AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರಸಭೆ, ಗ್ರಾ.ಪಂ ಸದಸ್ಯರಿಗೆ ದೀಪಾವಳಿ ಬಂಪರ್ ಗಿಫ್ಟ್: ನಗದು, ಚಿನ್ನ, ಬೆಳ್ಳಿ ನೀಡಿದ ಸಚಿವ ಆನಂದ್ ಸಿಂಗ್

ನಗರಸಭೆ ಮತ್ತು‌‌ ಪಟ್ಟಣ ಪಂಚಾಯಿತಿ ಸದಸ್ಯರಿಗೆ ತಲಾ 1 ಲಕ್ಷದ 44 ಸಾವಿರ ರೂಪಾಯಿ ನಗದು, 144 ಗ್ರಾಂ ಚಿನ್ನ, ಒಂದು ಕೆ.ಜಿ ಬೆಳ್ಳಿ, ರೇಷ್ಮೆ ಸೀರೆ, ಪಂಚೆ, ಅಂಗಿ, ಮುತ್ತಿನ ಹಾರ ಮತ್ತು ಡ್ರೈ ಫ್ರೋಟ್ಸ್ ನೀಡಿದ್ದಾರೆ.

ನಗರಸಭೆ, ಗ್ರಾ.ಪಂ ಸದಸ್ಯರಿಗೆ ದೀಪಾವಳಿ ಬಂಪರ್ ಗಿಫ್ಟ್: ನಗದು, ಚಿನ್ನ, ಬೆಳ್ಳಿ ನೀಡಿದ ಸಚಿವ ಆನಂದ್ ಸಿಂಗ್
ನಗರಸಭೆ, ಗ್ರಾ.ಪಂ ಸದಸ್ಯರಿಗೆ ದೀಪಾವಳಿ ಬಂಪರ್ ಗಿಫ್ಟ್
TV9 Web
| Updated By: ಆಯೇಷಾ ಬಾನು|

Updated on:Oct 23, 2022 | 11:57 AM

Share

ವಿಜಯನಗರ: ಹೊಸಪೇಟೆ ಕ್ಷೇತ್ರದ ಜನಪ್ರತಿನಿಧಿಗಳಿಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್(Anand Singh) ಭರ್ಜರಿ ದೀಪಾವಳಿ(Deepavali 2022) ಉಡುಗೊರೆ ನೀಡಿದ್ದಾರೆ. ನಗರಸಭೆ ಮತ್ತು‌‌ ಪಟ್ಟಣ ಪಂಚಾಯಿತಿ ಸದಸ್ಯರಿಗೆ ಹಾಗೂ 182 ಗ್ರಾ.ಪಂ ಸದಸ್ಯರಿಗೆ ಬೆಳ್ಳಿ, ನಗದು, ರೇಷ್ಮೆ ಸೀರೆ ಮತ್ತು ಪಂಚೆ ನೀಡಿ ದೀಪಾವಳಿ ಹಬ್ಬದ ಲಕ್ಷ್ಮೀ ಪೂಜೆಗೆ ಆಹ್ವಾನಿಸಿದ್ದಾರೆ.

ಚುನಾವಣೆ ಸಮೀಪ ಹಿನ್ನೆಲೆ ಸ್ವಕ್ಷೇತ್ರದ ಜನಪ್ರತಿನಿಧಿಗಳ ಮನವೊಲಿಸಲು ಸಚಿವ ಆನಂದ್ ಸಿಂಗ್ ಭರ್ಜರಿ ಪ್ಲ್ಯಾನ್ ಮಾಡಿದ್ದು ನಗರಸಭೆ ಮತ್ತು‌‌ ಪಟ್ಟಣ ಪಂಚಾಯಿತಿ ಸದಸ್ಯರಿಗೆ ತಲಾ 1 ಲಕ್ಷದ 44 ಸಾವಿರ ರೂಪಾಯಿ ನಗದು, 144 ಗ್ರಾಂ ಚಿನ್ನ, ಒಂದು ಕೆ.ಜಿ ಬೆಳ್ಳಿ, ರೇಷ್ಮೆ ಸೀರೆ, ಪಂಚೆ, ಅಂಗಿ, ಮುತ್ತಿನ ಹಾರ ಮತ್ತು ಡ್ರೈ ಫ್ರೋಟ್ಸ್ ನೀಡಿದ್ದಾರೆ. ಇದನ್ನೂ ಓದಿ: ರಾಮನಗರದ ಅಮ್ಮನ ಮಡಿಲು ಆಶ್ರಮದಲ್ಲಿ ಯುವತಿ ಮೇಲೆ ಅತ್ಯಾಚಾರ, ಕಿರುಕುಳ; ಮೂವರ ವಿರುದ್ಧ ಎಫ್​ಐಆರ್

ಜೊತೆಗೆ ಹೊಸಪೇಟೆಯ 182 ಗ್ರಾ.ಪಂ ಸದಸ್ಯರಿಗೆ ಆರ್ಧ ಕೆಜಿ ಬೆಳ್ಳಿ, 27 ಸಾವಿರ ನಗದು, ರೇಷ್ಮೆ ಸೀರೆ, ಪಂಚೆ, ರೇಷ್ಮೆ ಶರ್ಟ್, ಮುತ್ತಿನ ಹಾರ ಮತ್ತು ಡ್ರೈ ಫ್ರೋಟ್ಸ್​ ನೀಡಿದ್ದಾರೆ. ಇದರ ಜೊತೆಗೆ ದೀಪಾವಳಿ ಹಬ್ಬದ ಶ್ರೀ ಲಕ್ಷ್ಮೀ ಪೂಜಾ ಆಮಂತ್ರಣ ಪತ್ರಿಕೆ ನೀಡಿ ಪೂಜೆಗೆ ಆಹ್ವಾನಿಸಿದ್ದಾರೆ. ಸಚಿವರ ಈ ಗಿಫ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೊಸಪೇಟೆ ನಗರಸಭೆಯಲ್ಲಿ 35 ಸದಸ್ಯರು, 5 ಜನ ನಾಮನಿರ್ದೇಶಿತ ಸದಸ್ಯರಿದ್ದಾರೆ. ತಾಲ್ಲೂಕಿನಲ್ಲಿ ಒಟ್ಟು 14 ಗ್ರಾಮ ಪಂಚಾಯಿತಿಗಳಿದ್ದು 282 ಸದಸ್ಯರಿದ್ದಾರೆ. ವಿಜಯನಗರ ಕ್ಷೇತ್ರ ವ್ಯಾಪ್ತಿಯಲ್ಲಿ 10 ಗ್ರಾಮ ಪಂಚಾಯಿತಿಯ 182 ಸದಸ್ಯರಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿ ಮಂದಿಗೆ ದರ ದುಪ್ಪಟ್ಟು ಧಮಾಕ: ಗಗನಕ್ಕೆ ಏರಿದ ಹೂವು, ಹಣ್ಣು, ಪಟಾಕಿ ಬೆಲೆ

Published On - 11:57 am, Sun, 23 October 22

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು