AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟೂರೇಶ್ವರ ಜಾತ್ರೆಗೆ ಅದ್ಧೂರಿ ಚಾಲನೆ: ಬಾಳೆ ಹಣ್ಣು ರಥಕ್ಕೆಸೆದು ಭಕ್ತಿ ಸಮರ್ಪಣೆ

ಬಳ್ಳಾರಿ: ಕಣ್ ಹಾಯಿಸಿದಲ್ಲೆಲ್ಲಾ ಭಕ್ತ ಸಾಗರ. ದೇಗುಲದಲ್ಲಿ ಭಕ್ತಿಯ ಝೇಂಕಾರ.. ಭಕ್ತರ ಹರ್ಷೋದ್ಗಾರ. ಕಿಕ್ಕಿರಿದು ಸೇರಿದ್ದ ಭಕ್ತರು ತೇರಿಗೆ ಹೂ ಹಣ್ಣು, ಉತ್ತುತ್ತಿ ಸಮರ್ಪಿಸ್ತಿದ್ರೆ, ರಥೋತ್ಸವ ಅದ್ಧೂರಿಯಾಗಿ ಜರುಗಿತ್ತು. ರಥೋತ್ಸವಕ್ಕೆ ಅದ್ಧೂರಿ ಚಾಲನೆ: ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಈ ರಥೋತ್ಸವವನ್ನ ಕಣ್ತುಂಬಿಕೊಳ್ಳಲು 2 ಕಣ್ಣು ಸಾಲುವುದಿಲ್ಲ. ಯಾಕಂದ್ರೆ, 5 ಲಕ್ಷಕ್ಕೂ ಅಧಿಕ ಭಕ್ತರು ಕೊಟ್ಟೂರೇಶ್ವರಗೆ ಆಗಮಿಸಿ ಪವಾಡ ಪುರುಷ ಗುರುಕೊಟ್ಟೂರೇಶ್ವರನ ಕೃಪೆಗೆ ಪಾತ್ರರಾದ್ರು. ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತಿಯೇ ಭಕ್ತರು ಕೊಟ್ಟೂರು […]

ಕೊಟ್ಟೂರೇಶ್ವರ ಜಾತ್ರೆಗೆ ಅದ್ಧೂರಿ ಚಾಲನೆ: ಬಾಳೆ ಹಣ್ಣು ರಥಕ್ಕೆಸೆದು ಭಕ್ತಿ ಸಮರ್ಪಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 19, 2020 | 8:16 AM

Share

ಬಳ್ಳಾರಿ: ಕಣ್ ಹಾಯಿಸಿದಲ್ಲೆಲ್ಲಾ ಭಕ್ತ ಸಾಗರ. ದೇಗುಲದಲ್ಲಿ ಭಕ್ತಿಯ ಝೇಂಕಾರ.. ಭಕ್ತರ ಹರ್ಷೋದ್ಗಾರ. ಕಿಕ್ಕಿರಿದು ಸೇರಿದ್ದ ಭಕ್ತರು ತೇರಿಗೆ ಹೂ ಹಣ್ಣು, ಉತ್ತುತ್ತಿ ಸಮರ್ಪಿಸ್ತಿದ್ರೆ, ರಥೋತ್ಸವ ಅದ್ಧೂರಿಯಾಗಿ ಜರುಗಿತ್ತು.

ರಥೋತ್ಸವಕ್ಕೆ ಅದ್ಧೂರಿ ಚಾಲನೆ: ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಈ ರಥೋತ್ಸವವನ್ನ ಕಣ್ತುಂಬಿಕೊಳ್ಳಲು 2 ಕಣ್ಣು ಸಾಲುವುದಿಲ್ಲ. ಯಾಕಂದ್ರೆ, 5 ಲಕ್ಷಕ್ಕೂ ಅಧಿಕ ಭಕ್ತರು ಕೊಟ್ಟೂರೇಶ್ವರಗೆ ಆಗಮಿಸಿ ಪವಾಡ ಪುರುಷ ಗುರುಕೊಟ್ಟೂರೇಶ್ವರನ ಕೃಪೆಗೆ ಪಾತ್ರರಾದ್ರು. ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತಿಯೇ ಭಕ್ತರು ಕೊಟ್ಟೂರು ದೊರೆಯೇ, ನಿನಗಾರು ಸರಿಯೇ, ಸರಿ ಸರಿ ಅಂದವರ ಹಲ್ಲುಮುರಿವೆ ಬಹುಪರಾಕ್ ಅಂತಾ ಘೋಷಣೆ ಕೂಗಿ ಭಕ್ತಿ ಸಮರ್ಪಿಸಿದ್ರು.

ಬೆಳ್ಳಿ ಪಲ್ಲಕ್ಕಿಯಲ್ಲಿ ಮೆರವಣಿಗೆ: ಇನ್ನು, ಪವಾಡಗಳ ಮೂಲಕ ಎಲ್ಲಾ ಭಕ್ತರ ಆರಾಧ್ಯ ದೈವರಾಗಿರುವ ಗುರು ಕೊಟ್ಟೂರೇಶ್ವರ ರಥೋತ್ಸವಕ್ಕಿಂತ ಮುಂಚೆಯೇ ಸ್ವಾಮಿಯ ಮೂರ್ತಿಯನ್ನ ಬೆಳ್ಳಿ ಪಲ್ಲಕ್ಕಿಯಲ್ಲಿ ಕೂಡಿಸಿ ಮೆರವಣಿಗೆ ಮಾಡಲಾಯ್ತು. ದಲಿತ ಮಹಿಳೆ ಆರತಿ ಮಾಡಿದ ಬಳಿಕ ಪಲ್ಲಕ್ಕಿ ಉತ್ಸವ ತೇರು ಎಳೆಯಿತು. ಆಗ ನಂದಿಕೋಲು, ಮತ್ತಿತರ ವಾದ್ಯಗಳು ರಥೋತ್ಸವಕ್ಕೆ ಮೆರುಗು ತಂದ್ವು. ಈ ವರ್ಷ ಕೂಡ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ಜಿಲ್ಲಾಡಳಿತ ರಥೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿತ್ತು.

ಭಕ್ತರಿಗೆ ಪ್ರಸಾದದ ವ್ಯವಸ್ಥೆ, ನೀರಿನ ವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಸಿಸಿ ಕ್ಯಾಮರಾ ಆಳವಡಿಸಲಾಗಿತ್ತು. ಶ್ರೀಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ಆಗಮಿಸಿದ್ದ ಲಕ್ಷಾಂತರ ಭಕ್ತರು ರಥೋತ್ಸವ ದರ್ಶನ ಪಡೆದ್ರು. ಬಾಳೆ ಹಣ್ಣುಗಳನ್ನ ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿ ಬೇಡಿಕೊಂಡ್ರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ