AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲ ಬೇಗೆಗೆ ಬಳ್ಳಾರಿ ಮಂದಿ ಹೈರಾಣ: ಜನರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ

ಬಳ್ಳಾರಿಯಲ್ಲಿ ಬೇಸಿಗೆಯ ಬಿಸಿಲು ಅತಿ ಬೇಗನೆ ಆವರಿಸಿದ್ದು, ತಾಪಮಾನ 38°C ತಲುಪಿದೆ. ತೀವ್ರ ಸೆಕೆ ಕಾರಣ ನಿರ್ಜಲೀಕರಣ, ಆಯಾಸದಂತಹ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಿದೆ. ಜನರು ತಂಪು ಪಾನೀಯಗಳ ಮೊರೆ ಹೋಗಿದ್ದು, ಅವುಗಳ ದರವೂ ಏರಿದೆ. ಸಂಚಾರ ಸಿಗ್ನಲ್‌ಗಳಲ್ಲಿ ನೆರಳಿನ ವ್ಯವಸ್ಥೆ, ನೀರಿನ ಕುಟೀರಗಳ ಸ್ಥಾಪನೆಗೆ ಸಾರ್ವಜನಿಕರ ಆಗ್ರಹ ಕೇಳಿಬಂದಿದೆ.

ಬಿಸಿಲ ಬೇಗೆಗೆ ಬಳ್ಳಾರಿ ಮಂದಿ ಹೈರಾಣ: ಜನರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ
ಸಾಂದರ್ಭಿಕ ಚಿತ್ರImage Credit source: Google
ವಿನಾಯಕ ಬಡಿಗೇರ್​
| Edited By: |

Updated on:Mar 04, 2026 | 6:55 PM

Share

ಬಳ್ಳಾರಿ, ಮಾರ್ಚ್​​ 04: ರಾಜ್ಯಾದ್ಯಂತ ಬೇಸಿಗೆಯ ಬಿಸಿ ಆರಂಭವಾಗಿದ್ದು, ಸೆಕೆಯ ವಾತಾವರಣ ಕಂಡುಬರುತ್ತಿದೆ. ಆದ್ರೆ ಗಣಿನಾಡು ಬಳ್ಳಾರಿಯ ಮಂದಿ ಮಾತ್ರ ಈಗಲೇ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಕಳೆದ 2-3 ದಿನಗಳಿಂದ ಬಳ್ಳಾರಿಯಲ್ಲಿ 36°, 37° ಮತ್ತು 38° ಸೆಲ್ಸಿಯಸ್ ವರಗೆ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೇ ಹವಾಮಾನ ಇಲಾಖೆ ಕೂಡ ಜಿಲ್ಲೆಯಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ವಾತಾವರಣದಲ್ಲಿ ಅತೀ ಹೆಚ್ಚು ಬಿಸಿ ಗಾಳಿ ಸಾಧ್ಯತೆ ಇದ್ದು, ಜನ ಜಾಗೃತಿಯಿಂದಿರುವಂತೆ ತಿಳಿಸಲಾಗಿದೆ.

ಆಸ್ಪತ್ರೆ ಸೇರುತ್ತಿರುವ ಮಂದಿ

ಇನ್ನು ಸೆಕೆ ತಾಳಲಾರದೆ ಜನ ತಂಪುನೀಯಗಳ ಮೊರೆ ಹೋಗುತ್ತಿದ್ದಾರೆ. ಎಳನೀರು, ಜ್ಯೂಸ್​​ನಂತಹ ಪೇಯಗಳ ಜೊತೆಗೆ ಕಲ್ಲಂಗಡಿ ತಿಂದು ಬಿಸಿಲ ಧಗೆಯಿಂದ ತಮ್ಮನ್ನ ತಾವು ಕಾಪಾಡಿಕೊಳ್ಳುತ್ತಿದ್ದಾರೆ. ಬಿಸಿಲಿನ ಶಾಖಕ್ಕೆ ನಿರ್ಜಲೀಕರಣ, ಕಣ್ಣು ಉರಿ, ಆಯಾಸ, ತೆಲೆ ನೋವು ಮುಂತಾದ ಕಾರಣಗಳಿಗೆ ಆಸ್ಪತ್ರೆಯತ್ತ ಮುಖ ಮಾಡುವವರ ಸಂಖ್ಯೆಯೂ ಹೆಚ್ಚಿದೆ.  ಜನ ಮನೆ ಬಿಟ್ಟು ಹೊರ ಬರಲು ಭಯ ಪಡುವ ಪರಿಸ್ಥಿತಿ ಉದ್ಭವಿಸಿದೆ. ಈಗಲೇ ಇಷ್ಟು ಸೆಕೆಯಾದರೆ ನಡು ಬೇಸಿಗೆಯಲ್ಲಿ ದೇವರೇ ನಮ್ಮನ್ನು ಕಾಪಾಡಬೇಕು. ಈಗಲೇ ಊಟ-ತಿಂಡಿ ಬಿಟ್ಟು ಕೇವಲ ತಂಪುಪಾನೀಯಗಳ ಸೇವಿಸಿ ಜೀವನ ಮಾಡುತ್ತಿದ್ದೇವೆ ಎಂದು ಜನರು ಅಲವತ್ತುಕೊಂಡಿದ್ದಾರೆ.

ಇದನ್ನೂ ಓದಿ: ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಈ ಹಣ್ಣುಗಳನ್ನು ಸೇವನೆ ಮಾಡಲೇಬೇಕು

ಟ್ರಾಫಿಕ್ ಸಿಗ್ನಲ್​​ಗಳ ಬಳಿ ನೆರಳಿಗೆ ಆಗ್ರಹ

ಬಿಸಿಲ ಬೇಗೆಯಿಂದ ವಾಹನ ಸವರಾರರನ್ನು ರಕ್ಷಿಸಲು ಜಿಲ್ಲಾಡಳಿತ ಟ್ರಾಫಿಕ್ ಸಿಗ್ನಲ್​​ಗಳ ಬಳಿ ನೆರಳಿಗೆ ವ್ಯವಸ್ಥೆ ಮಾಡಿಕೊಡಬೇಕು. ಅಲ್ಲಲ್ಲಿ ನೀರಿನ ಕುಟೀರಗಳನ್ನ ಸ್ಥಾಪಿಸಿ ಜನರ ದಾಹ ತೀರಿಸುವ ಕೆಲಸ ಮಾಡಬೇಕು ಎನ್ನುವುದು ಸಾರ್ವಜನಿಕರ ಆಗ್ರಹ. ಬಿಸಿಲಿನ ಕಾರಣ ಜನ ಹೆಚ್ಚಾಗಿ ತಂಪು ಪಾನೀಯಗಳ ಮೊರೆ ಹೋಗ್ತಿರೋದ್ರಿಂದ ಇದನ್ನೇ ಬಂಡವಾಳ ಮಾಡಿಕೊಂಡ ವ್ಯಾಪಾರಿಗಳು ಅವುಗಳ ದರವನ್ನೂ ಏರಿಕೆ ಮಾಡಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ. ಸೆಕೆಗೆ ಹೈರಾಣಾಗಿರುವ ಗಣಿ ನಾಡಿನ ಮಂದಿ ಒಮ್ಮೆ ಮಳೆ ಬರಲಪ್ಪಾ ಎಂದು ಪ್ರಾರ್ಥನೆ ಕೂಡ ಮಾಡುತ್ತಿದ್ದಾರೆ. ಈ ಹಿಂದೆ ಯಾವ ವರ್ಷವು ಇಷ್ಟು ಪ್ರಮಾಣದ ಬಿಸಿಲು ಇರಲಿಲ್ಲ. ಈ ವರ್ಷ ಮಾತ್ರ ಅಬ್ಬಾ ಅದೆಂತಾ ಸೆಕೆ ಎಂಬು ಉದ್ಗಾರದ ಮಾತುಗಳೂ ಕೇಳಿಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:55 pm, Wed, 4 March 26

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು