AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ballari News: ಸೇತುವೆ ಮೇಲಿಂದ ನದಿಗೆ ಮಗುಚಿ ಬಿದ್ದ ಲಾರಿ: ಸತತ 13 ಗಂಟೆಗಳ ಬಳಿಕ ಚಾಲಕನ ರಕ್ಷಣೆ, ಕ್ಲೀನರ್​​ಗಾಗಿ ಮುಂದುವರೆದ ಕಾರ್ಯಾಚರಣೆ

ಲಾರಿ ಚಾಲಕ ಅಹ್ಮದ್, ಕ್ಲೀನರ್ ಹುಸೇನ್​ಗಾಗಿ ಕಾರ್ಯಾಚರಣೆಗೆ ತೆರಳಿದ ವೇಳೆ ಅಗ್ನಿಶಾಮಕ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದ್ದು, ನದಿಯಲ್ಲಿ ಸಿಲುಕಿದ ನಾಲ್ವರ ರಕ್ಷಣೆಗೆ ತಾಲೂಕಾಡಳಿತ ಹರಸಾಹಸ ಪಟ್ಟಿದೆ.

Ballari News: ಸೇತುವೆ ಮೇಲಿಂದ ನದಿಗೆ ಮಗುಚಿ ಬಿದ್ದ ಲಾರಿ: ಸತತ 13 ಗಂಟೆಗಳ ಬಳಿಕ ಚಾಲಕನ ರಕ್ಷಣೆ, ಕ್ಲೀನರ್​​ಗಾಗಿ ಮುಂದುವರೆದ ಕಾರ್ಯಾಚರಣೆ
ನದಿಯಲ್ಲಿ ಕೊಚ್ಚಿ ಹೋದವರಿಗಾಗಿ ಕಾರ್ಯಚರಣೆ ಮಾಡುತ್ತಿರುವುದು.
TV9 Web
| Edited By: |

Updated on:Aug 03, 2022 | 7:14 AM

Share

ಬಳ್ಳಾರಿ: ಭತ್ತ ತುಂಬಿದ ಲಾರಿಯೊಂದು ಸೇತುವೆ ಮೇಲಿಂದ ನದಿಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿಯ ವೇದಾವತಿ ನದಿಯಲ್ಲಿ ನಡೆದಿದೆ. ಭತ್ತದ ಲೋಡ್ ತುಂಬಿಕೊಂಡು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ನಂದಿ ಕೊಟ್ಟೂರಿಗೆ ಲಾರಿ ತೆರಳುತ್ತಿದ್ದು, ಪ್ರವಾಹವನ್ನ ಲೆಕ್ಕಿಸದೇ ಸೇತುವೆ ದಾಟಿಸಲು‌ ಮುಂದಾದ ವೇಳೆ ಲಾರಿ ಮಗುಚಿ ನದಿಗೆ ಬಿದ್ದಿದೆ. 13 ಗಂಟೆಗಳಿಂದ ಸತತವಾಗಿ ಜೀವ ಉಳಿಸಿಕೊಳ್ಳಲು ಚಾಲಕ ಮತ್ತು ಕ್ಲೀನರ್ ಪರದಾಡುತ್ತಿದ್ದು, ಸದ್ಯ ಲಾರಿ ಚಾಲಕ ಅಹ್ಮದ್​ನನ್ನು ರಕ್ಷಣೆ ಮಾಡಿದ್ದು, ಕ್ಲೀನರ್ ಹುಸೇನ್​ಗಾಗಿ ಕಾರ್ಯಾಚರಣೆ ನಡೆಯುತ್ತಿದೆ.

ಪ್ರವಾಹದಲ್ಲಿ ಸಿಲುಕಿದ ಅಗ್ನಿಶಾಮಕ ಸಿಬ್ಬಂದಿ

ಇನ್ನೂ ಲಾರಿ ಚಾಲಕ ಅಹ್ಮದ್, ಕ್ಲೀನರ್ ಹುಸೇನ್​ಗಾಗಿ ಕಾರ್ಯಾಚರಣೆಗೆ ತೆರಳಿದ ವೇಳೆ ಅಗ್ನಿಶಾಮಕ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದ್ದು, ನದಿಯಲ್ಲಿ ಸಿಲುಕಿದ ನಾಲ್ವರ ರಕ್ಷಣೆಗೆ ತಾಲೂಕಾಡಳಿತ ಹರಸಾಹಸ ಪಟ್ಟಿದೆ. ಸದ್ಯ ಇಬ್ಬರ ರಕ್ಷಣೆ ಮಾಡಿದ್ದು, ಇನ್ನಿಬ್ಬರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದೆ. ದೊಡ್ಡ ಬೋಟ್ ತರಿಸಿ ಚಾಲಕ ಮತ್ತು ಕ್ಲೀನರ್ ರಕ್ಷಣೆಗೆ ಯತ್ನಿಸಲಾಗುತ್ತಿದೆ. ಸ್ಥಳದಲ್ಲೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ತಾಲೂಕಾಡಳಿತದ ಅಧಿಕಾರಿಗಳು ಮೊಕ್ಕಾ ಹೂಡಿದ್ದಾರೆ. ಸ್ಥಳಕ್ಕೆ ಸಿರಗುಪ್ಪ ಶಾಸಕ ಎಂ.ಎಸ್ ಸೋಮಲಿಂಗಪ್ಪ, ಎಂ.ಎಸ್ ಸಿದ್ದಪ್ಪ ಭೇಟಿ ನೀಡಿದ್ದು, ತಹಶಿಲ್ದಾರ ಜೊತೆ ರಕ್ಷಣಾ ಕಾರ್ಯಾಚರಣೆಗೆ ಶಾಸಕ ಹಾಗೂ ಶಾಸಕರ ಪುತ್ರ ಸಹಕಾರ ನೀಡುತ್ತಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ಇಳಿದ ಬೋಟ್ ಸಹ ಪಂಚರ್ ಆಗಿದ್ದು, ಪ್ರವಾಹ ಹೆಚ್ಚಳ ಹಿನ್ನಲೆಯಲ್ಲಿ ತಾಲೂಕಾಡಳಿತ ಬೋಟ್ ತರಿಸುತ್ತಿದ್ದು, ನಸುಕಿನ ಜಾವ ಮತ್ತೆ ಕಾರ್ಯಾಚರಣೆ ನಡೆಸಲು ನಿರ್ಧಾರ ಮಾಡಲಾಗಿದ್ದು, ಎನ್​​ಡಿಆರ್​ಎಫ್ ರಕ್ಷಣಾ ತಂಡಕ್ಕೆ ಬುಲಾವ್ ನೀಡಲಾಗಿದೆ.

Published On - 7:09 am, Wed, 3 August 22

Follow Us
Web contact
Web contact

TV9 Kannada

Read More
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ