AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ, ರೈತರು ಕಂಗಾಲು

ರೈತರಿಗೆ ಒಂದಲ್ಲ ಒಂದು ರೀತಿಯ ಸಂಕಷ್ಟ ತಪ್ಪಿದ್ದಲ್ಲ. ಈ ವರ್ಷ ಅತಿಯಾದ ಮಳೆಯಿಂದ ಹಾನಿಯಾಗಿ ಅಳಿದುಳಿದಿದ್ದ ಬೆಳೆಯನ್ನು ಕಷ್ಟಪಟ್ಟು ಉಳಿಸಿಕೊಂಡಿದ್ದು, ಈಗ ಫಲ ಕೈಗೆ ಸಿಕ್ಕಿದಾಗ ಬೆಲೆ ಇಲ್ಲದಾಗಿದೆ. ಎಕರೆಗೆ ಎರಡು ಲಕ್ಷ ರೂ.ನಂತೆ ಖರ್ಚು ಮಾಡಿ ಬೆಳೆದ ಮೆಣಸಿನಕಾಯಿ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದೆ ಬಳ್ಳಾರಿಯ ರೈತರು ಕಂಗಾಲಾಗಿದ್ದಾರೆ.

ಬಳ್ಳಾರಿ: ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ, ರೈತರು ಕಂಗಾಲು
ಬಳ್ಳಾರಿ: ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ, ರೈತರು ಕಂಗಾಲು
ವಿನಾಯಕ ಬಡಿಗೇರ್​
| Edited By: |

Updated on:Jan 28, 2025 | 11:46 AM

Share

ಬಳ್ಳಾರಿ, ಜನವರಿ 28: ಗಣಿನಾಡು ಬಳ್ಳಾರಿಯಲ್ಲಿ ಬಹುತೇಕ ರೈತರು ಮೆಣಸಿನಕಾಯಿ ಬೆಳೆಯನ್ನು ಅತೀ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಾರೆ. ಈ ವರ್ಷವಂತೂ ಸುಮಾರು 40,000 ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯನ್ನೇ ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ರೈತರು ಸಾಲ ಸೋಲ ಮಾಡಿ ಮೆಣಸಿನಕಾಯಿ ಬೆಳೆದಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಬೆಲೆ ಸಂಪೂರ್ಣ ಪಾತಾಳಕ್ಕೆ ಕುಸಿದಿದೆ.

2022- 23 ರಲ್ಲಿ 50 ರಿಂದ 60 ಸಾವಿರ ರೂ. ವರಗೆ ಒಂದು ಕ್ವಿಂಟಲ್ ಮೆಣಸಿನಕಾಯಿ ಬೆಳೆ ಮಾರಾಟವಾಗಿತ್ತು. ಆದರೆ ಈ ವರ್ಷ ಸಂಪೂರ್ಣ ಕುಸಿತ ಕಂಡಿದೆ. ಒಂದು ಕ್ವಿಂಟಲ್ ಮೆಣಸಿನಕಾಯಿಗೆ‌ 8 ರಿಂದ‌ 10 ಸಾವಿರ ರೂ. ಮಾತ್ರ ದೊರೆಯುತ್ತಿದೆ. ಹೀಗಾಗಿ ಮೆಣಸಿನಕಾಯಿ ಬೆಳೆಗಾರರು ಕಂಗಾಲಾಗಿದ್ದಾರೆ. ಒಂದು ಎಕರೆ ಮೆಣಸಿನಕಾಯಿ ಬೆಳೆಗೆ ಸುಮಾರು 2 ಲಕ್ಷ ರೂ. ವರಗೆ ಖರ್ಚು ಮಾಡಿದ ರೈತ ಲಾಭಾವೂ ಇಲ್ಲದೆ, ಅಸಲೂ ದೊರೆಯದೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡಿ ಮೆಣಸಿನಕಾಯಿ ಖರೀದಿ ಮಾಡಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ಒಂದು ಎಕರೆ ಮೆಣಸಿನಕಾಯಿ ಬೆಳೆಯಬೇಕಿದ್ದರೆ ಬೀಜ, ರಸಗೊಬ್ಬರ, ಕಿಟನಾಶಕ, ಕೂಲಿ ಆಳು, ಕಳೆನಾಶಕ, ಕಟಾವು, ಸಾರಿಗೆ ವೆಚ್ಚ ಇವೆಲ್ಲ ಸೇರಿ ಹತ್ತಾರು ಸಾವಿರ ರೂ. ಖರ್ಚಾಗುತ್ತದೆ. ಕನಿಷ್ಠ ಅಂದರೂ ಒಂದು ಕ್ವಿಂಟಲ್ ಮೆಣಸಿನಕಾಯಿ ಬೆಳೆಗೆ 40 ರಿಂದ 50 ಸಾವಿರ ರೂ. ವರಗೆ ಮಾರಾಟವಾದರೆ ಹೇಗೋ ಅಸಲು ಹೊಂದಿಸಿಕೊಳ್ಳಬುದೇನೋ. ಆದರೆ, ಈಗ ಎಂಟು ಸಾವಿರ ರೂಪಾಯಿಗೂ ಕೇಳುವವರು ಇಲ್ಲವಾಗಿದ್ದಾರೆ. ಹೀಗಾಗಿ ಅನ್ನದಾತ ಕಣ್ಣೀರಲ್ಲಿ ಕೈ ತೊಳೆಯುವ ಪರಿಸ್ಥಿತಿ ಬಂದಿದೆ.

Chilli

ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣ ಆಗಬೇಕು. ಇಲ್ಲಿಂದಲೇ ಮಾರಾಟ ಆಗಬೇಕು ಎಂದು ರೈತರು ಹಲವು ವರ್ಷಗಳಿಂದ ಬೇಡಿಕೆ‌ ಮುಂದಿಡುತ್ತಾ ಬಂದಿದ್ದಾರೆ. ಸರ್ಕಾರ ಮಾತ್ರ ಈ ವರಗೆ ಮನಸ್ಸು ಮಾಡಿಲ್ಲ. ಹೀಗಾಗಿ ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ತಿಂಗಳು 30 ರಂದು ಬಳ್ಳಾರಿಯಲ್ಲಿ ರೈತರು ಪ್ರತಿಭಟನೆಯ ಎಚ್ಚರಿಕೆ‌ ನೀಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ವೈದ್ಯನ ಕಿಡ್ನ್ಯಾಪ್‌ ಮಾಡಿ 300 ರೂ ಬಸ್ ಚಾರ್ಜ್ ಕೊಟ್ಟು ವಾಪಸ್ ಕಳಿಸಿದ ಖದೀಮರು

ಒಟ್ಟಿನಲ್ಲಿ ಗಣಿನಾಡು ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡುವ ಮೂಲಕ ಮೆಣಸಿನಕಾಯಿ ಖರೀದಿ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 am, Tue, 28 January 25

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?