AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಎನ್​ಐಎ ದಾಳಿಯಲ್ಲಿ ಇಬ್ಬರ ಬಂಧನ ಕೇಸ್​: ಸಂಚಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶಂಕಿತ ಉಗ್ರರು

ಬಳ್ಳಾರಿಯಲ್ಲಿ ಎನ್​ಐಎ ದಾಳಿ ನಡೆಸಿ ಇಬ್ಬರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರು ನಡೆಸಿದ್ದ ಸಂಚಿನ ಬಗ್ಗೆ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ನವೆಂಬರ್ 22ರಂದು ರಸಗೊಬ್ಬರ ಮಳಿಗೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸಲು 1 ಕೆಜಿ ಅಮೋನಿಯಂ ನೈಟ್ರೇಟ್ ಖರೀದಿಸಿದ್ದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಬಳ್ಳಾರಿ: ಎನ್​ಐಎ ದಾಳಿಯಲ್ಲಿ ಇಬ್ಬರ ಬಂಧನ ಕೇಸ್​: ಸಂಚಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶಂಕಿತ ಉಗ್ರರು
ಪ್ರಾತಿನಿಧಿಕ ಚಿತ್ರ
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 23, 2023 | 3:38 PM

Share

ಬಳ್ಳಾರಿ, ಡಿಸೆಂಬರ್​ 23: ನಗರದಲ್ಲಿ ಎನ್​ಐಎ (NIA) ದಾಳಿ ನಡೆಸಿ ಇಬ್ಬರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ಮೂಲಗಳಿಂದ ಶಂಕಿತ ಉಗ್ರರು ನಡೆಸಿದ್ದ ಸಂಚಿನ ಬಗ್ಗೆ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ನವೆಂಬರ್ 22ರಂದು ರಸಗೊಬ್ಬರ ಮಳಿಗೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸಲು 1 ಕೆಜಿ ಅಮೋನಿಯಂ ನೈಟ್ರೇಟ್ ಖರೀದಿಸಿದ್ದರು. ಶಂಕಿತ ಉಗ್ರರು ಅಂಗಡಿಗೆ ಬಂದಿದ್ದ ಬಗ್ಗೆ ಮಾಲೀಕರಿಗೆ ಮಾಹಿತಿಯಿಲ್ಲ.

ಬಳ್ಳಾರಿಯಲ್ಲಿ ಒಂಬತ್ತು ಕಡೆಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಮೊಹಮ್ಮದ್ ಸುಲೇಮಾನ್, ಸೈಯದ್ ಸಮೀರ್​ನ್ನು NIA ಬಂಧಿಸಿತ್ತು.

ನಕಲಿ ನೋಟು ಪ್ರೀಂಟ್ ಜಾಲ: ಓರ್ವ ಬಂಧನ

ದೇಶಾದ್ಯಾಂತ ಸಂಚಲನ ಮೂಡಿಸಿರು ನಕಲಿ ನೋಟ್ ಮುದ್ರಣ ಮತ್ತು ಚಲಾವಣೆ ಪ್ರಕರಣದಲ್ಲಿ ಎನ್ಐಎ ತಂಡ ವಿವಿಧ ರಾಜ್ಯದ ನಾಲ್ವರು ಮತ್ತು ಬಳ್ಳಾರಿಯ ಯುವಕನೊರ್ವನನ್ನು ಇತ್ತೇಚೆಗೆ ಬಂಧಿಸಿದ್ದರು. ಹಳೇ ನೋಟು ಬದಲಾಗಿ ಹೊಸ ನೋಟುಗಳ ಮುದ್ರಣ ಪ್ರಾರಂಭವಾದ ಬಳಿಕ ನಕಲಿ ನೋಟಿನ ಹಾವಳಿಗೆ ಕಡಿವಾಣ ಬಿದ್ದಿತ್ತು. ಆದರೆ, ಇದೀಗ ಎನ್ಐಎ ದೇಶದ ನಾಲ್ಕು ಪ್ರಮುಖ ರಾಜ್ಯಗಳ ಮೇಲೆ ದಾಳಿ ಮಾಡಿ ನಕಲಿ ನೋಟಿನ ದೊಡ್ಡ ಜಾಲವೊಂದನ್ನು ಪತ್ತೆ ಮಾಡಿತ್ತು.

ಇದನ್ನೂ ಓದಿ: ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ

ಉತ್ತರ ಪ್ರದೇಶದ ಮೂಲದ ಕಿಂಗ್ ಪಿನ್ ಗಳಾದ ರಾಹುಲ್ ತಾನಜಿ ಪಾಟೀಲ್, ಮಹಾರಾಷ್ಟ್ರದ ವಿವೇಕ್ ಠಾಕೂರು, ಶಿವು ಪಾಟೀಲ್, ಬಿಹಾರದ ಶಶಿಭೂಷಣ್ ಸೇರಿದಂತೆ ಬಳ್ಳಾರಿಯ 19 ವರ್ಷದ ಯುವಕ ಮಹೇಂದ್ರ ಅವರನ್ನು ಬಂಧಿಸಿದ್ದರು.

ಬಳ್ಳಾರಿಯ ಮಹೇಂದ್ರ ಮನೆಯಲ್ಲಿ ಐದು ನೂರು ಮುಖ ಬೆಲೆಯ ಅಚ್ಚಿನ ಮಾದರಿ ಮತ್ತು ಒಂದು ಪ್ರಿಂಟಿಂಗ್ ಮಿಷನ್ ಸೀಜ್ ಮಾಡಲಾಗಿತ್ತು. ಆದರೆ ಮಹೇಂದ್ರ ಕುಟುಂಬಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. 10ನೇ ತರಗತಿಯವರೆಗೂ ಆಂಧ್ರದಲ್ಲಿ ವ್ಯಾಸಂಗ ಮಾಡಿದ ಮಹೇಂದ್ರ ಕಳೆದೆರಡು ವರ್ಷದ ಹಿಂದೆ ಬಳ್ಳಾರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದನು. ಇವನಿಗೆ ಇಷ್ಟೆಲ್ಲ ಲಿಂಕ್ ಹೇಗೆ ಸಿಕ್ತು ಎನ್ನುವದೇ ದೊಡ್ಡ ಪ್ರಶ್ನೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:27 pm, Sat, 23 December 23

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು