AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಪೋ ಅಧಿಕಾರಿಗಳ ನಿರ್ಲಕ್ಷ್ಯ: ಬಸ್ ರಿಪೇರಿ ಮಾಡುವ ವೇಳೆ ಕೆಎಸ್​ಆರ್​​ಟಿಸಿ ಮೆಕಾನಿಕ್ ದಾರುಣ ಸಾವು

ಬಸ್ ಕೆಳಗಡೆ ತುಂಡಾಗಿದ್ದ ಬುಷ್ ರಾಡ್ ಸರಿಪಡಿಸೋ ವೇಳೆ ಅವಘಡ ಸಂಭವಿಸಿದೆ. ರಾಡ್ ತುಂಡಾಗಿ ಕಾರ್ಮಿಕನ ಗಂಟಲಿಗೆ ಸಿಲುಕಿ ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ. ಮೃತ ಮಂಜುನಾಥ ಬಾದನಹಟ್ಟಿ ನಿವಾಸಿ.

ಡಿಪೋ ಅಧಿಕಾರಿಗಳ ನಿರ್ಲಕ್ಷ್ಯ: ಬಸ್ ರಿಪೇರಿ ಮಾಡುವ ವೇಳೆ ಕೆಎಸ್​ಆರ್​​ಟಿಸಿ ಮೆಕಾನಿಕ್ ದಾರುಣ ಸಾವು
ಅಧಿಕಾರಿಗಳ ನಿರ್ಲಕ್ಷ್ಯ: ಬಸ್ ರಿಪೇರಿ ಮಾಡುವ ವೇಳೆ ಕೆಎಸ್​ಆರ್​​ಟಿಸಿ ಮೆಕಾನಿಕ್ ದಾರುಣ ಸಾವು
TV9 Web
| Edited By: |

Updated on:May 21, 2022 | 3:01 PM

Share

ಬಳ್ಳಾರಿ: ಇಲ್ಲಿನ ಕುರುಗೋಡು KSTRC ಡಿಪೋದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು ಮೆಕಾನಿಕ್ ದಾರುಣವಾಗಿ ಮೃತಪಟ್ಟಿದ್ದಾರೆ. ಇದಕ್ಕೆ ಡಿಪೋ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ಮೆಕಾನಿಕ್ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಡಿಪೋದಲ್ಲಿ ಬಸ್ ರಿಪೇರಿ ಮಾಡುವ ವೇಳೆ ಸಂಭವಿಸಿದ ಅವಘಡದಲ್ಲಿ KSTRC ಮೆಕಾನಿಕ್ ಟಿ ಮಂಜುನಾಥ ದರುಂತ ಅಂತ್ಯ ಕಂಡಿದ್ದಾರೆ.

ಬಸ್ ಕೆಳಗಡೆ ತುಂಡಾಗಿದ್ದ ಬುಷ್ ರಾಡ್ ಸರಿಪಡಿಸೋ ವೇಳೆ ಅವಘಡ ಸಂಭವಿಸಿದೆ. ರಾಡ್ ತುಂಡಾಗಿ ಕಾರ್ಮಿಕನ ಗಂಟಲಿಗೆ ಸಿಲುಕಿ ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ. ಮೃತ ಮಂಜುನಾಥ ಬಾದನಹಟ್ಟಿ ನಿವಾಸಿ. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ರ್ಯಾಂಪ್ ವ್ಯವಸ್ಥೆ ಕಲ್ಪಿಸದೇ ಮೆಕಾನಿಕ್ ಗೆ ರಿಪೇರಿ ಮಾಡಲು ಹೇಳಿದ್ದರಿಂದ ಈ ದುರಂತ ಸಂಭವಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀಕೆಂಡ್​ ಶಾಪಿಂಗ್: ಬ್ರಿಗೇಡ್ ರಸ್ತೆಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿಂದ ಜಿಗಿದು ಯುವಕ-ಯುವತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಶನಿವಾರ ವೀಕೆಂಡ್ ವೇಳೆ​ ಶಾಪಿಂಗ್ ಗೆ ಬಂದಿದ್ದ ಯುವಕ-ಯುವತಿ ಸಾರ್ವಜನಿಕರೆದುರೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬ್ರಿಗೇಡ್ ರಸ್ತೆಯ ಶಾಂಪಿಂಗ್ ಕಾಂಪ್ಲೆಕ್ಸ್ ನಿಂದ ಜಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಯುವತಿಯ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಆಕೆಯನ್ನು ಸ್ಥಳೀಯ ಕಬ್ಬನ್ ಪಾರ್ಕ್ ಪೊಲೀಸರು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕೋಡಿ: ಕುಡಿದ ಅಮಲಿನಲ್ಲಿ ಬಾವಿಗೆ ಬಿದ್ದು ಇಹಲೋಕ ತ್ಯಜಿಸಿದ ಯುವಕ

ಚಿಕ್ಕೋಡಿ: ಕುಡಿದ ಅಮಲಿನಲ್ಲಿ ಬಾವಿಗೆ ಬಿದ್ದು ಯುವಕನೊಬ್ಬ ಇಹಲೋಕ ತ್ಯಜಿಸಿದ್ದಾರೆ. ಸಾಗರ ಹೆರವಾಡೆ (23) ಮೃತಪಟ್ಟವ. ಈತ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದ ನಿವಾಸಿ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಗ್ರಾಮದ ಹೊರವಲಯದ ಬಾವಿಯಲ್ಲಿ ಬಿದ್ದು ಸಾವಿಗೀಡಾಗಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಈತ ಕೃಷ್ಣಾ ಕಿತ್ತೂರ ಗ್ರಾಮದಲ್ಲಿ ಜರುಗುತ್ತಿದ್ದ ಲಕ್ಷ್ಮೀ ಜಾತ್ರೆಗೆ ಆಗಮಿಸಿದ್ದ. ಕುಡಿದ ಅಮಲಿನಲ್ಲಿ ಈತ ಬಾವಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಈತನ ಜೇಬಿನಲ್ಲಿ ತಂಬಾಕು, ಮಾವಾ ಸಿಕ್ಕಿದೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಡಿವೈಡರ್ ಗೆ ಡಿಕ್ಕಿ ಹೊಡೆದು ಸಿಮೆಂಟ್ ಲಾರಿ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಿಮೆಂಟ್ ಲಾರಿ ಪಲ್ಟಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಲ್ಲೇನಹಳ್ಳಿ ಬಳಿ ನಡೆದಿದೆ. ಅದೃಷ್ಟವಶಾತ್ ಪ್ರಾಣಪಾಯದಿಂದ ಚಾಲಕ ಪಾರಾಗಿದ್ದಾನೆ. ಸಿಮೆಂಟ್ ಲಾರಿ ಮಧುಗಿರಿಯಿಂದ ಕೊಡಿಗೇನಹಳ್ಳಿ ಕಡೆಗೆ ತೆರಳುತ್ತಿತ್ತು. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Also Read:  Common Superstitions: ನದಿಯಲ್ಲಿ ನಾಣ್ಯ ಹಾಕುವುದು, ಬಾಗಿಲಿಗೆ ನಿಂಬೆಕಾಯಿ- ಮೆಣಸಿನಕಾಯಿ ಕಟ್ಟುವುದು ಏಕೆ ಗೊತ್ತಾ!?

Also Read: Health Tips: ರಾತ್ರಿಯ ವೇಳೆ ಮರೆತು ಕೂಡ ಈ ಹಣ್ಣುಗಳನ್ನು ಸೇವಿಸಬೇಡಿ: ಅವು ಯಾವುವು? ಯಾಕೆ? ತಿಳಿಯೋಣ

Published On - 1:53 pm, Sat, 21 May 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ