AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಗೃಹ ಲಕ್ಷ್ಮಿ ಅರ್ಜಿ ಸಲ್ಲಿಕೆಗೆ 50 ರೂ. ಶುಲ್ಕ ಪಡೆದ ಆಪರೇಟರ್ ವಿರುದ್ಧ ಎಫ್​ಐಆರ್

ಅಂಕಮನಾಳು ಗ್ರಾಮದ ಮಾರೆಮ್ಮ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕುಳಿತು, ಉದ್ದೇಶ ಪೂರ್ವಕವಾಗಿ ಗೃಹ ಲಕ್ಷ್ಮಿ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ 50 ರೂ. ಹಣ ಸ್ವೀಕರಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆಗಸ್ಟ್ 1 ರಂದು ಮಧ್ಯಾಹ್ನ 02 ಕ್ಕೆ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು.

ಬಳ್ಳಾರಿ: ಗೃಹ ಲಕ್ಷ್ಮಿ ಅರ್ಜಿ ಸಲ್ಲಿಕೆಗೆ 50 ರೂ. ಶುಲ್ಕ ಪಡೆದ ಆಪರೇಟರ್ ವಿರುದ್ಧ ಎಫ್​ಐಆರ್
ಸಾಂದರ್ಭಿಕ ಚಿತ್ರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: Ganapathi Sharma|

Updated on: Aug 02, 2023 | 7:42 PM

Share

ಬಳ್ಳಾರಿ, ಆಗಸ್ಟ್ 2: ಗೃಹ ಲಕ್ಷ್ಮಿ ಯೋಜನೆಯ (Gruha Lakshmi Scheme) ನೋಂದಣಿಗೆ ಸಂಬಂಧಿಸಿದಂತೆ ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವುದಕ್ಕೆ, ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಂಡೂರು ತಾಲೂಕಿನ ಅಂಕಮನಾಳು ಗ್ರಾಮದ ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ದೇವರಾಜ್ ಎಂಬುವರು ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪ್ರತಿ ಅರ್ಜಿದಾರರಿಂದ 50 ರೂ. ಹಣ ಪಡೆಯುತ್ತಿರುವುದು ಕಂಡುಬಂದಿದ್ದು, ಸಂಡೂರು ತಾಲೂಕಿನ ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಂಕಮನಾಳು ಗ್ರಾಮದ ಮಾರೆಮ್ಮ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕುಳಿತು, ಉದ್ದೇಶ ಪೂರ್ವಕವಾಗಿ ಗೃಹ ಲಕ್ಷ್ಮಿ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ 50 ರೂ. ಹಣ ಸ್ವೀಕರಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆಗಸ್ಟ್ 1 ರಂದು ಮಧ್ಯಾಹ್ನ 02 ಕ್ಕೆ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು.

ಸಂಡೂರು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳನಾಗಪ್ಪ, ಅಂಕಮನಾಳು ಗ್ರಾಮದ ಗ್ರಾಮ ಆಡಳಿತಾಧಿಕಾರಿ ಬಿ ಕೊಟ್ರಪ್ಪ, ಚೋರನೂರು ಪಟ್ಟಣದ ಕಂದಾಯ ನಿರೀಕ್ಷಕ ಬಿ ವೀರೇಂದ್ರ ಕುಮಾರ ಅವರು ದಾಳಿ ನಡೆಸಿ ಅಕ್ರಮವನ್ನು ಪತ್ತೆ ಹಚ್ಚಿದ್ದರು.

ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಂದ ಯಾವುದೇ ಶುಲ್ಕ ಪಡೆಯಬಾರದು ಎಂದು ಸರ್ಕಾರದ ಆದೇಶ ಇದ್ದರೂ ಹಣ ಸ್ವೀಕರಿಸಿ ಸರ್ಕಾರಕ್ಕೆ ನಂಬಿಕೆ ದ್ರೋಹಮಾಡಿ ಮೋಸ ಮಾಡಿರುತ್ತಾರೆ. ಹೀಗಾಗಿ ಇವರ ಮೇಲೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದೂರು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೈ ಶಾಸಕರಿಂದ ಬ್ಯಾನರ್ ಮೂಲಕ ಜಾಗೃತಿ

ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ತುಂಬಲು ಅಲ್ಲಲ್ಲಿ ಶುಲ್ಕ ವಸೂಲಿ ಮುಂದುವರೆದಿದೆ. ಹೀಗಾಗಿ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತರೆಡ್ಡಿ ಬ್ಯಾನರ್ ಅಳವಡಿಕೆ ಜಾಗೃತಿ ಮೂಡಿಸುತ್ತಿದ್ದಾರೆ. ಹಣ ಬೇಡಿಕೆಯ ಕುರಿತು ಸಾಕಷ್ಟು ಕಡೆಗಳಲ್ಲಿ ವಿಡಿಯೋ ವೈರಲ್ ಬೆನ್ನಲ್ಲೆ ಜಾಗೃತಿ ಅಭಿಯಾನ ಆರಂಬಿಸಿದ್ದು ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಬ್ಯಾನರ್ ನಲ್ಲಿ ಮೊಬೈಲ್ ನಂಬರ್ ನೀಡಿ ನೇರವಾಗಿ ಕರೆ ಮಾಡಿ ದೂರು ಸಲ್ಲಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ನೋಂದಣಿಗೆ ಲಂಚ ಪಡೆಯುತ್ತಿರುವ ಬೆಂಗಳೂರು ಒನ್ ಸಿಬ್ಬಂದಿ

ಯಾರಾದರೂ ಹಣ ಕೇಳಿದ್ರೇ‌ ನೇರವಾಗಿ ನನ್ನ ನಂಬರ್ ಗೆ ಕಾಲ್ ಮಾಡುವಂತೆ ಶಾಸಕರು ಬ್ಯಾನರ್ ಅಳವಡಿಕೆ‌ ಮಾಡಿದ್ದು. ಹಣ ಕೇಳಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕ್ತೇವೆ.‌ ಸೇವಾ ಕೇಂದ್ರ ಸೇರಿದಂತೆ ವಿವಿ ವಾರ್ಡ್ ಗಳಲ್ಲಿ ಸಿಬ್ಬಂದಿ ನಿಯೋಜನೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಾಗೃತಿ ಮೂಡಿಸುವ ಬ್ಯಾನರ್ ಅಳವಡಿಕೆ‌ ಮಾಡಿರುವುದು ವಿಶೇಷವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ