ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು: ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಂಗಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಸಾವಿಗೆ ವೈದ್ಯರು ಹಾಗೂ ಜೈಲು ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕೈದಿ ಏಕಾಏಕಿ ಸಾವಿಗೀಡಾಗಿರುವುದು ಸಾಕಷ್ಟು ಅನುಮಾನಕ್ಕೂ ಎಡೆಮಾಡಿ ಕೊಟ್ಟಿದೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು: ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಂಗಿ
ಆಸ್ಪತ್ರೆಯಲ್ಲಿ ಕೈದಿ ಸಾವು (ಎಐ ಚಿತ್ರ)
Image Credit source: tv9 kannada
Edited By:

Updated on: May 07, 2026 | 7:48 PM

ಬಳ್ಳಾರಿ, ಮೇ 07: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ (BIMS Hospital) ಚಿಕಿತ್ಸೆ ಪಡೆಯುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಮೃತಪಟ್ಟಿದ್ದು (Prisoner Death), ಸಾವಿನ ಹಿಂದೆ ಜೈಲು ಸಿಬ್ಬಂದಿ ಹಾಗೂ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂಕನಾಳು ಗ್ರಾಮದ ನಿವಾಸಿ ಹನುಮಂತು (25) ಮೃತಪಟ್ಟ ದುರ್ದೈವಿ. ಅಣ್ಣ ಸಾವಿಗೆ ನ್ಯಾಯಬೇಕೆಂದು ತಂಗಿ ಮರಿಯಮ್ಮ ಆಗ್ರಹಿಸಿದ್ದಾರೆ.

ಮುಖ್ಯಾಂಶಗಳು

  • ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೈದಿ ಸಾವು
  • ಬಿಮ್ಸ್ ವೈದ್ಯರು ಮತ್ತು ಜೈಲು ಸಿಬ್ಬಂದಿ ನಿರ್ಲಕ್ಷ್ಯದಿಂದ ಸಾವು ಆರೋಪ
  • ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಂಗಿ

ನಡೆದಿದ್ದೇನು?

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಹನುಮಂತು ನನ್ನು ಕಳೆದ ಜನವರಿಯಲ್ಲಿ ರಾಯಚೂರು ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಏಪ್ರಿಲ್ 29ರಂದು ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲು ಅಧಿಕಾರಿಗಳು ಆತನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, 1 ವಾರದಿಂದ ಆಸ್ಪತ್ರೆಗೆ ದಾಖಲಿಸಿದ್ದರೂ ಈ ಬಗ್ಗೆ ರಾಯಚೂರಿನಲ್ಲಿರುವ ಅವರ ಪೋಷಕರಿಗೆ ಕಿಂಚಿತ್ತೂ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ: ಆರೋಪಿಯ ವಿಚಿತ್ರ ವರ್ತನೆಗೆ ಪೊಲೀಸರೇ ಶಾಕ್!

ಸದ್ಯ ಮೃತನ ತಂಗಿ ಮರಿಯಮ್ಮ ನಮ್ಮ ಅಣ್ಣನ ಸಾವಿಗೆ ಪೊಲೀಸರು ಮತ್ತು ವೈದ್ಯರ ಅಕ್ಷಮ್ಯ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ ಬಗ್ಗೆ ಮಾಹಿತಿ ನೀಡಿಲ್ಲ. ಮೇ 6ರ ಮಧ್ಯರಾತ್ರಿ ಕರೆ ಮಾಡಿ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆಂದು ಆರೋಪಿಸಿದರು.

ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಂಗಿ

ಇನ್ನು ಜೈಲಲ್ಲಿ ಆರಾಮವಾಗಿಯೇ ಇದ್ದ ಹನುಮಂತು ಏಕಾಏಕಿ ಮೃತಪಟ್ಟಿದ್ದೇಗೆ ಎಂದು ಅಣ್ಣ ಹನುಮಂತು ಸಾವಿನ ಬಗ್ಗೆ ಮರಿಯಮ್ಮ ಅನುಮಾನ ವ್ಯಕ್ತಪಡಿಸಿದ್ದು, ಅಣ್ಣನ ಸಾವಿಗೆ ನ್ಯಾಯಬೇಕೆಂದು ಆಗ್ರಹಿಸಿದ್ದಾರೆ.

ಪೊಲೀಸರ ವಶದಲ್ಲಿದ್ದ ಕೊಲೆ ಆರೋಪಿ ಸಾವು

ಇನ್ನೊಂದು ಪ್ರಕರಣದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರ ವಶದಲ್ಲಿದ್ದ ಕೊಲೆ ಆರೋಪಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಶೇಷಾದ್ರಿಪುರಂ ನಿವಾಸಿ ಮಂಜುನಾಥ್(36) ಮೃತ ಆರೋಪಿ. ಸದ್ಯ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.

ಇದನ್ನೂ ಓದಿ: ಸೋದರಸಂಬಂಧಿಯನ್ನೇ ವರಿಸಿದ ಯುವತಿ! ಚಿಕ್ಕಬಳ್ಳಾಪುರದಲ್ಲೊಂದು ವಿಚಿತ್ರ ವಿವಾಹ

ಏಪ್ರಿಲ್ 28ರಂದು ಪೊಲೀಸರು ಮಂಜುನಾಥ್ ಬಂಧಿಸಿದ್ದರು. ಮೇ 1ರಂದು ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗೆ ಪಿತ್ತಜನಕಾಂಗ ಮತ್ತು ಸಕ್ಕರೆ ಕಾಯಿಲೆ ಇತ್ತು. ಚಿಕಿತ್ಸೆ ಫಲಿಸದೇ ಮೇ 3ರಂದು ಮಂಜುನಾಥ್ ಮೃತಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us