AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯತಮೆಗಾಗಿ ರಾತ್ರಿ ಇಡೀ ಕಾದು ಕುಳಿತ ಪ್ರಿಯತಮ: ಸಿನಿಮಾ ಶೈಲಿಯಲ್ಲಿ ಕಾರಿನಲ್ಲಿ ಪ್ರೇಮಿಗಳ ಮದುವೆ

ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಶಿವಪ್ರಸಾದ್ ಮತ್ತು ಕೊಪ್ಪಳ ಮೂಲದ ಯುವತಿ ಅಮೃತಾ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವಕ ಕೆಳಜಾತಿಗೆ ಸೇರಿದ್ದಾನೆ ಎಂಬ ಕಾರಣಕ್ಕೆ ಪೋಷಕರು ಮಗಳ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪ್ರೇಮಿಗಳು ಮಂಗಳವಾರ (ಜ.03) ಸಂಜೆ ಓಡಿ ಹೋದರು. ಮುಂದೇನಾಯ್ತು ಈ ಸ್ಟೋರಿ ಓದಿ...

ಪ್ರಿಯತಮೆಗಾಗಿ ರಾತ್ರಿ ಇಡೀ ಕಾದು ಕುಳಿತ ಪ್ರಿಯತಮ: ಸಿನಿಮಾ ಶೈಲಿಯಲ್ಲಿ ಕಾರಿನಲ್ಲಿ ಪ್ರೇಮಿಗಳ ಮದುವೆ
ಬಳ್ಳಾರಿ ಪ್ರೇಮ ವಿವಾಹ ಹೈಡ್ರಾಮಾ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: ವಿವೇಕ ಬಿರಾದಾರ|

Updated on:Jan 03, 2024 | 11:26 AM

Share

ಬಳ್ಳಾರಿ, ಜನವರಿ 03: ಕಿರಾತಕ ಸಿನಿಮಾ ಶೈಲಿಯಲ್ಲಿ ಪ್ರೇಮಿಗಳು ಕಾರಿನಲ್ಲಿ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮೂಲಕ ಮದುವೆಯಾಗಿದ್ದಾರೆ. ಸಿರುಗುಪ್ಪ (Siraguppa) ತಾಲೂಕಿನ ತೆಕ್ಕಲಕೋಟೆಯ ಶಿವಪ್ರಸಾದ್ ಮತ್ತು ಕೊಪ್ಪಳ (Koppal) ಮೂಲದ ಯುವತಿ ಅಮೃತಾ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವಕ ಕೆಳಜಾತಿಗೆ ಸೇರಿದ್ದಾನೆ ಎಂಬ ಕಾರಣಕ್ಕೆ ಪೋಷಕರು ಮಗಳ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪ್ರೇಮಿಗಳು (Lovers) ಮಂಗಳವಾರ (ಜ.03) ಸಂಜೆ ಓಡಿ ಹೋಗಿ ಸಿರುಗುಪ್ಪ ನಗರದಲ್ಲಿ ಕಾರಿನಲ್ಲಿ ಹಾರ ಬದಲಾಯಿಸಿಕೊಂಡು ವಿವಾಹವಾಗಿದ್ದಾರೆ.

ಬಳಿಕ ತೆಕ್ಕಲುಕೋಟೆ ಠಾಣೆಗೆ ಬಂದು ರಿಜಿಸ್ಟರ್​ ಮದುವೆ ಮಾಡಿಸಿ ಎಂದು ಪೊಲೀಸರ ಬಳಿ ಕೇಳಿಕೊಂಡಿದ್ದಾರೆ. ಆಗ ಪೊಲೀಸರು ಈಗ ಸಮಯ ಮಧ್ಯರಾತ್ರಿ 12 ಗಂಟೆಯಾಗಿದೆ. ಬೆಳಿಗ್ಗೆ ನೋಡೋಣ ಎಂದು ಹೇಳಿ ಯುವತಿ ಅಮೃತಾಳನ್ನು ಬಳ್ಳಾರಿ ಶಾಂತಿಧಾಮ ಸಾಂತ್ವನ ಕೇಂದ್ರದಲ್ಲಿ ತಂದು ಬಿಟ್ಟಿದ್ದಾರೆ.

ಈ ವಿಚಾರವನ್ನು ತಿಳಿದ ಅಮೃತಾ ಪೋಷಕರು ಶಾಂತಿಧಾಮ ಸಾಂತ್ವನ ಕೇಂದ್ರಕ್ಕೆ ಬಂದು ಆಕೆಯ ಮನವೊಲಿಸಿದರು. ಪೋಷಕರು ಅಮೃತಾಳಿಗೆ “ನಿನಗೆ ನಾವು (ಪೋಷಕರು) ಬೇಕೋ ಅಥವಾ ನಿನ್ನ ಪ್ರಿಯತಮ ಶಿವಪ್ರಸಾದ್​ ಬೇಕೋ” ಎಂದು ಕೇಳಿದರು. ಆಗ ಅಮೃತಾ ನೀವೇ ಬೇಕು ಎಂದು ಪೋಷಕರ ಜೊತೆ ಹೊರಡಲು ಸಿದ್ದವಾದ್ದಳು. ಇಷ್ಟರಲ್ಲಿ ಪ್ರಿಯತಮ ಶಿವಪ್ರಸಾದ್ ಮತ್ತು ಆತನ ಪೋಷಕರು ಕೂಡ ಶಾಂತಿಧಾಮಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ಪ್ರೀತಿಸಿದ ಯುವಕನ ಮನೆಯವರ ಮೇಲೆ ಹಲ್ಲೆ; ರಕ್ಷಣೆಗಾಗಿ ಹಾವೇರಿ ಎಸ್​ಪಿ ಮೊರೆ ಹೋದ ಪ್ರೇಮಿಗಳು

ಆಗ ಅಮೃತಾ ನನಗೆ ಶಿವಪ್ರಸಾದ್​ ಬೇಕು ಎಂದು ಪಟ್ಟು ಹಿಡಿದಿದ್ದಾಳೆ. ಅಮೃತಾಳ ದ್ವಂದ್ವ ಹೇಳಿಕೆಯಿಂದ ಸಾಂತ್ವನ ಕೇಂದ್ರದ ಬಳಿ ಹೈಡ್ರಾಮಾ ಸೃಷ್ಟಿ ಆಗಿದೆ. ಆಗ ಪೋಷಕರು ಅಮೃತಾಳನ್ನು ಬಲವಂತವಾಗಿ ಕರೆದೊಯ್ಯಲು ಯತ್ನಿಸಿದ್ದಾರೆ. ಈ ವೇಳೆ ಶಿವಪ್ರಸಾದ್​ ಮತ್ತು ಅಮೃತಾ ಪೋಷಕರ ನಡುವೆ ಕೆಲ ಕಾಲ ವಾಗ್ವಾದ, ಗಲಾಟೆ ನಡೆಯಿತು.

ಕೊನೆಗೂ ಅಮೃತಾಳನ್ನು ಕಾರಿನಲ್ಲಿ ಕೂರಿಸಿಕೊಂಡು ಪೋಷಕರು ಕರೆದುಕೊಂಡು ಹೋಗಲು ಮುಂದಾದರು. ಆಗ ಶಿವಪ್ರಸಾದ್ ಕಾರನ್ನು ಅಡ್ಡಗಟ್ಟಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಪೊಲೀಸರ ಎದರು ಶಿವಪ್ರಸಾದ್​ ನನಗೆ ಹೆಂಡತಿ ಬೇಕು ಮತ್ತು ರಕ್ಷಣೆ ನೀಡುವಂತೆ ಪಟ್ಟು ಹಿಡಿದನು. ಈ ಸಂಬಂಧ ಶಿವಪ್ರಸಾದ್​ ರಾತ್ರಿಯಿಡೀ ಸಾಂತ್ವನ ಕೇಂದ್ರದ ಬಳಿಯೇ ಕುಳಿತಿದ್ದನು. ಕೊನೆಗೆ ಅಮೃತಾ ಪೋಷಕರು ಆಕೆಯನ್ನು ಶಿವಪ್ರಸಾದ್​ ಬಳಿ ಬಿಟ್ಟು ಹೋದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:25 am, Wed, 3 January 24

Follow Us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!