AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋಗೆ ಡಿಕ್ಕಿಯಾದ ಸರ್ಕಾರಿ ಬಸ್​, ಸ್ಥಳದಲ್ಲೇ ಇಬ್ಬರ ಸಾವು; ಹೈದ್ರಾಬಾದ್​​ಗೆ ಹೋಗುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ

ಸರ್ಕಾರಿ ಬಸ್​ ಟೈರ್ ಸ್ಫೋಟವಾಗಿ ಆಟೋಗೆ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಪ್ಪಿನಕೇರಿ ಬಳಿ ನಡೆದಿದೆ.

ಆಟೋಗೆ ಡಿಕ್ಕಿಯಾದ ಸರ್ಕಾರಿ ಬಸ್​, ಸ್ಥಳದಲ್ಲೇ ಇಬ್ಬರ ಸಾವು; ಹೈದ್ರಾಬಾದ್​​ಗೆ ಹೋಗುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 22, 2022 | 8:07 PM

Share

ವಿಜಯನಗರ: ಸರ್ಕಾರಿ ಬಸ್​ (KSRTC) ಟೈರ್ ಸ್ಫೋಟವಾಗಿ ಆಟೋಗೆ (Auto) ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಜಿಲ್ಲೆಯ ಕೂಡ್ಲಿಗಿ (Kudalgi) ತಾಲೂಕಿನ ಕುಪ್ಪಿನಕೇರಿ ಬಳಿ ನಡೆದಿದೆ. ಕೂಡ್ಲಿಗಿಯ ಎಸ್.ಎ.ವಿ.ಟಿ ಕಾಲೇಜಿನ (College) ವಿದ್ಯಾರ್ಥಿನಿಪುಷ್ಪಲತಾ(20), ಮೀನಾಕ್ಷಿ(38) ಮೃತ ದುರ್ದೈವಿಗಳು. ಸರ್ಕಾರಿ ಬಸ್​ ದಾವಣಗೆರೆಯಿಂದ ಕೂಡ್ಲಿಗಿ ಮಾರ್ಗವಾಗಿ ಬಳ್ಳಾರಿಗೆ ತೆರಳುತ್ತಿತ್ತು. ಈ ವೇಳೆ ಬಸ್​ ಟೈರ್ ಸ್ಫೋಟವಾಗಿ ಆಟೋಗೆ ಡಿಕ್ಕಿಯಾಗಿದೆ. ಪರಿಣಾಮ  ಆಟೋ, ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೆ ಇಬ್ಬರು ಸಾವನ್ನಪ್ಪಿದ್ದು, ಆಟೋದಲ್ಲಿದ್ದ ರಮೇಶ, ಗೌಡ್ರು ಈರಣ್ಣ, ಅಭಿಷೇಕ್, ಸ್ವಾತಿ ಎಂಬುವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬಳ್ಳಾರಿ ಆಸ್ಪತ್ರೆ ಮತ್ತು ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆ  ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಅಪರಿಚಿತ ಮಹಿಳೆಯರಿಬ್ಬರ ಮೃತದೇಹ ಪತ್ತೆ ಪ್ರಕರಣ: ಸುಳಿವು ಕೊಟ್ಟವರಿಗೆ ಮಂಡ್ಯ ಪೊಲೀಸರಿಂದ 1 ಲಕ್ಷ ಬಹುಮಾನ

ಭಾಲ್ಕಿಯಿಂದ ಹೈದ್ರಾಬಾದ್​​ಗೆ ಹೋಗುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ

ಬೀದರ್​​:  ಭಾಲ್ಕಿಯಿಂದ ಹೈದ್ರಾಬಾದ್ ಗೆ ಹೋಗುತ್ತಿದ್ದ  ಡಸ್ಟರ್ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ  ಕಾರು ಸಂಪೂರ್ಣ ಹೊತ್ತಿ ಉರಿದಿರುವ ಘಟನೆ   ಬೀದರ್ ‌ತಾಲೂಕಿನ‌ ಹೊನ್ನಿಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅದೃಷ್ಟವಶಾವತಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶ ಪಾಸಿಂಗ್ ಇದ್ದ ಡಸ್ಟರ್ ಕಾರಿಗೆ ಬೆಂಕಿ ಹತ್ತಿ ಹೊಗೆ‌ ಬರಲಾರಂಭಿಸಿದ ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರು ತಕ್ಷಣ ‌ಕೆಳಗಿಳಿದಿದ್ದಾರೆ.  ನೋಡು ನೋಡುತ್ತಿದ್ದಂತೆ ಕಾರು ಬೆಂಕಿಯ ಕೆನ್ನಾಲಿಗೆಗೆ ಬೆಂದು ಹೋಗಿದೆ.

ಇದನ್ನು ಓದಿ: ಟಿವಿ9 ರಹಸ್ಯ ಕಾರ್ಯಾಚರಣೆ ವರದಿಯ ಬಿಗ್​ ಇಂಪ್ಯಾಕ್ಟ್: ಸೆಂಟ್ರಲ್ ಜೈಲಿನ 7 ಸಿಬ್ಬಂದಿ ವರ್ಗಾವಣೆ!

ವೃದ್ದೆಯ ಮೂರು ಲಕ್ಷ ಚಿನ್ನದ ಸರ ಕದ್ದು ಪರಾರಿ

ಕೊಪ್ಪಳ: ಹಾಡುಹಗಲೆ ವೃದ್ದೆಯ ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಕದ್ದು ಪರಾರಿ ಕಳ್ಳರು ಪರಾರಿಯಾಗಿರುವ ಘಟನೆ  ಜಿಲ್ಲೆಯ ಗಂಗಾವತಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಬಾಪಿರೆಡ್ಡಿ ಕ್ಯಾಂಪ್ ನಿವಾಸಿ ಕನಕರತ್ನ ಎಂಬ ವೃದ್ದೆ ಮೂರು ಲಕ್ಷ ಮೌಲ್ಯದ ಚಿನ್ನದ ಸರ ಧರಿಸಿಕೊಂಡು ಗಂಗಾವತಿ ಇಂದ ಬಾಪಿರೆಡ್ಡಿ ಕ್ಯಾಂಪ್ ಗೆ ಹೊರಟಿದ್ದರು. ಈ ವೇಳೆ ಚಿನ್ನದ ಸರ ಎಗುರಿಸಿ ಕಳ್ಳರು ಪರಾರಿಯಾಗಿದ್ದಾರೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:07 pm, Wed, 22 June 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್