AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿರೋ ರೈತರಿಗೆ ಇದೀಗ ಮತ್ತೊಂದು ಶಾಕ್: ಬೆಳೆ ಸಾಲ ಮರುಪಾವತಿಗೆ ರೈತರಿಗೆ ನೋಟೀಸ್ ಜಾರಿ

ಇದೀಗ ಅನ್ನದಾತರ ಸಂಕಷ್ಟ ಆಲಿಸದೆ ಸಾಲ ಮರುಪಾವತಿಗೆ ಬ್ಯಾಂಕ್ ಸಿಬ್ಬಂದಿ ಪಟ್ಟು ಹಿಡಿದಿದೆ. ಕಾನೂನು ಕ್ರಮದ ಬೆದರಿಕೆ ಆರೋಪ ಮಾಡಿದ್ದು, ಕಷ್ಟದ ಪರಿಸ್ಥಿತಿಯಲ್ಲೂ ಸಾಲ ಮರುಪಾವತಿ ಮಾಡ್ತೇವೆ ಆದ್ರೆ ಬಡ್ಡಿ ವಿನಾಯ್ತಿಗೆ ರೈತರು ವಿಜಯನಗರ ಡಿಸಿ ಮೋರೆ ಹೋಗಿದ್ದಾರೆ. 

ಸಂಕಷ್ಟದಲ್ಲಿರೋ ರೈತರಿಗೆ ಇದೀಗ ಮತ್ತೊಂದು ಶಾಕ್: ಬೆಳೆ ಸಾಲ ಮರುಪಾವತಿಗೆ ರೈತರಿಗೆ ನೋಟೀಸ್ ಜಾರಿ
ವಿಜಯನಗರ ಡಿಸಿ ಮೋರೆ ಹೋದ ರೈತರು
TV9 Web
| Edited By: |

Updated on: May 22, 2022 | 2:22 PM

Share

ವಿಜಯನಗರ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡ ಅನ್ನದಾತರಿಗೆ ಇದೀಗ ಆತಂಕ ಶುರುವಾಗಿದ್ದು, ಬೆಳೆ ಸಾಲ ಮರುಪಾವತಿಗೆ ರೈತರಿಗೆ ನೋಟೀಸ್ ನೀಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕುಗಳು ಜಮೀನು ಹರಾಜು ಹಾಕುವ ಮೌಖಿಕ ನೋಟೀಸ್ ಜಾರಿ ಮಾಡಿದ್ದು, ಸಂಕಷ್ಟದಲ್ಲಿರೋ ರೈತರಿಗೆ ಇದೀಗ ಮತ್ತೊಂದು ಶಾಕ್ ನೀಡಲಾಗಿದೆ. ಕೃಷಿಗಾಗಿ ರೈತರು ಮಾಡಿದ ಸಾಲ‌ ಮರುಪಾವತಿಗಾಗಿ ನೋಟೀಸ್ ಕಿರುಕುಳ ಆರೋಪ ಮಾಡಲಾಗಿದೆ. ಕೊನೆಯ ಹಂತದ ಕಾನೂನು ಕ್ರಮ ಜರುಗಿಸುವುದಾಗಿ ಬ್ಯಾಂಕ್‌ನಿಂದ ರೈತರಿಗೆ ನೋಟೀಸ್ ನೀಡಲಾಗಿದೆ. ಈಗಾಗಲೇ 300 ಕ್ಕೂ ಹೆಚ್ಚು ರೈತರಿಗೆ ಅಂತಿಮ ಹಂತದ ನೋಟೀಸ್ ಜಾರಿ ಮಾಡಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹೊಸಪೇಟೆ ಶಾಖೆಯಿಂದ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕೂಟ್ಟೂರು ತಾಲೂಕಿನ ನೂರಾರು ರೈತರಿಗೆ ನೋಟೀಸ್ ನೀಡಲಾಗಿದೆ. ಸಾಲ ಮರುಪಾವತಿ ಮಾಡಬೇಕು ಇಲ್ಲವಾದ್ರೆ ಆಸ್ತಿ ಜಪ್ತಿ ಮಾಡುವುದಾಗಿ ಆರೋಪ ಕೇಳಿಬಂದಿದೆ. ಬ್ಯಾಂಕ್ ನಡೆಗೆ ವಿಜಯನಗರದ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷವೂ ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿತ್ತು. ಅಸಲು, ಬಡ್ಡಿ ಮರುಪಾವತಿ ಸಾಧ್ಯ ಆಗಿಲ್ಲ. ಇದೀಗ ಚಕ್ರ ಬಡ್ಡಿ ರೂಪದಲ್ಲಿ ಸಾಲ ದುಪ್ಪಟ್ಟಾಗಿದೆ ಅಂತಾ ಅನ್ನದಾತರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: IPL 2022 Points Table: ಲೀಗ್ ಪಂದ್ಯಗಳು ಇಂದಿಗೆ ಅಂತ್ಯ: ಐಪಿಎಲ್ ಪಾಯಿಂಟ್ ಟೇಬಲ್ ಈಗ ಹೀಗಿದೆ ನೋಡಿ

ಇದೀಗ ಅನ್ನದಾತರ ಸಂಕಷ್ಟ ಆಲಿಸದೆ ಸಾಲ ಮರುಪಾವತಿಗೆ ಬ್ಯಾಂಕ್ ಸಿಬ್ಬಂದಿ ಪಟ್ಟು ಹಿಡಿದಿದೆ. ಕಾನೂನು ಕ್ರಮದ ಬೆದರಿಕೆ ಆರೋಪ ಮಾಡಿದ್ದು, ಕಷ್ಟದ ಪರಿಸ್ಥಿತಿಯಲ್ಲೂ ಸಾಲ ಮರುಪಾವತಿ ಮಾಡ್ತೇವೆ ಆದ್ರೆ ಬಡ್ಡಿ ವಿನಾಯ್ತಿಗೆ ರೈತರು ವಿಜಯನಗರ ಡಿಸಿ ಮೋರೆ ಹೋಗಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು