AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್

ಬಳ್ಳಾರಿಯ ತೋರಣಗಲ್​ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಂಜುನಾಥ್ ಮೇಲೆ ಗುರುವಾರ ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಸ್ಥಳ ಮಹಜರಿನ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಲ್ಲದೆ, ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದ. ಹೀಗಾಗಿ ಪೊಲೀಸರು ಆತನ ಬಲಗಾಲಿಗೆ ಫೈರಿಂಗ್ ಮಾಡಿದ್ದಾರೆ.

ಬಳ್ಳಾರಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್
ಆರೋಪಿ ಮಂಜುನಾಥ್
ವಿನಾಯಕ ಬಡಿಗೇರ್​
| Edited By: |

Updated on: Jan 16, 2025 | 11:09 AM

Share

ಬಳ್ಳಾರಿ, ಜನವರಿ 16: ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಂಜುನಾಥ್ (26) ಮೇಲೆ ಗುರುವಾರ ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು ಎನ್ನಲಾಗಿದೆ.

ಸೋಮವಾರ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ಮೂರು ತಂಡ ರಚಿಸಿದ್ದರು. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಪಂಚಾನಾಮೆಗೆ ಹೋದಾಗ ಆತ, ಹೆಡ್ ಕಾನ್ಸ್​​​ಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಪಿಎಸ್​ಐ ಡಾಕೇಶ್ ಆರೋಪಿಯ ಬಲಗಾಲಿಗೆ ಮೇಲೆ ಪೈರಿಂಗ್ ಮಾಡಿದ್ದರು. ಸದ್ಯ ಆರೋಪಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಾಯದಿಂದ ಪಾರಾದ ಮಗು

ಅತ್ಯಾಚಾರಕ್ಕೊಳಗಾಗಿರುವ ಬಾಲಕಿ ಸದ್ಯ ಅಪಾಯದಿಂದ ಪಾರಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಜನವರಿ 13ರ ಸೋಮವಾರದಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಆರೋಪಿ ಮಂಜುನಾಥ ಬಾಲಕಿಯನ್ನು ಹೊಂಚು ಹಾಕಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದುದು ಮತ್ತು ಆತನ ಚಲನವಲದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿತ್ತು.

ಬಾಲಕಿಯನ್ನು ಕರೆದುಕೊಂಡು ಹೋಗುವ ಮುನ್ನ ಆರೋಪಿ ಬಾರ್‌ನಲ್ಲಿ ಮದ್ಯಪಾನ ಮಾಡಿದ್ದ. ಕುಡಿದ ಮತ್ತಿನಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದ. ಬಳಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆರೋಪಿ ಹುಡುಕಾಟಕ್ಕೆ ಬಳ್ಳಾರಿ ಎಸ್​​ಪಿ ಮೂರು ಪೊಲೀಸ್ ತಂಡ ರಚನೆ ಮಾಡಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ವಿಜಯನಗರ ಜಿಲ್ಲೆ ಕಮಲಾಪುರ ಮೂಲದ ಆರೋಪಿ ಮಂಜುನಾಥನನ್ನು ಬುಧವಾರ ಕೊಪ್ಪಳದ ಹುಲಿಗಿಯಲ್ಲಿ ಬಂಧಸಲಾಗಿತ್ತು. ಗುರುವಾರ ಬೆಳಿಗ್ಗೆ ತೋರಣಗಲ್‌ನಲ್ಲಿ ಸ್ಥಳ ಮಹಜರಿಗೆ ಆರೋಪಿಯನ್ನು ಪೊಲೀಸರು ಕರೆ ತಂದಿದ್ದರು. ಈ ವೇಳೆ ಆತ ತಪ್ಪಿಕೊಳ್ಳಲು ಯತ್ನಿಸಿದ್ದ. ಅಲ್ಲದೆ, ಸ್ಥಳದಲ್ಲಿದ್ದ ಇತರ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್