AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಜೆಸಿಬಿಯಿಂದ ರಾತ್ರೋರಾತ್ರಿ ಬೆಳೆ ನಾಶ: ಖಾಸಗಿ ಕಂಪನಿ ವಿರುದ್ಧ ಪೊಲೀಸ್ ಠಾಣೆ​ ಮೆಟ್ಟಿಲೇರಿದ ರೈತರು

ಬಳ್ಳಾರಿ ಜಿಲ್ಲೆಯ ಸಂಡೂರಿನ ಖಾಸಗಿ ಕಂಪನಿ (ಆರ್‌ಐಪಿಎಲ್) ತಮ್ಮ ಮೈನಿಂಗ್ ಅಭಿವೃದ್ಧಿಗಾಗಿ ಜಮೀನು ತೆಗೆದುಕೊಳ್ಳಲು ಪಯತ್ನ ನಡೆಸಿದ್ದಾರೆ. ರೈತರು ತಮ್ಮ ಜಮೀನು ನೀಡದಿದ್ದಾಗ ರಾತ್ರೋರಾತ್ರಿ ಖಾಸಗಿ ಕಂಪನಿ ಸಿಬ್ಬಂದಿಗಳು ಜೆಸಿಬಿ ತಂದು ಬೆಳೆ ನಾಶ ಮಾಡಿ ಅಟ್ಟಹಾಸ ಮೇರೆದಿದ್ದಾರೆ. ಸದ್ಯ ಖಾಸಗಿ ಕಂಪನಿ ವಿರುದ್ಧ ರೈತರು ಪೊಲೀಸ್ ಠಾಣೆ ಮೆಟ್ಡಿಲೇರಿದ್ದು, ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಬಳ್ಳಾರಿ: ಜೆಸಿಬಿಯಿಂದ ರಾತ್ರೋರಾತ್ರಿ ಬೆಳೆ ನಾಶ: ಖಾಸಗಿ ಕಂಪನಿ ವಿರುದ್ಧ ಪೊಲೀಸ್ ಠಾಣೆ​ ಮೆಟ್ಟಿಲೇರಿದ ರೈತರು
ಬೆಳೆ ನಾಶ
ವಿನಾಯಕ ಬಡಿಗೇರ್​
| Edited By: |

Updated on:Dec 08, 2023 | 11:49 AM

Share

ಬಳ್ಳಾರಿ, ಡಿಸೆಂಬರ್​​ 08: ಮೈನಿಂಗ್ ಕಂಪನಿ (mining company) ಅಭಿವೃದ್ಧಿಗಾಗಿ ಜಮೀನು ನೀಡಲಿಲ್ಲವೆಂದು ಬಿತ್ತನೆ ಮಾಡಿದ ಹೊಲದಲ್ಲಿ ರಾತ್ರೋರಾತ್ರಿ ಖಾಸಗಿ ಕಂಪನಿ ಸಿಬ್ಬಂದಿಗಳು ಜೆಸಿಬಿ ತಂದು ಬೆಳೆ ನಾಶ ಮಾಡಿ ಅಟ್ಟಹಾಸ ಮೇರೆದಿರುವಂತಹ ಘಟನೆ ಸಂಡೂರು ತಾಲೂಕಿನ ರಣಜಿತ್ ಪುರ ಗ್ರಾಮದಲ್ಲಿ ನಡೆದಿದೆ. ಸಾವಿರಾರು ರೂ. ಖರ್ಚು ಮಾಡಿ ಬಿತ್ತನೆ ಮಾಡಿದ ಬೆಳೆ ನಾಶ ಕಂಡು ಅನ್ನದಾತರು ಕಣ್ಣಿರು ಹಾಕಿದ್ದಾರೆ. ಕಾಡಪ್ಪ ಮತ್ತು ಪರಮೇಶ್ವರಪ್ಪ ಸೇರಿದಂತೆ ಇತರೆ ರೈತರ ಬೆಳೆನಾಶ ಮಾಡಲಾಗಿದೆ.

ಕಷ್ಟಪಟ್ಟು ಬಿತ್ತಿದ ಈರುಳ್ಳಿ, ಮೆಕ್ಕೆ ಜೋಳ ಸೇರಿದಂತೆ ಕೃಷಿ ಪರಿಕಗಳ ನಾಶ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಬರದಿಂದ ತತ್ತರಿಸಿದ ಬಳ್ಳಾರಿ ರೈತರಿಗೆ ಮತ್ತೊಂದು ಸಂಕಷ್ಟ; ಮೆಣಸಿನಕಾಯಿಗೆ ರೋಗ, ಅನ್ನದಾತ ಕಂಗಾಲು

ಸಂಡೂರಿನ ಖಾಸಗಿ ಕಂಪನಿಯವರು (ಆರ್‌ಐಪಿಎಲ್) ತಮ್ಮ ಮೈನಿಂಗ್ ಕಂಪನಿ ಅಭಿವೃದ್ಧಿಗಾಗಿ ಜಮೀನು ತೆಗೆದುಕೊಳ್ಳಲು ಪಯತ್ನ ನಡೆಸಿದ್ದಾರೆ. ಭೂಮಿ ನೀಡುವುದಿಲ್ಲ ಎಂದು ಹೇಳಿದ್ದರು ಕೆಐಡಿಬಿ ಮೂಲಕ ಖಾಸಗಿ ಕಂಪನಿ ಒತ್ತಡ ಹಾಕುತ್ತಿದೆ. ಆದರೆ ರೈತರು ಮಾತ್ರ ಭೂಮಿ ನೀಡುತ್ತಿಲ್ಲ. ಈ ಬಗ್ಗೆ ಧಾರವಾಡ ಹೈಕೋರ್ಟ್​ನಲ್ಲಿ ವ್ಯಾಜ್ಯ ನಡೆಯುತ್ತಿದೆ.

ಈ ಮಧ್ಯೆ ರಾತ್ರೋರಾತ್ರಿ ಕಂಪನಿಯವರು ಜಮೀನಿನಲ್ಲಿ ಬೆಳೆದ ಈರುಳ್ಳಿ, ಮೆಕ್ಕೆ ಜೋಳ ಸೇರಿದಂತೆ ಇತರೆ ಬೆಳೆ ನಾಶ ಮಾಡಿದ್ದಾರೆ. ಮಳೆ ಇಲ್ಲದೇ ಕಂಗಾಲಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಲಾಗಿದೆ. ಇದೀಗ ಖಾಸಗಿ ಕಂಪನಿ ವಿರುದ್ಧ ರೈತರು ಪೊಲೀಸ್ ಠಾಣೆ ಮೆಟ್ಡಿಲೇರಿದ್ದು, ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಉಸ್ತುವಾರಿ ಸಚಿವರಿಂದ ಬರ ವೀಕ್ಷಣೆ: 60 ಸಾವಿರ ಹೆಕ್ಟೇರ್ ಬೆಳೆ ಹಾನಿ, ಅನುದಾನಕ್ಕೆ ರೈತರು ಒತ್ತಾಯ

ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಬರ ತಾಂಡವಾಡುತ್ತಿದೆ. ರೈತರು ಸಾಲ ಮಾಡಿ ಬೆಳೆದ ಬೆಳೆಯಲ್ಲ ಹಾನಿಯಾಗಿದೆ. ಇತ್ತ ಫಸಲು ಸಿಗದೆ, ಸರ್ಕಾರದಿಂದ ಸೂಕ್ತ ಪರಿಹಾರವೂ ಘೋಷಣೆ ಆಗದೆ ರೈತ ಕಣ್ಣೀರಿಡುತ್ತಿದ್ದಾರೆ. ಇದರ ಮಧ್ಯೆ ಖಾಸಗಿ ಕಂಪನಿ ಸಿಬ್ಬಂದಿಗಳಿಂದ ತೊಂದರೆ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:49 am, Fri, 8 December 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ