AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ಇಳುವರಿ ಬಂದ್ರೂ ಒಳ್ಳೆಯ ದರ ಸಿಗ್ತಿಲ್ಲ, ರೈತರ ಗೋಳು ಕೇಳೂರ್ಯಾರು

ಬಳ್ಳಾರಿ: ಆ ಭಾಗದ ರೈತರಿಗೆ ಜಮೀನಲ್ಲಿ ನಿರೀಕ್ಷೆಗಿಂತ ಹೆಚ್ಚು ಇಳುವರಿ ಬಂದಿತ್ತು. ಒಳ್ಳೆ ಮಳೆಯಾಗಿರೋದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಆದ್ರೆ, ಲಾಭದ ಕನಸು ಕಂಡಿದ್ದ ರೈತರು ಶಾಕ್ ಆಗಿದ್ದಾರೆ. ರೊಟ್ಟಿ ಸವೀಲಿ.. ರಾಗಿಮುದ್ದೆ ತಿನ್ಲಿ.. ಒಬ್ಬಟ್ಟಾದ್ರೂ ಚಪ್ಪರಿಸ್ಲಿ.. ಊಟ ಆದ್ಮೇಲೆ ಲಾಸ್ಟ್​​ಗೆ ಒಂದ್ ಚೂರು ರೈಸ್​​ ತಿನ್ಲಿಲ್ಲ ಅಂದ್ರೆ ನೆಮ್ಮದಿನೇ ಆಗಲ್ಲ.. ದೇಶದಲ್ಲಿ ರೈಸ್ ಪ್ರಿಯರೇ ಹೆಚ್ಚು. ಅದ್ರಲ್ಲೂ, ಬರ ಪ್ರವಾಹದಿಂದ ಕಂಗೆಟ್ರೂ ರೈತರು ಭತ್ತ ಬೆಳೆಯೋದನ್ನ ಇನ್ನೂ ಕಡಿಮೆ ಮಾಡಿಲ್ಲ. ಅಂತದ್ರಲ್ಲಿ ಒಳ್ಳೆ ಭತ್ತದ […]

ಉತ್ತಮ ಇಳುವರಿ ಬಂದ್ರೂ ಒಳ್ಳೆಯ ದರ ಸಿಗ್ತಿಲ್ಲ, ರೈತರ ಗೋಳು ಕೇಳೂರ್ಯಾರು
ಸಾಧು ಶ್ರೀನಾಥ್​
|

Updated on:Jan 17, 2020 | 12:12 PM

Share

ಬಳ್ಳಾರಿ: ಆ ಭಾಗದ ರೈತರಿಗೆ ಜಮೀನಲ್ಲಿ ನಿರೀಕ್ಷೆಗಿಂತ ಹೆಚ್ಚು ಇಳುವರಿ ಬಂದಿತ್ತು. ಒಳ್ಳೆ ಮಳೆಯಾಗಿರೋದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಆದ್ರೆ, ಲಾಭದ ಕನಸು ಕಂಡಿದ್ದ ರೈತರು ಶಾಕ್ ಆಗಿದ್ದಾರೆ.

ರೊಟ್ಟಿ ಸವೀಲಿ.. ರಾಗಿಮುದ್ದೆ ತಿನ್ಲಿ.. ಒಬ್ಬಟ್ಟಾದ್ರೂ ಚಪ್ಪರಿಸ್ಲಿ.. ಊಟ ಆದ್ಮೇಲೆ ಲಾಸ್ಟ್​​ಗೆ ಒಂದ್ ಚೂರು ರೈಸ್​​ ತಿನ್ಲಿಲ್ಲ ಅಂದ್ರೆ ನೆಮ್ಮದಿನೇ ಆಗಲ್ಲ.. ದೇಶದಲ್ಲಿ ರೈಸ್ ಪ್ರಿಯರೇ ಹೆಚ್ಚು. ಅದ್ರಲ್ಲೂ, ಬರ ಪ್ರವಾಹದಿಂದ ಕಂಗೆಟ್ರೂ ರೈತರು ಭತ್ತ ಬೆಳೆಯೋದನ್ನ ಇನ್ನೂ ಕಡಿಮೆ ಮಾಡಿಲ್ಲ. ಅಂತದ್ರಲ್ಲಿ ಒಳ್ಳೆ ಭತ್ತದ ಇಳುವರಿ ಬಂದಿದ್ರೂ ಅನ್ನದಾತರ ಬದುಕಲ್ಲಿ ಬರಸಿಡಿಲು ಅಪ್ಪಳಿಸಿದೆ.

ಉತ್ತಮ ಇಳುವರಿ ಬಂದ್ರೂ ಒಳ್ಳೆಯ ದರ ಸಿಗ್ತಿಲ್ಲ..! ಯೆಸ್​.. ಇಷ್ಟು ದಿನ ಮಳೆ ಇಲ್ಲ. ಸರಿಯಾದ ನೀರಿಲ್ಲ ಅಂತ ರೈತರು ಗೊಣಗ್ತಿದ್ರು. ಆದ್ರೆ, ಈ ವರ್ಷ ಸುರಿದ ಅಬ್ಬರದ ಮಳೆಗೆ ತುಂಗಭದ್ರಾ ಡ್ಯಾಂ ಭಾಗದ ರೈತರು ಉತ್ತಮ ಭತ್ತ ಬೆಳೆದಿದ್ದಾರೆ. ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ಇಳುವರಿ ಬಂದಿದೆ. ಆದ್ರೆ, ಅರಬ್ ದೇಶಗಳಲ್ಲಿ ಸೋನಾ ಮಸೂರಿ ಅಕ್ಕಿಗೆ ಡಿಮ್ಯಾಂಡ್ ಕಡಿಮೆಯಾಗಿರೋದು ರೈತರ ನಿದ್ದೆಗೆಡಿಸಿದೆ. ಅಲ್ದೇ, ಮಾರ್ಕೆಟ್​ನಲ್ಲಿ ಬೇಡಿಕೆಗಿಂತ ಮಾಲು ಹೆಚ್ಚಾಗಿರೋದ್ರಿಂದ ಕಡಿಮೆ ರೇಟ್​ಗೆ ಭತ್ತ, ಅಕ್ಕಿ ಕೇಳ್ತಿದ್ದಾರಂತೆ. ಜೊತೆಗೆ ಚೆನ್ನೈ, ಹೈದರಾಬಾದ್, ಬೆಂಗಳೂರಲ್ಲೂ ಸೋನಾ ಮಸೂರಿ ಅಕ್ಕಿ ಕೇಳೋರಿಲ್ವಂತೆ. ಹೀಗಾಗಿ ಅನ್ನದಾತರ ಪಾಲಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಇನ್ನು, ಈ ಬಾರಿ ತುಂಗಭದ್ರಾ ಡ್ಯಾಂ ತುಂಬಿದ್ದು, ನದಿ ಪಾತ್ರದ ಜನ ಈಗಾಗಲೇ 2ನೇ ಬೆಳೆ ಬೆಳೆಯೋಕೆ ರೆಡಿಯಾಗಿದ್ದಾರೆ. ಆದ್ರೆ, ಈ ವರ್ಷ ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಮರ್ಪಕ ಬೆಲೆ ಸಿಗ್ತಿಲ್ಲ. ಇದರ ಜೊತೆಗೆ ಸರ್ಕಾರ ಬೆಂಬಲ ಬೆಲೆ ಘೋಷಿಸಿ ಭತ್ತ ಖರೀದಿಗೆ ಮಾರ್ಕೆಟ್​ನಲ್ಲಿ ಖರೀದಿ ಕೇಂದ್ರ ಕೂಡ ತೆರೆದಿದೆ. ಒಂದು ಕ್ವಿಂಟಾಲ್ ಭತ್ತಕ್ಕೆ 1815 ರೂಪಾಯಿ, ಎ-ಗ್ರೇಡ್ ಭತ್ತಕ್ಕೆ 1835 ರೂಪಾಯಿಯಂತೆ ಖರೀದಿಸಲಾಗ್ತಿದೆ. ಇದಕ್ಕೆ ಸಾಕಷ್ಟು ರೂಲ್ಸ್ ಅಂಡ್ ರೆಗ್ಯುಲೇಷನ್ ಇರೋದ್ರಿಂದ ಕಡಿಮೆ ರೇಟ್​ಗೆ ಬೆಳೆದ ಬೆಳೆಯನ್ನ ರೈತರು ಸೇಲ್ ಮಾಡ್ತಿದ್ದಾರೆ.

ಒಟ್ನಲ್ಲಿ, ಇಷ್ಟು ದಿನ ಬೆಳೆದ ಬೆಳೆ ಕೈಗೆ ಸಿಕ್ತಿಲ್ಲ ಅಂತಿದ್ದ ರೈತರು ಉತ್ತಮ ಇಳುವರಿ ಬಂದಿದ್ರೂ ಬರಸಿಡಿಸಲು ಅಪ್ಪಳಿಸಿದೆ. ವಿದೇಶಕ್ಕೆ ಅಕ್ಕಿ ರಫ್ತು ಕಡಿಮೆಯಾಗಿರೋದು ಒಳ್ಳೆ ಲಾಭದ ನಿರೀಕ್ಷೆಯಲ್ಲಿದ್ದ ಅನ್ನದಾತರು ಕೈ ಕೈ ಹಿಸುಕಿಕೊಳ್ಳುವಂತಾಗಿದೆ.

Published On - 12:09 pm, Fri, 17 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ