AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಭಾಗ್ಯ ಅಕ್ಕಿ ಹೊರ ರಾಜ್ಯಕ್ಕೆ ಸಾಗಿಸುವ ಜಾಲ ಪತ್ತೆ: ಕಂಪ್ಲಿ ಶಾಸಕ ಜೆ.ಎನ್.ಗಣೇಶ್​​ ರಾತ್ರೋ ರಾತ್ರಿ‌ ದಾಳಿ

ಒಂದು ಲಾರಿಯಲ್ಲಿ ‌ನಾಲ್ಕು ನೂರು ಚೀಲ ಅಕ್ಕಿ ಸಾಗಾಟ ಮಾಡಲಾಗುತ್ತಿದ್ದು, ದಿನಕ್ಕೆ ಒಂದುವರೆ ಲಕ್ಷ ಲಾಭ ಪಡೆಯೋ ಪ್ರಭಾವಿ ನಾಯಕ ಯಾರು ಅನ್ನೋದೇ ಯಕ್ಷ ಪ್ರಶ್ನೆಯಾಗಿದೆ.

ಅನ್ನಭಾಗ್ಯ ಅಕ್ಕಿ ಹೊರ ರಾಜ್ಯಕ್ಕೆ ಸಾಗಿಸುವ ಜಾಲ ಪತ್ತೆ: ಕಂಪ್ಲಿ ಶಾಸಕ ಜೆ.ಎನ್.ಗಣೇಶ್​​ ರಾತ್ರೋ ರಾತ್ರಿ‌ ದಾಳಿ
ಕಂಪ್ಲಿ ಶಾಸಕ ಜೆ ಎನ್ ಗಣೇಶ ರಾತ್ರೋ ರಾತ್ರಿ‌ ದಾಳಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 24, 2022 | 8:16 AM

Share

ಬಳ್ಳಾರಿ: ಅನ್ನಭಾಗ್ಯದ (Annabhagya) ಅಕ್ಕಿಯನ್ನು ಹೊರ ರಾಜ್ಯಕ್ಕೆ ಸಾಗಿಸೋ ಜಾಲ ಪತ್ತೆಯಾಗಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಕಂಪ್ಲಿ ಶಾಸಕ ಜೆ.ಎನ್ ಗಣೇಶ್​ ರಾತ್ರೋ ರಾತ್ರಿ‌ ದಾಳಿ ಮಾಡಿ ಜಾಲವನ್ನು ಪತ್ತೆ ಮಾಡಲಾಗಿದೆ. ಕೋಳಿ‌ ಫಾರಂ ಒಳಗೆ ನಡೆಯುತ್ತದೆ ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕೋ ಕೆಲಸ ನಡೆಯುತ್ತಿದ್ದು, ದಿನಕ್ಕೆ ಎರಡು ಲಾರಿ ಲೋಡ್ ಅಕ್ಕಿಯನ್ನು ಕಂಪ್ಲಿಯಿಂದ ತಮಿಳುನಾಡು ಗುಜರಾತ್ ಕಡೆ ಸಾಗಣೆ ಮಾಡಲಾಗುತ್ತಿದೆ. ಒಂದು ಲಾರಿಯಲ್ಲಿ ‌ನಾಲ್ಕು ನೂರು ಚೀಲ ಅಕ್ಕಿ ಸಾಗಾಟ ಮಾಡಲಾಗುತ್ತಿದ್ದು, ದಿನಕ್ಕೆ ಒಂದುವರೆ ಲಕ್ಷ ಲಾಭ ಪಡೆಯೋ ಪ್ರಭಾವಿ ನಾಯಕ ಯಾರು ಅನ್ನೋದೇ ಯಕ್ಷ ಪ್ರಶ್ನೆಯಾಗಿದೆ. ದಾಳಿ ಮಾಡುತ್ತಿದ್ದಂತೆ ಸ್ಥಳದಿಂದ ಹಲವು ಖದೀಮರು ಓಡಿ ಹೋಗಿದ್ದು, ನಾಲ್ವರನ್ನ ಶಾಸಕರ ತಂಡ ವಶಕ್ಕೆ ಪಡೆದಿದೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!

ಸ್ಥಳೀಯರಲ್ಲ ಮತ್ತು ಕನ್ನಡ ಭಾಷೆ ಬಾರದೇ ಇರೋರ‌‌ ಜೊತೆ ಖದೀಮರು ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಪ್ರಭಾವಿ ನಾಯಕರು ಹಿಂದೆ ಇರೋ ಶಂಕೆಯಿದ್ದು, ಆದರೆ ಇಲ್ಲಿ ಕೆಲಸ ಮಾಡೋರಿಗೆ ಮಾಲೀಕರು ಯಾರು ಅನ್ನೋದೇ ಗೊತ್ತಿಲ್ಲ. ದಾಳಿ ಮಾಡಿದ ಬಳಿಕ ಬಂದ ಪೊಲೀಸರು ‌ಸಾವಿರಾರು ಚೀಲ ಅಕ್ಕಿ, ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಎಲ್ಲವನ್ನೂ ವಶಕ್ಕೆ ಪಡೆದಿದ್ದಾರೆ.

ಎಪಿಎಮ್​ಸಿ ಮಾರುಕಟ್ಟೆಯಲ್ಲಿ ಕಳ್ಳತನ: 53 ಸಾವಿರ ನಗದು ದೋಚಿ ಪರಾರಿ

ತುಮಕೂರು: ತಿಪಟೂರು ನಗರದ ಎಪಿಎಮ್​ಸಿ ಮಾರುಕಟ್ಟೆಯಲ್ಲಿ ಕಳ್ಳತನವಾಗಿದ್ದು, ಸುಮಾರು 53 ಸಾವಿರ ನಗದು ದೋಚಿ ಪರಾರಿಯಾಗಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ತಿಪಟೂರು ನಗರದ ಎಪಿಎಮ್ ಸಿ ಮಾರುಕಟ್ಟೆ ಕೊಬರಿ ಯಾರ್ಡ್ ನಲ್ಲಿ ಘಟನೆ ಸಂಭವಿಸಿದೆ. ಕೊಬರಿ ಯಾರ್ಡ್​ನಲ್ಲಿರುವ ಬಾಗಿಲು ಮುರಿದು ನಗದು ಕಳವು ಮಾಡಲಾಗಿದೆ. ಕೊಬರಿ ಯಾರ್ಡ್​​ನಲ್ಲಿರುವ ಟಿಎಪಿಸಿಎಮ್​​ಎಸ್ ಲಿಮಿಟೆಡ್ ಕಚೇರಿ ಬೀಗ ಹೊಡೆದು ಕಳವು ಮಾಡಲಾಗಿದೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ