಗಿ ಭಾಗಿಯಾಗಿದ್ದ ವೇಳೆ ಈ ಘಟನೆ ನಡೆದಿತ್ತು.

ಬೊಮ್ಮಾಯಿ ಭಾಷಣಕ್ಕೆ ಅಡ್ಡಿ: ಸಂಶೋಧನಾ ವಿದ್ಯಾರ್ಥಿಯ ನೋಂದಣಿ ರದ್ದುಗೊಳಿಸ್ತೇವೆ ಎಂದು ವಿಶ್ವವಿದ್ಯಾಲಯದಿಂದ ನೋಟಿಸ್
ಸಿಎಂ ಬೊಮ್ಮಾಯಿ ಭಾಷಣಕ್ಕೆ ಅಡ್ಡಿ: ಸಂಶೋಧನಾ ವಿದ್ಯಾರ್ಥಿಯ ನೊಂದಣಿ ರದ್ದುಗೊಳಿಸ್ತೇವೆ ಎಂದು ವಿಶ್ವವಿದ್ಯಾಲಯದಿಂದ ನೋಟಿಸ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 19, 2022 | 2:11 PM

ವಿಜಯನಗರ: ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾಷಣಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಸಂಶೋಧನಾ ವಿದ್ಯಾರ್ಥಿಯ ನೊಂದಣಿ ರದ್ದುಗೊಳಿಸುತ್ತೇವೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯವು (Hampi Kannada University) ತನ್ನ ಸಂಶೋಧನಾ ವಿದ್ಯಾರ್ಥಿಗೆ ನೋಟಿಸ್ (research student) ಜಾರಿಗೊಳಿಸಿದೆ. ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ವಿದ್ಯಾರ್ಥಿ ಎ.ಕೆ. ದೊಡ್ಡಬಸಪ್ಪ ಸಿಎಂ‌ ಬೊಮ್ಮಾಯಿ ಭಾಷಣಕ್ಕೆ (CM Basavaraj Bommai speech) ಅಡ್ಡಿಪಡಿಸಿದ ಆರೋಪಕ್ಕೆ ತುತ್ತಾದವರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಸದರಿ ವಿದ್ಯಾರ್ಥಿಯ ನೋಂದಣಿ ರದ್ದುಗೊಳಿಸುವ ಸಂಬಂಧ ನೋಟಿಸ್ ಜಾರಿ ಮಾಡಲಾಗಿದೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ವಿದ್ಯಾರ್ಥಿ ದೊಡ್ಡಬಸಪ್ಪ ನೋಂದಣಿ ರದ್ದುಗೊಳಿಸಿ, ವಿಶ್ವವಿದ್ಯಾಲಯದಿಂದ ಅವರನ್ನು ಬಿಡುಗಡೆ ಮಾಡುವಂತೆ ಪತ್ರ ನೀಡಿದೆ. ಕುಲಸಚಿವ ಡಾ. ಸುಬ್ಬಣ್ಣ ರೈ ಅವರಿಂದ ವಿದ್ಯಾರ್ಥಿಗೆ ಪತ್ರ ರವಾನೆಯಾಗಿದೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘಟನೆ ಕಟ್ಟಿಕೊಂಡು ವಾತಾವರಣ ಕಲುಷಿತಗೊಳಿಸುವ ಕೆಲಸ ಮಾಡಿದ್ದೀರಿ. ವಿಶ್ವವಿದ್ಯಾಲಯದ ನುಡಿಹಬ್ಬದಲ್ಲಿ ರಾಜ್ಯಪಾಲರಿಗೆ ಹಲವು ಬೇಡಿಕೆಗಳ ಕುರಿತು ಮನವಿ ಮಾಡಿದ್ದೀರಿ ಎಂದು ವಿದ್ಯಾರ್ಥಿ ದೊಡ್ಡಬಸಪ್ಪಗೆ ನೋಟಿಸ್ ನೀಡಲಾಗಿದೆ.

ವಿಶ್ವವಿದ್ಯಾಲಯಕ್ಕೆ ಅನುದಾನ, ವಿದ್ಯಾರ್ಥಿಗಳಿಗೆ ಅನುದಾನ ಕೋರಿ ಸದರಿ ವಿದ್ಯಾರ್ಥಿ ದೊಡ್ಡಬಸಪ್ಪ ಮನವಿ ಮಾಡಿದ್ದ. ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಭಾಷಣಕ್ಕೆ ಅಡ್ಡಿಪಡಿಸಿದ್ದೀರಿ ಎಂದು ವಿದ್ಯಾರ್ಥಿ ದೊಡ್ಡಬಸಪ್ಪ ಮೇಲೆ ಆರೋಪ ಮಾಡಲಾಗಿದೆ. ಏಪ್ರಿಲ್ 16 ರಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಯ ಕಾರ್ಯಕ್ರಮದ ಅಂಗವಾಗಿ ಭಾಗಿಯಾಗಿದ್ದ ವೇಳೆ ಈ ಘಟನೆ ನಡೆದಿತ್ತು. ಈ ವೇಳೆ ಭಾಷಣಕ್ಕೆ ಅಡ್ಡಿಪಡಿಸಲಾಗಿದೆ ಎಂದು ವಿವಿ ಆಡಳಿತ ಮಂಡಳಿ ಆರೋಪ ಮಾಡಿದೆ. ಮೂರು ದಿನದೊಳಗೆ ಸಮಜಾಯಿಷಿ ನೀಡುವಂತೆ ಸೂಚನೆ ನೀಡಲಾಗಿದ್ದು, ಇಲ್ಲವಾದಲ್ಲಿ ವಿಶ್ವವಿದ್ಯಾಲಯದಿಂದ ಬಿಡುಗಡೆ ಮಾಡುವುದಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯ ನೋಟಿಸ್ ನೀಡಿದೆ.

ಇದೂ ಓದಿ: DK Shivakumar: ಡಿ.ಕೆ. ಶಿವಕುಮಾರ್​ಗೆ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಇದೂ ಓದಿ: ಸಿಎಂ ಆದ ಬಳಿಕ ಮೊದಲ ಬಾರಿಗೆ ಶೃಂಗೇರಿಗೆ ಭೇಟಿ ಕೊಟ್ಟ ಸಿಎಂ ಬೊಮ್ಮಾಯಿ; ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಿಸುವುದಾಗಿ ಭರವಸೆ

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ