Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಜೆಸಿಬಿಯಿಂದ ರಾತ್ರೋರಾತ್ರಿ ಬೆಳೆ ನಾಶ: ಖಾಸಗಿ ಕಂಪನಿ ವಿರುದ್ಧ ಪೊಲೀಸ್ ಠಾಣೆ​ ಮೆಟ್ಟಿಲೇರಿದ ರೈತರು

ಬಳ್ಳಾರಿ ಜಿಲ್ಲೆಯ ಸಂಡೂರಿನ ಖಾಸಗಿ ಕಂಪನಿ (ಆರ್‌ಐಪಿಎಲ್) ತಮ್ಮ ಮೈನಿಂಗ್ ಅಭಿವೃದ್ಧಿಗಾಗಿ ಜಮೀನು ತೆಗೆದುಕೊಳ್ಳಲು ಪಯತ್ನ ನಡೆಸಿದ್ದಾರೆ. ರೈತರು ತಮ್ಮ ಜಮೀನು ನೀಡದಿದ್ದಾಗ ರಾತ್ರೋರಾತ್ರಿ ಖಾಸಗಿ ಕಂಪನಿ ಸಿಬ್ಬಂದಿಗಳು ಜೆಸಿಬಿ ತಂದು ಬೆಳೆ ನಾಶ ಮಾಡಿ ಅಟ್ಟಹಾಸ ಮೇರೆದಿದ್ದಾರೆ. ಸದ್ಯ ಖಾಸಗಿ ಕಂಪನಿ ವಿರುದ್ಧ ರೈತರು ಪೊಲೀಸ್ ಠಾಣೆ ಮೆಟ್ಡಿಲೇರಿದ್ದು, ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಬಳ್ಳಾರಿ: ಜೆಸಿಬಿಯಿಂದ ರಾತ್ರೋರಾತ್ರಿ ಬೆಳೆ ನಾಶ: ಖಾಸಗಿ ಕಂಪನಿ ವಿರುದ್ಧ ಪೊಲೀಸ್ ಠಾಣೆ​ ಮೆಟ್ಟಿಲೇರಿದ ರೈತರು
ಬೆಳೆ ನಾಶ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 08, 2023 | 11:49 AM

ಬಳ್ಳಾರಿ, ಡಿಸೆಂಬರ್​​ 08: ಮೈನಿಂಗ್ ಕಂಪನಿ (mining company) ಅಭಿವೃದ್ಧಿಗಾಗಿ ಜಮೀನು ನೀಡಲಿಲ್ಲವೆಂದು ಬಿತ್ತನೆ ಮಾಡಿದ ಹೊಲದಲ್ಲಿ ರಾತ್ರೋರಾತ್ರಿ ಖಾಸಗಿ ಕಂಪನಿ ಸಿಬ್ಬಂದಿಗಳು ಜೆಸಿಬಿ ತಂದು ಬೆಳೆ ನಾಶ ಮಾಡಿ ಅಟ್ಟಹಾಸ ಮೇರೆದಿರುವಂತಹ ಘಟನೆ ಸಂಡೂರು ತಾಲೂಕಿನ ರಣಜಿತ್ ಪುರ ಗ್ರಾಮದಲ್ಲಿ ನಡೆದಿದೆ. ಸಾವಿರಾರು ರೂ. ಖರ್ಚು ಮಾಡಿ ಬಿತ್ತನೆ ಮಾಡಿದ ಬೆಳೆ ನಾಶ ಕಂಡು ಅನ್ನದಾತರು ಕಣ್ಣಿರು ಹಾಕಿದ್ದಾರೆ. ಕಾಡಪ್ಪ ಮತ್ತು ಪರಮೇಶ್ವರಪ್ಪ ಸೇರಿದಂತೆ ಇತರೆ ರೈತರ ಬೆಳೆನಾಶ ಮಾಡಲಾಗಿದೆ.

ಕಷ್ಟಪಟ್ಟು ಬಿತ್ತಿದ ಈರುಳ್ಳಿ, ಮೆಕ್ಕೆ ಜೋಳ ಸೇರಿದಂತೆ ಕೃಷಿ ಪರಿಕಗಳ ನಾಶ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಬರದಿಂದ ತತ್ತರಿಸಿದ ಬಳ್ಳಾರಿ ರೈತರಿಗೆ ಮತ್ತೊಂದು ಸಂಕಷ್ಟ; ಮೆಣಸಿನಕಾಯಿಗೆ ರೋಗ, ಅನ್ನದಾತ ಕಂಗಾಲು

ಸಂಡೂರಿನ ಖಾಸಗಿ ಕಂಪನಿಯವರು (ಆರ್‌ಐಪಿಎಲ್) ತಮ್ಮ ಮೈನಿಂಗ್ ಕಂಪನಿ ಅಭಿವೃದ್ಧಿಗಾಗಿ ಜಮೀನು ತೆಗೆದುಕೊಳ್ಳಲು ಪಯತ್ನ ನಡೆಸಿದ್ದಾರೆ. ಭೂಮಿ ನೀಡುವುದಿಲ್ಲ ಎಂದು ಹೇಳಿದ್ದರು ಕೆಐಡಿಬಿ ಮೂಲಕ ಖಾಸಗಿ ಕಂಪನಿ ಒತ್ತಡ ಹಾಕುತ್ತಿದೆ. ಆದರೆ ರೈತರು ಮಾತ್ರ ಭೂಮಿ ನೀಡುತ್ತಿಲ್ಲ. ಈ ಬಗ್ಗೆ ಧಾರವಾಡ ಹೈಕೋರ್ಟ್​ನಲ್ಲಿ ವ್ಯಾಜ್ಯ ನಡೆಯುತ್ತಿದೆ.

ಈ ಮಧ್ಯೆ ರಾತ್ರೋರಾತ್ರಿ ಕಂಪನಿಯವರು ಜಮೀನಿನಲ್ಲಿ ಬೆಳೆದ ಈರುಳ್ಳಿ, ಮೆಕ್ಕೆ ಜೋಳ ಸೇರಿದಂತೆ ಇತರೆ ಬೆಳೆ ನಾಶ ಮಾಡಿದ್ದಾರೆ. ಮಳೆ ಇಲ್ಲದೇ ಕಂಗಾಲಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಲಾಗಿದೆ. ಇದೀಗ ಖಾಸಗಿ ಕಂಪನಿ ವಿರುದ್ಧ ರೈತರು ಪೊಲೀಸ್ ಠಾಣೆ ಮೆಟ್ಡಿಲೇರಿದ್ದು, ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಉಸ್ತುವಾರಿ ಸಚಿವರಿಂದ ಬರ ವೀಕ್ಷಣೆ: 60 ಸಾವಿರ ಹೆಕ್ಟೇರ್ ಬೆಳೆ ಹಾನಿ, ಅನುದಾನಕ್ಕೆ ರೈತರು ಒತ್ತಾಯ

ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಬರ ತಾಂಡವಾಡುತ್ತಿದೆ. ರೈತರು ಸಾಲ ಮಾಡಿ ಬೆಳೆದ ಬೆಳೆಯಲ್ಲ ಹಾನಿಯಾಗಿದೆ. ಇತ್ತ ಫಸಲು ಸಿಗದೆ, ಸರ್ಕಾರದಿಂದ ಸೂಕ್ತ ಪರಿಹಾರವೂ ಘೋಷಣೆ ಆಗದೆ ರೈತ ಕಣ್ಣೀರಿಡುತ್ತಿದ್ದಾರೆ. ಇದರ ಮಧ್ಯೆ ಖಾಸಗಿ ಕಂಪನಿ ಸಿಬ್ಬಂದಿಗಳಿಂದ ತೊಂದರೆ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:49 am, Fri, 8 December 23