ಪ್ರಿಯತಮೆಗಾಗಿ ರಾತ್ರಿ ಇಡೀ ಕಾದು ಕುಳಿತ ಪ್ರಿಯತಮ: ಸಿನಿಮಾ ಶೈಲಿಯಲ್ಲಿ ಕಾರಿನಲ್ಲಿ ಪ್ರೇಮಿಗಳ ಮದುವೆ

ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಶಿವಪ್ರಸಾದ್ ಮತ್ತು ಕೊಪ್ಪಳ ಮೂಲದ ಯುವತಿ ಅಮೃತಾ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವಕ ಕೆಳಜಾತಿಗೆ ಸೇರಿದ್ದಾನೆ ಎಂಬ ಕಾರಣಕ್ಕೆ ಪೋಷಕರು ಮಗಳ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪ್ರೇಮಿಗಳು ಮಂಗಳವಾರ (ಜ.03) ಸಂಜೆ ಓಡಿ ಹೋದರು. ಮುಂದೇನಾಯ್ತು ಈ ಸ್ಟೋರಿ ಓದಿ...

ಪ್ರಿಯತಮೆಗಾಗಿ ರಾತ್ರಿ ಇಡೀ ಕಾದು ಕುಳಿತ ಪ್ರಿಯತಮ: ಸಿನಿಮಾ ಶೈಲಿಯಲ್ಲಿ ಕಾರಿನಲ್ಲಿ ಪ್ರೇಮಿಗಳ ಮದುವೆ
ಬಳ್ಳಾರಿ ಪ್ರೇಮ ವಿವಾಹ ಹೈಡ್ರಾಮಾ
Follow us
| Updated By: ವಿವೇಕ ಬಿರಾದಾರ

Updated on:Jan 03, 2024 | 11:26 AM

ಬಳ್ಳಾರಿ, ಜನವರಿ 03: ಕಿರಾತಕ ಸಿನಿಮಾ ಶೈಲಿಯಲ್ಲಿ ಪ್ರೇಮಿಗಳು ಕಾರಿನಲ್ಲಿ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮೂಲಕ ಮದುವೆಯಾಗಿದ್ದಾರೆ. ಸಿರುಗುಪ್ಪ (Siraguppa) ತಾಲೂಕಿನ ತೆಕ್ಕಲಕೋಟೆಯ ಶಿವಪ್ರಸಾದ್ ಮತ್ತು ಕೊಪ್ಪಳ (Koppal) ಮೂಲದ ಯುವತಿ ಅಮೃತಾ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವಕ ಕೆಳಜಾತಿಗೆ ಸೇರಿದ್ದಾನೆ ಎಂಬ ಕಾರಣಕ್ಕೆ ಪೋಷಕರು ಮಗಳ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪ್ರೇಮಿಗಳು (Lovers) ಮಂಗಳವಾರ (ಜ.03) ಸಂಜೆ ಓಡಿ ಹೋಗಿ ಸಿರುಗುಪ್ಪ ನಗರದಲ್ಲಿ ಕಾರಿನಲ್ಲಿ ಹಾರ ಬದಲಾಯಿಸಿಕೊಂಡು ವಿವಾಹವಾಗಿದ್ದಾರೆ.

ಬಳಿಕ ತೆಕ್ಕಲುಕೋಟೆ ಠಾಣೆಗೆ ಬಂದು ರಿಜಿಸ್ಟರ್​ ಮದುವೆ ಮಾಡಿಸಿ ಎಂದು ಪೊಲೀಸರ ಬಳಿ ಕೇಳಿಕೊಂಡಿದ್ದಾರೆ. ಆಗ ಪೊಲೀಸರು ಈಗ ಸಮಯ ಮಧ್ಯರಾತ್ರಿ 12 ಗಂಟೆಯಾಗಿದೆ. ಬೆಳಿಗ್ಗೆ ನೋಡೋಣ ಎಂದು ಹೇಳಿ ಯುವತಿ ಅಮೃತಾಳನ್ನು ಬಳ್ಳಾರಿ ಶಾಂತಿಧಾಮ ಸಾಂತ್ವನ ಕೇಂದ್ರದಲ್ಲಿ ತಂದು ಬಿಟ್ಟಿದ್ದಾರೆ.

ಈ ವಿಚಾರವನ್ನು ತಿಳಿದ ಅಮೃತಾ ಪೋಷಕರು ಶಾಂತಿಧಾಮ ಸಾಂತ್ವನ ಕೇಂದ್ರಕ್ಕೆ ಬಂದು ಆಕೆಯ ಮನವೊಲಿಸಿದರು. ಪೋಷಕರು ಅಮೃತಾಳಿಗೆ “ನಿನಗೆ ನಾವು (ಪೋಷಕರು) ಬೇಕೋ ಅಥವಾ ನಿನ್ನ ಪ್ರಿಯತಮ ಶಿವಪ್ರಸಾದ್​ ಬೇಕೋ” ಎಂದು ಕೇಳಿದರು. ಆಗ ಅಮೃತಾ ನೀವೇ ಬೇಕು ಎಂದು ಪೋಷಕರ ಜೊತೆ ಹೊರಡಲು ಸಿದ್ದವಾದ್ದಳು. ಇಷ್ಟರಲ್ಲಿ ಪ್ರಿಯತಮ ಶಿವಪ್ರಸಾದ್ ಮತ್ತು ಆತನ ಪೋಷಕರು ಕೂಡ ಶಾಂತಿಧಾಮಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ಪ್ರೀತಿಸಿದ ಯುವಕನ ಮನೆಯವರ ಮೇಲೆ ಹಲ್ಲೆ; ರಕ್ಷಣೆಗಾಗಿ ಹಾವೇರಿ ಎಸ್​ಪಿ ಮೊರೆ ಹೋದ ಪ್ರೇಮಿಗಳು

ಆಗ ಅಮೃತಾ ನನಗೆ ಶಿವಪ್ರಸಾದ್​ ಬೇಕು ಎಂದು ಪಟ್ಟು ಹಿಡಿದಿದ್ದಾಳೆ. ಅಮೃತಾಳ ದ್ವಂದ್ವ ಹೇಳಿಕೆಯಿಂದ ಸಾಂತ್ವನ ಕೇಂದ್ರದ ಬಳಿ ಹೈಡ್ರಾಮಾ ಸೃಷ್ಟಿ ಆಗಿದೆ. ಆಗ ಪೋಷಕರು ಅಮೃತಾಳನ್ನು ಬಲವಂತವಾಗಿ ಕರೆದೊಯ್ಯಲು ಯತ್ನಿಸಿದ್ದಾರೆ. ಈ ವೇಳೆ ಶಿವಪ್ರಸಾದ್​ ಮತ್ತು ಅಮೃತಾ ಪೋಷಕರ ನಡುವೆ ಕೆಲ ಕಾಲ ವಾಗ್ವಾದ, ಗಲಾಟೆ ನಡೆಯಿತು.

ಕೊನೆಗೂ ಅಮೃತಾಳನ್ನು ಕಾರಿನಲ್ಲಿ ಕೂರಿಸಿಕೊಂಡು ಪೋಷಕರು ಕರೆದುಕೊಂಡು ಹೋಗಲು ಮುಂದಾದರು. ಆಗ ಶಿವಪ್ರಸಾದ್ ಕಾರನ್ನು ಅಡ್ಡಗಟ್ಟಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಪೊಲೀಸರ ಎದರು ಶಿವಪ್ರಸಾದ್​ ನನಗೆ ಹೆಂಡತಿ ಬೇಕು ಮತ್ತು ರಕ್ಷಣೆ ನೀಡುವಂತೆ ಪಟ್ಟು ಹಿಡಿದನು. ಈ ಸಂಬಂಧ ಶಿವಪ್ರಸಾದ್​ ರಾತ್ರಿಯಿಡೀ ಸಾಂತ್ವನ ಕೇಂದ್ರದ ಬಳಿಯೇ ಕುಳಿತಿದ್ದನು. ಕೊನೆಗೆ ಅಮೃತಾ ಪೋಷಕರು ಆಕೆಯನ್ನು ಶಿವಪ್ರಸಾದ್​ ಬಳಿ ಬಿಟ್ಟು ಹೋದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:25 am, Wed, 3 January 24

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್