AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಗಲಭೆ: ಪೊಲೀಸರ ನಡೆಗೆ ಜನಾರ್ದನ ರೆಡ್ಡಿ ಭಾರಿ ಅಸಮಧಾನ; ಕಾರಣ ಇಲ್ಲಿದೆ

ಬಳ್ಳಾರಿಯಲ್ಲಿ ಪೋಸ್ಟರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪೊಲೀಸರು ಮತ್ತು ಕಾಂಗ್ರೆಸ್ ಶಾಸಕರ ವಿರುದ್ಧ ದೂರು ನೀಡಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸದೆ ಹಿಂಬರಹ ನೀಡಿರುವುದಕ್ಕೆ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ಒತ್ತಡದಿಂದ ನ್ಯಾಯ ಸಿಗುತ್ತಿಲ್ಲವೆಂದು ಆರೋಪಿಸಿದ್ದು, ಇದು ಬಳ್ಳಾರಿ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಬಳ್ಳಾರಿ ಗಲಭೆ: ಪೊಲೀಸರ ನಡೆಗೆ ಜನಾರ್ದನ ರೆಡ್ಡಿ ಭಾರಿ ಅಸಮಧಾನ; ಕಾರಣ ಇಲ್ಲಿದೆ
ಬಳ್ಳಾರಿ ಗಲಭೆಗೆ ಅಧಿಕಾರಿಗಳೇ ಕಾರಣವೆಂದು ದೂರು; FIR ಮಾಡದ್ದಕ್ಕೆ ರೆಡ್ಡಿ ಆಕ್ರೋಶ
ವಿನಾಯಕ ಬಡಿಗೇರ್​
| Edited By: |

Updated on: Jan 09, 2026 | 11:53 AM

Share

ಬಳ್ಳಾರಿ, ಜನವರಿ 09: ಜಿಲ್ಲೆಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದ ಗಲಭೆ ಪ್ರಕರಣ ದಿನೇದಿನೇ ತಿರುವು ಪಡೆದುಕೊಳ್ಳುತ್ತಿದ್ದು, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಗೆ ಪೊಲೀಸ್ ಅಧಿಕಾರಿಗಳೇ ನೇರ ಕಾರಣ ಎಂದು ಆರೋಪಿಸಿ, ಬಳ್ಳಾರಿ ASP ರವಿಕುಮಾರ್, DSP ಚಂದ್ರಕಾಂತ ನಂದರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ರೆಡ್ಡಿ ದೂರು ಸಲ್ಲಿಸಿದ್ದರು.

ಜನವರಿ 1ರಂದು ತಮ್ಮ ನಿವಾಸದ ಬಳಿ ಬ್ಯಾನರ್ ಹಾಕುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ ಹಾಗೂ ಗುಂಡಿನ ದಾಳಿ ನಡೆದಿರುವುದಾಗಿ ರೆಡ್ಡಿ ಆರೋಪಿಸಿದ್ದಾರೆ. ಈ ಘಟನೆಯಲ್ಲಿ ತಮ್ಮನ್ನು ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಜನವರಿ 6ರಂದು ಮೂವರ ವಿರುದ್ಧ ನೀಡಿದ ದೂರಿಗೆ ಪೊಲೀಸರು FIR ದಾಖಲಿಸದೇ ಹಿಂಬರಹ ನೀಡಿರುವುದಕ್ಕೆ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರಿಂದ ಹಿಂಬರಹ

ನಾನು ನೀಡಿದ ದೂರು ಬೇರೆ, ಪೊಲೀಸರು ಕೊಟ್ಟ ಹಿಂಬರಹ ಬೇರೆ. ಸ್ಪಷ್ಟವಾಗಿ ಆರೋಪಿಗಳ ವಿರುದ್ಧ ಕೇಸ್ ಮಾಡಬೇಕಾದರೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ರೆಡ್ಡಿ ಕಿಡಿಕಾರಿದ್ದಾರೆ. ಈ ಕುರಿತು ಹಿಂಬರಹ ನೀಡಿರುವ ಪೊಲೀಸರು, ಇದೇ ಘಟನೆಗೆ ಸಂಬಂಧಿಸಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ಹೊಸ ದೂರನ್ನು ಮುಂದುವರೆದ ಮಾಹಿತಿ ಎಂದು ಪರಿಗಣಿಸಿ ತನಿಖೆಗೆ ಸೇರಿಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ ಬಳ್ಳಾರಿ ಬ್ಯಾನರ್ ಗಲಾಟೆ: ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ ಎಸ್ಪಿ ನೇಮಕ

ಆದರೆ ಅಧಿಕಾರಿಗಳು ಮತ್ತು ರಾಜಕೀಯ ಒತ್ತಡದಿಂದ ಹಾದಿ ತಪ್ಪಿಸಲಾಗುತ್ತಿದೆ ಎಂದು ಗಾಲಿ ಜನಾರ್ದನ ರೆಡ್ಡಿ ಭಾರೀ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಕರಣ ಬಳ್ಳಾರಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.