AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ: ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ

ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಗಳಿಗೆ ಕೋಟ್ಯಂತರ ರೂ. ವಂಚನೆ ಎಸಗಲಾಗಿದ್ದು, ವೆಂಕಟೇಶ ಎಂಬಾತ ಚಿಟ್ ಫಂಡ್ ವ್ಯವಹಾರದ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರಿಂದ ಹಣ ಸಂಗ್ರಹಿಸಿ ಪರಾರಿಯಾಗಿದ್ದಾನೆ. 800ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದು, 200ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ವಂಚಕನನ್ನು ಬಂಧಿಸಿ ಹಣ ಮರಳಿಸುವಂತೆ ಸಂತ್ರಸ್ತರು ಆಗ್ರಹಿಸಿದ್ದಾರೆ.

ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ: ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ
ಬಳ್ಳಾರಿಯ ಬ್ರೂಸ್​ಪೇಟೆ ಪೊಲೀಸ್ ಠಾಣೆImage Credit source: tv9
ವಿನಾಯಕ ಬಡಿಗೇರ್​
| Edited By: |

Updated on:Feb 21, 2026 | 8:07 AM

Share

ಬಳ್ಳಾರಿ, ಫೆಬ್ರವರಿ 21: ಭಾರೀ ಚೀಟಿ ವಂಚನೆ ಪ್ರಕರಣವೊಂದರಲ್ಲಿ ಬಳ್ಳಾರಿಯ (Ballari) ನೂರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಬೆಳಕಿಗೆ ಬಂದಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಎಂಬಾತ ಚೀಟಿ ವ್ಯವಹಾರದ ಹೆಸರಿನಲ್ಲಿ ಸುಮಾರು 800ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹಿಸಿದ್ದಾನೆ ಎನ್ನಲಾಗಿದೆ. ಒಬ್ಬರಿಂದ 10 ಸಾವಿರ ರೂಪಾಯಿಯಿಂದ ಹಿಡಿದು 1 ಕೋಟಿ ರೂಪಾಯಿ ವರೆಗೆ ಹಣ ಪಡೆದುಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಆತ ಸಂಗ್ರಹಿಸಿದ ಒಟ್ಟು ಮೊತ್ತ ನೂರಾರು ಕೋಟಿಗಳಿಗೆ ತಲುಪಿರಬಹುದೆಂದು ಅಂದಾಜಿಸಲಾಗಿದೆ.

ಹಣ ಕಳೆದುಕೊಂಡವರಲ್ಲಿ ಟೀ ಅಂಗಡಿ ನಡೆಸುವವರು, ಬೀದಿ ವ್ಯಾಪಾರಿಗಳು, ತರಕಾರಿ ಮಾರಾಟಗಾರರು ಸೇರಿದಂತೆ ಬಡ ಹಾಗೂ ಮಧ್ಯಮ ವರ್ಗದ ಜನರು ಹೆಚ್ಚಿದ್ದಾರೆ. ಮಕ್ಕಳ ಶಿಕ್ಷಣ, ಮಗಳ ಮದುವೆ, ಮನೆ ನಿರ್ಮಾಣ, ಹೋಟೆಲ್ ಆರಂಭಿಸುವ ಕನಸು ಸೇರಿದಂತೆ ವಿವಿಧ ಉದ್ದೇಶಗಳಿಗೆ ವರ್ಷಗಳ ಕಾಲ ದುಡಿದು ಕೂಡಿಸಿದ ಹಣವನ್ನು ಚೀಟಿ ರೂಪದಲ್ಲಿ ಹೂಡಿಕೆ ಮಾಡಿದ್ದರು. ಕಟ್ಟಿದ ಹಣಕ್ಕೆ ಹೆಚ್ಚಿನ ಬಡ್ಡಿ ಸಿಗುತ್ತದೆ ಎಂಬ ಭರವಸೆಯ ಮಾತುಗಳಿಗೆ ಮೋಸಹೋಗಿದ್ದಾರೆ.

200ಕ್ಕೂ ಹೆಚ್ಚು ಜನರಿಂದ ಪೊಲೀಸ್ ದೂರು

ಕೋಟ್ಯಂತರ ರೂಪಾಯಿ ಸಂಗ್ರಹಿಸಿದ ಬಳಿಕ ವೆಂಕಟೇಶ ಕಳೆದ ತಿಂಗಳು ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಇದುವರೆಗೆ ಆತನ ಸುಳಿವು ಪತ್ತೆಯಾಗಿಲ್ಲ. ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರು ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಶೀಘ್ರ ಬಂಧಿಸಿ ನಮ್ಮ ಹಣ ವಾಪಸ್ ಕೊಡಿಸುವಂತೆ ವಂಚನೆಗೊಳಗಾದವರು ಪೊಲೀಸರನ್ನು ಆಗ್ರಹಿಸುತ್ತಿದ್ದಾರೆ.

ಈ ಪ್ರಕರಣ ಸಂಬಂಧ ಸ್ಥಳೀಯ ಶಾಸಕ ಭರತ್ ರೆಡ್ಡಿ ಕೂಡ ಪೊಲೀಸರೊಂದಿಗೆ ಮಾತನಾಡಿ, ಆರೋಪಿಯನ್ನು ಪತ್ತೆಹಚ್ಚಿ ಅಮಾಯಕರ ಹಣ ಮರಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮನೆಯವರಿಂದಲೇ ಮಿಸ್ಸಿಂಗ್ ಕೇಸ್!

ವಿಪರ್ಯಾಸವೆಂದರೆ, ವೆಂಕಟೇಶ ಕಾಣೆಯಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಮಿಸ್ಸಿಂಗ್ ದೂರು ದಾಖಲಿಸಿರುವ ಮಾಹಿತಿ ಕೂಡ ಲಭ್ಯವಾಗಿದೆ. ಇದರಿಂದ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಉಂಡ ಮನೆಗೇ ಕನ್ನ ಹಾಕಿದ BSNL ಅಧಿಕಾರಿಗಳು: 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳವು

ಒಟ್ಟಿನಲ್ಲಿ ಹೆಚ್ಚು ಲಾಭದ ಆಸೆಗೆ ಬಿದ್ದು ದುಡಿದ ಹಣವನ್ನು ಹೂಡಿಕೆ ಮಾಡಿದ ನೂರಾರು ಕುಟುಂಬಗಳು ಇದೀಗ ಬೀದಿಗೆ ಬಂದಂತಾಗಿದ್ದು, ಕಂಗಾಲಾಗಿವೆ. ವಂಚಕನನ್ನು ಶೀಘ್ರ ಪತ್ತೆಹಚ್ಚಿ ಜನರ ಹಣ ಮರಳಿಸುವಲ್ಲಿ ಪೊಲೀಸರು ಯಶಸ್ವಿಯಾಗುತ್ತಾರೆಯೇ ಎಂಬುದು ಕಾದು ನೋಡಬೇಕಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 am, Sat, 21 February 26

Follow Us
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ